ಮತ್ತೆ ಚಂಡಮಾರುತ, ರಾಜ್ಯದ ಈ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆ

Published : Dec 02, 2019, 11:03 PM ISTUpdated : Dec 02, 2019, 11:09 PM IST
ಮತ್ತೆ ಚಂಡಮಾರುತ, ರಾಜ್ಯದ ಈ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆ

ಸಾರಾಂಶ

ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ/ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ/ ಮೀನುಗಾರರಿಗೆ ಎಚ್ಚರಿಕೆ/ ಗಡಿ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ

ಮಂಗಳೂರು(ಡಿ. 02)  ಶ್ರೀಲಂಕಾ ದಕ್ಷಿಣ ಭಾಗದಲ್ಲಿ ಚಂಡಮಾರುತದ ಸಾಧ್ಯತೆ ಕಂಡುಬಂದಿದೆ. ಡಿ.6ರವರೆಗೆ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು ಇನ್ನು ಎರಡು ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಕಡಲಿಗೆ ತೆರಳಿದ ದೋಣಿಗಳು ವಾಪಾಸ್ ಆಗಲು ಸಂದೇಶ ರವಾನಿಸಲಾಗಿದೆ. ಸಮುದ್ರ ತೀರದ ಜನರಿಗೂ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.  ದ.ಕ ಜಿಲ್ಲಾಡಳಿತ ಮತ್ತು ಮೀನುಗಾರಿಕಾ ಇಲಾಖೆಯಿಂದ ಎಚ್ಚರಿಕೆ ನೀಡಿದೆ.

ಮಳೆಯಿಂದ ಈ ಸಾರಿ ಹಾನಿಯಾದ ಬೆಳೆ ಲೆಕ್ಕ.. ಅಬ್ಬಬ್ಬಾ!

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಮತ್ತು ಕೊಡಗು ಜಿಲ್ಲೆಗಳ ಹೆಚ್ಚಿನ ಕಡೆಗಳಲ್ಲಿ ಮತ್ತೆ ಮಳೆಯಾಗಿತ್ತು.

ಕಾಫಿಗೆ ಆಪತ್ತು: ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಕೊಯ್ಲು ನಡೆಯುತ್ತಿದ್ದು ಬೆಳೆಗಾರರು ಕೊಯ್ದು ಕಾಫಿಯನ್ನು ಒಣಗಿಸಲು ಪರದಾಡುವಂತಾಗಿದೆ. ಬಿಸಿಲಿನ ಅಭಾವದಿಂದ ಒಣಗಿಸುವುದು ಹೇಗೆಂಬ ಬೆಳೆಗಾರರ ಚಿಂತೆ ಈ ಮಳೆಯಿಂದ ಇಮ್ಮಡಿಯಾಗಿದೆ.

ಕಾಫಿ, ಕರಿಮೆಣಸು ಸೇರಿದಂತೆ ವಾಣಿಜ್ಯ ಬೆಳೆಗಳು ಆಗಲೇ ಮಳೆ ಅವಾಂತರಕ್ಕೆ ಸಿಲುಕಿದ್ದವು. ಈಗ ಅಳಿದುಳಿದ ಬೆಳೆ ಸಹ ನಷ್ಟವಾಗುವ ಭೀತಿ ಎದುರಾಗಿದೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!