ಅಕಾಲಿಕ ಮಳೆ : ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು

Published : Jan 29, 2019, 11:24 AM IST
ಅಕಾಲಿಕ ಮಳೆ : ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು

ಸಾರಾಂಶ

ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮನಾ ಇಲಾಖೆ ಸೂಚಿಸಿದಂತೆ ಕೊಪ್ಪಳದಲ್ಲಿ ಅಕಾಲಿಕವಾಗಿ ಸುರಿದ ಮಳೆಗೆ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. 

ಕುಷ್ಟಗಿ: ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುಮಾರು ಒಂದು ಗಂಟೆಗಳ ಕಾಲ ಬಿದ್ದ ಅಕಾಲಿಕ ಮಳೆಯಿಂದ ಚರಂಡಿಗಳು ಭರ್ತಿಯಾಗಿ ಅಂಗಡಿಗಳಿಗೆ ನೀರು ನುಗ್ಗಿದ ಘಟನೆ ನಡೆದಿದೆ. 

ಇಲ್ಲಿಯ ಮಾರುತಿ ವೃತ್ತದ ಬಳಿ ಇರುವ ದೇಸಾಯಿ ಕಾಂಪ್ಲೆಕ್ಸ್ ಕೆಳ ಮಹಡಿಯ ಕೆಲವು ಅಂಗಡಿಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಅಂಗಡಿಗಳಲ್ಲಿನ ಸಾಮಗ್ರಿಗಳು ಹಾಳಾಗಿವೆ. 

ಅಂಗಡಿಗಳಿಗೆ ನುಗ್ಗಿದ್ದ ಮಳೆ ನೀರಿನ ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಯಂತ್ರದ ಸಹಾಯದಿಂದ ನೀರು ಮೇಲೆತ್ತಿದ ಬಳಿಕ ಬೆಲೆ ಬಾಳುವ ವಸ್ತುಗಳನ್ನು ರಕ್ಷಿಸಿದ್ದಾರೆ. 

PREV
click me!

Recommended Stories

Koppal: ಕಾಂಗ್ರೆಸ್‌ಗೆ ಟಕ್ಕರ್‌ ಕೊಟ್ಟು ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಬೆಂಬಲಿತರು
ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ ಮೇನಲ್ಲಿ ಅಂತ್ಯ, 3 ರಾಜ್ಯಗಳಿಂದ 54 ಕೋಟಿ ವೆಚ್ಚ, ಕರ್ನಾಟಕದ ಪಾಲೆಷ್ಟು?