ಗವಿಮಠ ಶ್ರೀಗಳ ಪಾದುಕೆ ತಲೆ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ವಿನಯ ಗುರೂಜಿ

Published : Aug 31, 2021, 04:01 PM IST
ಗವಿಮಠ ಶ್ರೀಗಳ ಪಾದುಕೆ ತಲೆ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ವಿನಯ ಗುರೂಜಿ

ಸಾರಾಂಶ

ಅವಧೂತ ವಿನಯ ಗುರೂಜಿ ಅವರು ಸೋಮವಾರ ಗವಿಮಠಕ್ಕೆ ಭೇಟಿ   ಭೇಟಿ ನೀಡಿದ ವೇಳೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಪಾದುಕೆಗಳನ್ನು ತಮ್ಮ ತಲೆಯ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ಗುರೂಜಿ

 ಕೊಪ್ಪಳ (ಆ.31):  ಅವಧೂತ ವಿನಯ ಗುರೂಜಿ ಅವರು ಸೋಮವಾರ ಗವಿಮಠಕ್ಕೆ ಭೇಟಿ ನೀಡಿದ ವೇಳೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಪಾದುಕೆಗಳನ್ನು ತಮ್ಮ ತಲೆಯ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದರು.

ಕರ್ತೃ ಗದ್ದುಗೆಗೆ ಬಿಲ್ವಾರ್ಚನೆಯ ಪೂಜೆ ನೆರವೇರಿಸಿ, ಸುಮಾರು ಹೊತ್ತು ಕರ್ತೃ ಗದ್ದುಗೆಯ ಪಕ್ಕದಲ್ಲಿಯೇ ಕುಳಿತು ಧ್ಯಾನ ಮಾಡಿದರು.

ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ನೀಡಿ: ವಿನಯ್‌ ಗುರೂಜಿ

ಬಳಿಕ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಭಕ್ತರಿಗೆ ದರ್ಶನ ನೀಡುತ್ತಿದ್ದ ಸ್ಥಳಕ್ಕೆ ಹೋಗಿ, ಅಲ್ಲಿ ಏಕಾಏಕಿ ಗವಿಮಠ ಶ್ರೀಗಳ ಪಾದುಕೆಗಳನ್ನು ತಲೆಯ ಮೇಲಿಟ್ಟುಕೊಂಡು, ಕೆಲಹೊತ್ತು ಧ್ಯಾನ ಮಾಡಿದರು.

ಗವಿಮಠ ಶ್ರೀಗಳು ಬೇಡವೆನ್ನುತ್ತಿರುವಾಗಲೇ ಅವರು ಪಾದುಕೆಗಳನ್ನು ತೆಗೆದುಕೊಂಡು ತಲೆಯ ಮೇಲೆ ಇಟ್ಟುಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. ಇದಾದ ಮೇಲೆ ಶ್ರೀಗಳೊಂದಿಗೆ ಕುಶಲೋಪರಿ ಮಾತುಗಳನ್ನಾಡಿದ್ದಾರೆ.

PREV
click me!

Recommended Stories

ಮೀಸಲಾತಿ ವಿಚಾರದಲ್ಲಿ ಸರ್ಕಾರಗಳ ಬೇಜವಾಬ್ದಾರಿ ಸಲ್ಲದು: ವಿ.ಎಸ್.ಉಗ್ರಪ್ಪ ಅಸಮಾಧಾನ
ಕೊಂಕಣ ರೈಲ್ವೆಯ ಮೂಲ್ಕಿ ರೈಲು ನಿಲ್ದಾಣದ ಬಹುದೊಡ್ಡ ಬದಲಾವಣೆ, ಬಹುವರ್ಷದ ಪ್ರಯಾಣಿಕರ ಬಹುದಿನಗಳ ಕನಸು ನನಸು