ಸೋಲಾರ್ ವಿದ್ಯುತ್ ಸ್ಪರ್ಷಿಸಿ ಕಾಡಾನೆ ಮರಿ ಸಾವು

Suvarna News   | Asianet News
Published : Jul 18, 2021, 03:46 PM IST
ಸೋಲಾರ್ ವಿದ್ಯುತ್ ಸ್ಪರ್ಷಿಸಿ ಕಾಡಾನೆ ಮರಿ ಸಾವು

ಸಾರಾಂಶ

ಸೋಲಾರ್ ವಿದ್ಯುತ್ ತಂತಿ ಸ್ಪರ್ಷಿಸಿ‌ ಆನೆ ಮರಿ‌ಯೊಂದು ಸಾವು ಕೊಡಗು ಜಿಲ್ಲೆ ಸೋಮವಾರ ಪೇಟೆಯಲ್ಲಿ ಘಟನೆ ಶುಂಠಿ ರಕ್ಷಣೆಗೆ ಅಳವಡಿಸಿದ್ದ ಸೋಲಾರ್ ವಿದ್ಯುತ್

 ಕೊಡಗು (ಜು.18): ಸೋಲಾರ್ ವಿದ್ಯುತ್ ತಂತಿ ಸ್ಪರ್ಷಿಸಿ‌ ಆನೆ ಮರಿ‌ಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿಂದು ನಡೆದಿದೆ. 

ಅಂದಾಜು ಎಂಟು ವರ್ಷದ ಗಂಡಾನೆ ಮರಿ ಸೋಮವಾರಪೇಟೆ ತಾಲೂಕಿನ ಅರೆಯೂರು ಮೋರಿಕಲ್ಲು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ವಿದ್ಯುತ್ ಸ್ಪರ್ಷಿಸಿ‌ ಸಾವನ್ನಪ್ಪಿದೆ. 

ಗುಂಡ್ಲು​ಪೇಟೆ ಬಳಿ ವಿದ್ಯುತ್‌ ಶಾಕ್‌ಗೆ ಬಲಿಯಾದ ಹೆಣ್ಣಾನೆ

ಇಲ್ಲಿನ ಅವಿನಾಶ್ ಎಂಬುವವರು ತಮ್ಮ ಶುಂಠಿ ತೋಟಕ್ಕೆ ಅಳವಡಿಸಲಾಗಿದ್ದ ಸೋಲಾರ್ ಬೇಲಿ ಸ್ಪರ್ಷಿಸಿ‌ ಆನೆ ಮರಿ ಸಾವನ್ನಪ್ಪಿದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಾಡಾನೆಗಳು ಈ ರೀತಿಯ ದುರಂತದಿಂದ ಸಾವನ್ನಪ್ಪುತ್ತಿವೆ. 

ಮಳೆಗಾಲವಾದ ಹಿನ್ನೆಲೆ ವಿದ್ಯುತ್ ಆಘಾತ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗಿ ಆನೆ ಮರಿ ಸಾವನ್ನಪ್ಪಿದೆ. 

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV
click me!

Recommended Stories

ಬಸ್‌ನಲ್ಲಿ ನಿದ್ದೆ ಮಾಡ್ತಿದ್ದ ಯುವತಿಗೆ ಕಾಮುಕನ ಕಿರುಕುಳ; ಗಟ್ಟಿಗಿತ್ತಿ ಹುಡುಗಿಯ ತಕ್ಕ ಶಾಸ್ತಿ ವಿಡಿಯೋ ವೈರಲ್!
'ಬೆಂಗಳೂರು ಬಿಡ್ತಿರೋದು ಬೆಸ್ಟ್‌ ನಿರ್ಧಾರ..' ಹೈದ್ರಾಬಾದ್‌ ಯುವತಿಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗೆ ಸಿಡಿದೆದ್ದ ಕನ್ನಡಿಗರು