ಗೌಡರ ಮಕ್ಕಳೇನೆಂದು ತೋರಿಸ್ತೀವಿ: ರೇವಣ್ಣ

Published : Aug 20, 2019, 10:51 AM IST
ಗೌಡರ ಮಕ್ಕಳೇನೆಂದು ತೋರಿಸ್ತೀವಿ: ರೇವಣ್ಣ

ಸಾರಾಂಶ

ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾನು ಈವರೆಗೆ ಹಾಸನ ಜಿಲ್ಲೆಯ ರಾಜಕೀಯ ಮಾಡುತ್ತಿದ್ದೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಜೊತೆ ರಾಜ್ಯದಲ್ಲಿ ರಾಜಕೀಯ ಮಾಡುತ್ತೇನೆ. ದೇವೇಗೌಡರ ಮಕ್ಕಳು ಏನು ಎಂಬುದನ್ನು ತೋರಿಸುತ್ತೇವೆ ಎಂದರು.

ಹಾಸನ(ಆ.20): ದೇವರ ಅನುಗ್ರಹದಿಂದ ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದರು. ನಾವೇನು ಸುಮ್ಮನೆ ಕೂರಲ್ಲ. ನಮಗೂ ಏನು ಮಾಡಬೇಕೆಂದು ಗೊತ್ತಿದೆ ಎಂದು ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈವರೆಗೆ ಹಾಸನ ಜಿಲ್ಲೆಯ ರಾಜಕೀಯ ಮಾಡುತ್ತಿದ್ದೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಜೊತೆ ರಾಜ್ಯದಲ್ಲಿ ರಾಜಕೀಯ ಮಾಡುತ್ತೇನೆ. ದೇವೇಗೌಡರ ಮಕ್ಕಳು ಏನು ಎಂಬುದನ್ನು ತೋರಿಸುತ್ತೇವೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗೌಡರ ಕುಟುಂಬ ಟಾರ್ಗೆಟ್‌!

ದೇವೇಗೌಡರು ಎಲ್ಲ ತನಿಖೆಯನ್ನೂ ಹೆದರಿಸಿ ಪ್ರಧಾನಿಯಾಗಿದ್ದರು. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಸೇರಿ ದೇವೇಗೌಡರ ಕುಟುಂಬ ಟಾರ್ಗೆಟ್‌ ಮಾಡಿದ್ದಾರೆ. ಎರಡೂ ಪಕ್ಷದವರೂ ಏನು ಮಾಡುತ್ತಾರೋ ಮಾಡಲಿ ಎಂದು ಸವಾಲು ಹಾಕಿದರು.

ಫೋನ್‌ ಕದ್ದಾಲಿಕೆ ಪ್ರಕರಣವೇ ಜೆಡಿಎಸ್‌ನ ಮುಂದಿನ ಭದ್ರ ಬುನಾದಿಯಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲೂ ನಡೆದ ಫೋನ್‌ ಟ್ಯಾಪಿಂಗ್‌ ಅನ್ನು ತನಿಖೆ ಮಾಡಲಿ ಎಂದು ಒತ್ತಾಯಿಸಿದರು.

'ಫೋನ್ ಟ್ಯಾಪಿಂಗ್ CBI ಗೆ ವಹಿಸಿರೋದು ಕಾಂಗ್ರೆಸ್, ಬಿಜೆಪಿ ಒಳ ಒಪ್ಪಂದ'

ಕೆಆರ್‌ ಪೇಟೆಗೆ ನಾರಾಯಣಗೌಡರಿಗೆ ಟಿಕೇಟ್‌ ಕೊಡಬೇಡ ಅವನು 420 ಎಂದು ದೇವೇಗೌಡರು ಹೇಳಿದ್ದರು. ಆದರೂ ಕುಮಾರಸ್ವಾಮಿ ವಿಶ್ವಾಸದಿಂದ ಕೆಆರ್‌ ಪೇಟೆಗೆ ಟಿಕೆಟ್‌ ನೀಡಿದ್ದರು ಎಂದರು.

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!