ರೇಣುಕಾಸ್ವಾಮಿ ಕೊಲೆ ಕೇಸ್: ಜೈಲಿಗೆ ತೆರಳಿ ನಟ ದರ್ಶನ್‌ಗೆ ಕೊಲ್ಲೂರು ಪ್ರಸಾದ ನೀಡಿದ ಪತ್ನಿ

Published : Jul 30, 2024, 07:17 AM ISTUpdated : Jul 31, 2024, 04:24 PM IST
ರೇಣುಕಾಸ್ವಾಮಿ ಕೊಲೆ ಕೇಸ್: ಜೈಲಿಗೆ ತೆರಳಿ ನಟ ದರ್ಶನ್‌ಗೆ ಕೊಲ್ಲೂರು ಪ್ರಸಾದ ನೀಡಿದ ಪತ್ನಿ

ಸಾರಾಂಶ

ಮೈದುನ ದಿನಕರ್‌ ತೂಗುದೀಪ, ಪುತ್ರ ವಿನೀಶ್‌ ಹಾಗೂ ಕೆಲ ಸ್ನೇಹಿತರೊಂದಿಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ ವಿಜಯಲಕ್ಷ್ಮಿ, ಪತಿ ದರ್ಶನ್ ಹಣೆಗೆ ಕುಂಕುಮ ಇರಿಸಿ ಲಡ್ಡು ಪ್ರಸಾದ ಹಾಗೂ ತೀರ್ಥ ನೀಡಿದರು. ಬಳಿಕ ತಾವು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಚಂಡಿಕಾ ಹೋಮ ನೆರವೇರಿಸಿದ ಬಗ್ಗೆ ಮಾಹಿತಿ ನೀಡಿದರು. 

ಬೆಂಗಳೂರು(ಜು.30):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮೀ ಸೋಮವಾರ ಭೇಟಿಯಾಗಿ ಕೊಲ್ಲೂರು ಮೂಕಾಂಬಿಕೆಯ ಪ್ರಸಾದ ನೀಡಿದ್ದಾರೆ.

ಮೈದುನ ದಿನಕರ್‌ ತೂಗುದೀಪ, ಪುತ್ರ ವಿನೀಶ್‌ ಹಾಗೂ ಕೆಲ ಸ್ನೇಹಿತರೊಂದಿಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ ವಿಜಯಲಕ್ಷ್ಮಿ, ಪತಿ ದರ್ಶನ್ ಹಣೆಗೆ ಕುಂಕುಮ ಇರಿಸಿ ಲಡ್ಡು ಪ್ರಸಾದ ಹಾಗೂ ತೀರ್ಥ ನೀಡಿದರು. ಬಳಿಕ ತಾವು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಚಂಡಿಕಾ ಹೋಮ ನೆರವೇರಿಸಿದ ಬಗ್ಗೆ ಮಾಹಿತಿ ನೀಡಿದರು. ಪ್ರಕರಣದ ಬಗೆಗಿನ ಮುಂದಿನ ಕಾನೂನು ಹೋರಾಟದ ಬಗ್ಗೆ ಕೆಲ ಕಾಲ ಚರ್ಚಿಸಿದರು ಎಂದು ತಿಳಿದು ಬಂದಿದೆ.

 

ಕೆಲ ದಿನಗಳ ಹಿಂದೆ ವಿಜಯಲಕ್ಷ್ಮೀ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಚಂಡಿಕಾ ಹೋಮ ನೆರವೇರಿಸಿದ್ದರು. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ದರ್ಶನ್‌ರ ಒಳಿತಿಗೆ ಪ್ರಾರ್ಥಿಸಿದ್ದರು. ಇದೀಗ ಕೊಲ್ಲೂರಿನಿಂದ ವಾಪಾಸ್‌ ಆದ ಬಳಿಕ ಜೈಲಿಗೆ ತೆರಳಿ ಪ್ರಸಾದ ನೀಡಿದ್ದಾರೆ.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು