ವಿನಯ್‌ ಕುಲಕರ್ಣಿಗೆ ಇನ್ನೂ 14 ದಿನ ಜೈಲೇ ಗತಿ

Kannadaprabha News   | Asianet News
Published : Feb 05, 2021, 02:40 PM ISTUpdated : Feb 05, 2021, 03:16 PM IST
ವಿನಯ್‌ ಕುಲಕರ್ಣಿಗೆ ಇನ್ನೂ 14 ದಿನ ಜೈಲೇ ಗತಿ

ಸಾರಾಂಶ

ಯೋಗೀಶಗೌಡ ಕೊಲೆ ಪ್ರಕರಣ| ವಿನಯ್‌ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ| ವಿನಯ್‌ ಬಂಧನವಾಗಿ 90 ದಿನಗಳಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಗಳ ಪಟ್ಟಿ ಸಲ್ಲಿಕೆ| 

ಧಾರವಾಡ(ಫೆ.05):  ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿಯೇ ಇರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಿಸಿ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಆದೇಶಿಸಿದೆ. 

ನ.5ರಂದು ಸಿಬಿಐ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದ ವಿನಯ್‌, ನ್ಯಾಯಾಲಯದ ಆದೇಶದಂತೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಫೆ.4ರಂದು ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿನಯ ಕುಲಕರ್ಣಿ ಸೇರಿದಂತೆ ಅವರ ಮಾವ ಚಂದ್ರಶೇಖರ ಇಂಡಿ ಅವರಿಗೂ 14 ದಿನಗಳ ಅಂದರೆ ಫೆ.19ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ್ದಾರೆ.

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ: ಬಯಲಾದವು ಸತ್ಯಗಳು

ವಿನಯ್‌ ಬಂಧನವಾಗಿ 90 ದಿನಗಳಾದ ಹಿನ್ನೆಲೆಯಲ್ಲಿ ಬುಧವಾರವಷ್ಟೇ ಅವರ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಗಳ ಪಟ್ಟಿ ಸಲ್ಲಿಸಲಾಗಿತ್ತು.
 

PREV
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!