ಯುಗಾದಿ ಬಳಿಕ ಡಿಕೆಶಿಗೆ ಸಿಎಂ ಪಟ್ಟ? ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿ ಹೇಳಿಕೆ, ಸಿಎಂ ವಿರುದ್ಧ ಬೇಸರಗೊಂಡಿದ್ದೇಕೆ?

Kannadaprabha News   | Kannada Prabha
Published : Mar 13, 2026, 07:44 AM IST
Will DK Shivakumar Become CM After Ugadi MLA Iqbal Hussain s Big Claim

ಸಾರಾಂಶ

ಶಾಸಕ ಇಕ್ಬಾಲ್ ಹುಸೇನ್ ಅವರು ಯುಗಾದಿ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ರಾಮನಗರ ಕ್ಷೇತ್ರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಸಿಗದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೇಸರ

ರಾಮನಗರ (ಮಾ.13): ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಯುಗಾದಿ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಹಿ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು 6 ವರ್ಷಗಳನ್ನು ಪೂರೈಸಿರುವುದು ಸಂತಸ ತಂದಿದೆ. ನಮ್ಮ ನಾಯಕರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರಿಗೆ ಭವಿಷ್ಯವಿದ್ದು ಯುಗಾದಿ ನಂತರ ದೇವರು ಅವರಿಗೆ ಸಿಹಿಸುದ್ದಿ ಕೊಡುತ್ತಾನೆ ಎಂದರು.

ರಾಜ್ಯ ಬಜೆಟ್ ನಿರಾಸೆ ತರಿಸಿದೆ:

ಕ್ಷೇತ್ರದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ಆದರೆ, ಈ ಸಾಲಿನ ಬಜೆಟ್‌ ನಲ್ಲಿ ಅನುದಾನ ನೀಡದಿರುವುದು ನನಗೆ ಬಹಳ ನಿರಾಸೆಯಾಗಿದೆ ಇಕ್ಬಾಲ್‌ಹುಸೇನ್ ಬೇಸರ ವ್ಯಕ್ತಪಡಿಸಿದರು.

ಕೃಷಿ, ರೇಷ್ಮೆ ಇಲಾಖೆ, ಪ್ರವಾಸೋದ್ಯಮ ಅಭಿವೃದ್ಧಿ ಸೇರಿದಂತೆ ಭಕ್ಷಿಕೆರೆ ಹೊಡದು ಸೀರಳ್ಳ ನೆರೆಯಿಂದ ಉಂಟಾದ ಅನಾಹುತಗಳನ್ನು ಸರಿಪಡಿಸಲು ಅನುದಾನ ಕೊಡುವಂತೆ ನಾನೇ ಖುದ್ಧಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೆ. ಅವರು ಚಿಂತನೆ ನಡೆಸಿ ರಾಮನಗರಕ್ಕೆ ಅನುದಾನ ನೀಡುತ್ತಾರೆ ಎಂಬ ವಿಶ್ವಾಸ, ನಂಬಿಕೆ ಇಟ್ಟಿದ್ದೆ. ಆದರೆ, ಬಜೆಟ್‌ನಲ್ಲಿ ಅದು ಸಾಕಾರವಾಗದಿರುವುದು ಬೇಸರ ತರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ತಾಲ್ಲೂಕುಗಳು ಬೆಂಗಳೂರಿಗೆ ಸಮೀಪವಿದ್ದು, ಒಂದು ದಿನದ ಪ್ರವಾಸಿ ಸರ್‌ಕ್ಯೂಟ್ ಮಾಡಲು ಸಂಗಮ, ರೇವಣಸಿದ್ದೇಶ್ವರ ಬೆಟ್ಟ, ಜಾನಪದ ಲೋಕ, ಕಣ್ವ ಜಲಾಶಯ, ರಾಮದೇವರ ಬೆಟ್ಟ, ಸಾವನದುರ್ಗ, ಮಂಚನಬೆಲೆ ಜಲಾಶಯಗಳಂತಹ ಹಲವು ಇತಿಹಾಸವಿರುವ ತಾಣಗಳು ಪ್ರವಾಸಿಗರಿಗೆ ಹೇಳಿ ಮಾಡಿಸಿದಂತಿವೆ. ಈ ಸಾಲಿನ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದೆ. ಅದು ಕೂಡ ಸಾಕಾರವಾಗಿಲ್ಲ. ಅದಕ್ಕೆ ಆದ್ಯತೆ ಕೊಟ್ಟಿದ್ದರೆ ಪ್ರವಾಸಿ ತಾಣಗಳ ಅಭಿವೃದ್ದಿ ಜೊತೆಗೆ ರೆವಿನ್ಯೂ ಸಹ ಬರುತ್ತಿತ್ತು ಎಂದು ಇಕ್ಬಾಲ್ ಹುಸೇನ್ ಹೇಳಿದರು.

PREV
Read more Articles on
click me!

Recommended Stories

Sirsi Tragedy: ಪರೀಕ್ಷೆ ವೇಳೆ ಟಿವಿ ನೋಡಬೇಡ ಎಂದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು!
ಅಪ್ಪ ಇಲ್ಲದ ಕಂದನಿಗೆ ಅಮ್ಮನ ಆಸೆಯಂತೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ