Violation of Code of Conduct : ಕಾಂಗ್ರೆಸ್ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲೆ

By Kannadaprabha NewsFirst Published Dec 4, 2021, 6:56 AM IST
Highlights
  •  ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಯತ್ನ
  • ಸ್ಥಳೀಯ ಕಾಂಗ್ರೆಸ್‌ ಶಾಸಕರಿಂದ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪ

ಬಂಗಾರಪೇಟೆ (ಡಿ.04):  ವಿಧಾನಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಸ್ಥಳೀಯ ಕಾಂಗ್ರೆಸ್‌ ಶಾಸಕರು (Congress MLA) ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ನವೆಂಬರ್‌ 27ರಂದು ಪಟ್ಟಣದ ಎಸ್‌.ಎನ್‌.ರೆಸಾರ್ಟ್‌ನಲ್ಲಿ ಎಂಎಲ್‌ಸಿ ಚುನಾವಣೆ  ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅನಿಲ್‌ ಕುಮಾರ್‌ ಪರವಾಗಿ ಪ್ರಚಾರ ಸಭೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ (SN Narayana swamy) ತಮ್ಮ ಭಾಷಣದಲ್ಲಿ ಗ್ರಾಪಂ ಸದಸ್ಯರು ಯಾರೂ ಬಿಜೆಪಿ (BJP) ಅಭ್ಯರ್ಥಿಯ ಹಣಕ್ಕೆ ಬೆರಗಾಗಿ ಮತ ಹಾಕಬೇಡಿ, ನೀವು ಬಿಜೆಪಿಗೆ ಮತ ಹಾಕಿದರೆ ನನಗೆ ಎಲ್ಲ ಗೊತ್ತಾಗುತ್ತದೆ. ಮತದಾನದ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಗಳನ್ನು ಅಳವಡಿಸಲಾಗುವುದು. ನೀವು ಯಾರಿಗೆ ಮತ ಹಾಕಲಾಗಿದೆ ಎಂದು ಅದರ ಮೂಲಕ ತಿಳಿಯಲಿದೆ. ಆದ್ದರಿಂದ ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ಬೆದರಿಕೆ ಹಾಕಿದರು.

ಅಲ್ಲದೆ ಈ ಹಿಂದೆ ನಡೆದ ಗ್ರಾಪಂ ಚುನಾವಣೆಗಳಲ್ಲಿ (Grama Panchayat Election)  ಸಹ ಯಾವ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಮೋಸ ಮಾಡಿದರು ಎಂಬುದು ನನ್ನ ಬಳಿ ಆದಾರವಿದೆ. ಅಧಿಕಾರಿಗಳು ನನ್ನ ಮಾತು ಕೇಳುವರು ಅವರ ಮೂಲಕ ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವೆ ಎಂದು ಬ್ಲಾಕ್‌ ಮೇಲ್‌ ಮಾಡುವ ರೀತಿ ಗ್ರಾಪಂಃ ಸದಸ್ಯರಿಗೆ ಎಚ್ಚರಿಕೆ ನೀಡಿದ್ದ ಭಾಷಣದ ವಿಡಿಯೋ ಎಲ್ಲಾ ಕಡೆ ವೈರಲ್‌  ಆಗಿತ್ತು.

ಈ ಹಿನ್ನೆಲೆಯಲ್ಲಿ ಶಾಸಕರ(MLA) ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿತ್ತು. ಪುರಸಭೆ ಮುಖ್ಯಾಧಿಕಾರಿ ಯಶವಂತ್‌ ಕುಮಾರ್‌ ನೀಡಿದ ದೂರಿನ ಮೇರೆಗೆ ಸ್ಥಳಿಯ ಪೊಲೀಸ್‌ ಠಾಣೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಪರ ಪ್ರಚಾರ : 

ವಿಧಾನ ಪರಿಷತ್‌ ಚುನಾವಣೆ(Vidhan Parishat Election) ಹಿನ್ನೆಲೆ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಬಿರುಸಿನ ಚರ್ಚೆಗಳು ನಡೆದಿರುವ ಮಧ್ಯೆಯೇ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ(NH Konareddy) ಕಾಂಗ್ರೆಸ್‌ ಪರ ಪ್ರಚಾರಕ್ಕಿಳಿದಿದ್ದಾರೆ.

ಅತ್ತ ಮೈತ್ರಿ(Alliance) ವಿಷಯವಾಗಿ ಇತ್ತೀಚೆಗೆ ಪ್ರಧಾನಿ ಮೋದಿ(Narendra Modi) ಹಾಗೂ ಮಾಜಿ ಪ್ರಧಾನಿ ದೇವೇಗೌಡರು(HD Devegowda) ಪರಸ್ಪರ ಚರ್ಚೆ ನಡೆಸಿದ್ದರು. ಇತ್ತ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ(BS Yediyurappa) ಹಾಗೂ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ನಡುವೆಯೂ ಮಾತುಕತೆಯ ಪ್ರಸ್ತಾವನೆ ಇದೆ. ಬಹುತೇಕ ಮೈತ್ರಿ ವಿಷಯ ಅಂತಿಮ ರೂಪ ಪಡೆದಿದೆ. ಇನ್ನೆರಡು ದಿನಗಳಲ್ಲಿ ಮೈತ್ರಿ ಆಗಿರುವ ಸುದ್ದಿ ಹೊರಬರುವ ಸಾಧ್ಯತೆಯೂ ಇದೆ. ಆದರೆ, ಅವಿಭಜಿತ ಧಾರವಾಡ(Dharwad) ಜಿಲ್ಲೆಯಲ್ಲಿ ಪರಿಷತ್‌ ಚುನಾವಣೆಯಲ್ಲಿ ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಕಾಂಗ್ರೆಸ್‌(Congress) ಅಭ್ಯರ್ಥಿ ಸಲೀಂ ಅಹ್ಮದ(Saleem Ahmed) ಪರವಾಗಿ ಪ್ರಚಾರವನ್ನೂ ಶುರು ಮಾಡಿದ್ದಾರೆ.

Karnataka Politics: ಸಿಎಂ ಬದಲಾವಣೆ ಬಿಜೆಪಿ ಜನ್ಮ ನಕ್ಷತ್ರದಲ್ಲಿದೆ: ಬಿ.ಕೆ.ಹರಿಪ್ರಸಾದ್‌

ಕಳೆದ ಒಂದು ವಾರದಿಂದ ಸಣ್ಣದಾಗಿ ಅಲ್ಲಲ್ಲಿ ಪ್ರಚಾರ(Campaign) ಮಾಡುತ್ತಿದ್ದ ಕೋನರಡ್ಡಿ ಇದೀಗ ಬಹಿರಂಗವಾಗಿ ಸಲೀಂ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ತಾವೇ ಅಭ್ಯರ್ಥಿಯೆಂಬಂತೆ ಬೆಳಗ್ಗೆಯಿಂದ ರಾತ್ರಿಯವರೆಗೂ ನವಲಗುಂದ, ನರಗುಂದ ಕ್ಷೇತ್ರಗಳಲ್ಲಿ ಸಂಚರಿಸುತ್ತಾ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ನವಲಗುಂದ ಕ್ಷೇತ್ರದ ಪ್ರತಿ ಹಳ್ಳಿಹಳ್ಳಿಗೂ ಕಾಂಗ್ರೆಸ್‌ ಮುಖಂಡರಾದ ವಿನೋದ ಅಸೂಟಿ ಸೇರಿದಂತೆ ಮತ್ತಿತರರೊಂದಿಗೆ ಸಂಚರಿಸುತ್ತಾ ಕೋನರಡ್ಡಿ ಪ್ರಚಾರ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ಸೇರ್ತಾರಾ?: ಜೆಡಿಎಸ್‌ಗೆ(JDS) ಇಲ್ಲಿ ಭವಿಷ್ಯವಿಲ್ಲ. ಹೀಗಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಜತೆಗೂ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ ಎಂಬ ಮಾತು ಈ ಹಿಂದೆ ಹಬ್ಬಿತ್ತು. ಅವರು ಈ ವಿಷಯ ಅಲ್ಲಗಳೆಯದಿರಲಿಲ್ಲ. ಜತೆಗೆ ಒಪ್ಪಿಕೊಂಡಿರಲೂ ಇಲ್ಲ. ಹೀಗಾಗಿ ಇದು ಭಾರೀ ಚರ್ಚೆಗೆ ಗ್ರಾಸವನ್ನುಂಟು ಮಾಡಿತ್ತು.

ಇದೀಗ ಅತ್ತ ಬಿಜೆಪಿಯತ್ತ(BJP) ರಾಜ್ಯ ಘಟಕ ಒಲವು ತೋರಿಸುತ್ತಿದ್ದರೆ, ಇತ್ತ ಅದಕ್ಕೆ ವಿರುದ್ಧವಾಗಿ ಬಹಿರಂಗವಾಗಿ ಕಾಂಗ್ರೆಸ್‌ಗೆ ಕೋನರಡ್ಡಿ ಬೆಂಬಲಿಸಿದ್ದಾರೆ. ಇದು ಕೋನರಡ್ಡಿ ಚಿತ್ತ ಕಾಂಗ್ರೆಸ್‌ನತ್ತ ತಿರುಗಿದೆ ಎಂಬ ಸುದ್ದಿಗೆ ಪುಷ್ಟಿನೀಡಿದಂತಾಗಿದೆ. ಇದು ಜೆಡಿಎಸ್‌ ಕಾರ್ಯಕರ್ತರಲ್ಲೇ ಗೊಂದಲಕ್ಕೆ ಕಾರಣವಾಗಿದೆ.

ಜಾತ್ಯಾತೀತ ನಿಲುವು ನನ್ನದು. ಹೀಗಾಗಿ ಕಾಂಗ್ರೆಸ್‌ನ್ನು ಬೆಂಬಲಿಸಿದ್ದೇನೆ. ಇನ್ನೂ ರಾಜ್ಯ ಘಟಕ ಮೈತ್ರಿ ಮಾಡಿಕೊಂಡಿಲ್ಲ. ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ನಾನು ಪ್ರಚಾರ ಮಾಡುತ್ತಿದ್ದೇನೆ ಅಷ್ಟೇ ಅಂತ ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ತಿಳಿಸಿದ್ದಾರೆ. 

click me!