ಹಾಸನದಲ್ಲಿ ನಿಲ್ಲದ ಕಾಡಾನೆಗಳ ಉಪಟಳ: ಕಾಫಿ ತೋಟದಲ್ಲಿ ಗಜಪಡೆ ಪರೇಡ್..!

Published : Jan 26, 2023, 12:54 PM IST
ಹಾಸನದಲ್ಲಿ ನಿಲ್ಲದ ಕಾಡಾನೆಗಳ ಉಪಟಳ: ಕಾಫಿ ತೋಟದಲ್ಲಿ ಗಜಪಡೆ ಪರೇಡ್..!

ಸಾರಾಂಶ

ಮೂರು ಮರಿಯಾನೆಗಳ ಜೊತೆ ಊರಿಂದ‌ ಊರಿಗೆ ಅಲೆಯುತ್ತಿರುವ ಗಜಪಡೆ. ಆನೆ ಹಿಂಡಿನಿಂದ ಯಾವುದೇ ಪ್ರಾಣ ಹಾನಿಯಾಗದಂತೆ ಆನೆ ಗುಂಪನ್ನು ಹಿಂಬಾಲಿಸುತ್ತಿರುವ ಎಲಿಫೆಂಟ್ ಟಾಸ್ಕ್ ಫೋರ್ಸ್ ಟೀಂ. 

ಹಾಸನ(ಜ.26):  ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಳೆಕೆರೆ ಗ್ರಾಮದ ಕಾಫಿ ತೋಟದಲ್ಲಿ 20 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದೆ.  ಮೂರು ಮರಿಯಾನೆಗಳ ಜೊತೆ ಗಜಪಡೆ ಊರಿಂದ‌ ಊರಿಗೆ ಅಲೆಯುತ್ತಿವೆ. ಆನೆ ಹಿಂಡಿನಿಂದ ಯಾವುದೇ ಪ್ರಾಣ ಹಾನಿಯಾಗದಂತೆ ಆನೆ ಗುಂಪನ್ನು ಎಲಿಫೆಂಟ್ ಟಾಸ್ಕ್ ಫೋರ್ಸ್ ಟೀಂ ಹಿಂಬಾಲಿಸುತ್ತಿದೆ. 

ಆನೆಗಳಿರುವ ಬಗ್ಗೆ ನಿರಂತರವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡುತ್ತಿದೆ. ಕಾಫಿ ಕೊಯ್ಲಿನ ಸಮಯದಲ್ಲಿ ಕಾಡಾನೆಗಳ ಹಿಂಡು ಜನರಲ್ಲಿ ಜೀವ ಭಯ ಸೃಷ್ಟಿಸಿದೆ. 

JDS TICKET: ಭವಾನಿ ರೇವಣ್ಣ ಶಾಸಕಿಯಾಗುವ ಆಸೆಗೆ ತಣ್ಣೀರು: ಟಿಕೆಟ್‌ ಕೊಡುವುದಿಲ್ಲವೆಂದ ಕುಮಾರಸ್ವಾಮಿ

ಕಾಡಾನೆ ಹಾವಳಿ ನಿಯಂತ್ರಣ ಮಾಡದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶವನ್ನ ಹೊರಹಾಕಿದ್ದಾರೆ. ಜನರಲ್ಲಿ ಜೀವ ಭಯ ಸೃಷ್ಟಿಮಾಡುತ್ತಿರುವ ಗಜಪಡೆ ಸ್ಥಳಾಂತರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. 

PREV
Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ