ಹಬ್ಬಿದ ಪ್ರತಿಭಟನೆ ಕಿಚ್ಚು; ಶಾಸಕನ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ

Nov 18, 2018, 2:08 PM IST

ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ತಾವು ಬೆಳೆದ ಕಬ್ಬಿಗೆ ಯೋಗ್ಯ ದರ ನೀಡಬೇಕೆಂದು, ಹಳೆಯ ಬಾಕಿಯನ್ನು ಪಾವತಿಸಬೇಕೆಂದು ಆಗ್ರಹಿಸಿ ರೈತರು ಬೀದಿಗಿಳಿದಿದ್ದಾರೆ. ಇದೇ ಸಂದರ್ಭದಲ್ಲಿ, ಕಾಗವಾಡ ಶಾಸಕರೂ, ಕಾರ್ಖಾನೆ ಮಾಲೀಕರೂ ಆಗಿರುವ ಶ್ರೀಮಂತ ಪಾಟೀಲ್ ವಿರುದ್ಧ ರೈತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.