
ರಾಮನಗರ: ಬೆಂಗಳೂರು–ಮೈಸೂರು ಮಾರ್ಗದಲ್ಲಿ ಸಂಚರಿಸುವ ಪ್ರಸಿದ್ಧ ಒಡೆಯರ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಈಗಿನಿಂದ ರಾಮನಗರ ರೈಲು ನಿಲ್ದಾಣದಲ್ಲೂ ನಿಲುಗಡೆಗೊಳ್ಳಲಿದೆ. ಈ ಕುರಿತು ರೈಲ್ವೆ ಇಲಾಖೆ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದ್ದು, ಸ್ಥಳೀಯ ಪ್ರಯಾಣಿಕರಿಗೆ ಇದು ಬಹು ದಿನಗಳ ಬೇಡಿಕೆಗೆ ಸಿಕ್ಕ ಮಹತ್ವದ ಯಶಸ್ಸಾಗಿದೆ.
ಪ್ರತಿದಿನ ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಹೊರಡುವ ಈ ರೈಲು, ಸಂಜೆ 5.45ಕ್ಕೆ ಮೈಸೂರು ತಲುಪುತ್ತದೆ. ಸುಮಾರು 139 ಕಿಲೋಮೀಟರ್ ದೂರವನ್ನು ಕೇವಲ 2 ಗಂಟೆ 30 ನಿಮಿಷಗಳಲ್ಲಿ ಕ್ರಮಿಸುವ ಈ ರೈಲು ವೇಗ ಹಾಗೂ ಸಮಯಪಾಲನೆಗಾಗಿ ಪ್ರಸಿದ್ಧವಾಗಿದೆ. ಈವರೆಗೆ ಈ ರೈಲು ಕೇವಲ ಕೆಂಗೇರಿ ಮತ್ತು ಮಂಡ್ಯ ರೈಲು ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಹೊಂದಿತ್ತು. ಇದೀಗ ರಾಮನಗರವನ್ನು ಹೊಸ ನಿಲ್ದಾಣವಾಗಿ ಸೇರಿಸಿರುವುದರಿಂದ, ಆ ಭಾಗದ ಪ್ರಯಾಣಿಕರಿಗೆ ದೊಡ್ಡ ಅನುಕೂಲವಾಗಲಿದೆ.
ರಾಮನಗರದಲ್ಲಿ ರೈಲು ನಿಲುಗಡೆ ಕಲ್ಪಿಸಬೇಕೆಂಬ ಬೇಡಿಕೆಯನ್ನು ಹಲವಾರು ಜನಪ್ರತಿನಿಧಿಗಳು ಸರ್ಕಾರದ ಗಮನಕ್ಕೆ ತಂದಿದ್ದರು. ಸಂಸದ ಡಾ. ಸಿ.ಎನ್. ಮಂಜುನಾಥ್, ಶಾಸಕ ಇಕ್ಬಾಲ್ ಹುಸೇನ್ ಇವರು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಲ್ಲಿ ಮನವಿ ಸಲ್ಲಿಸಿದ್ದರು. ಇದರ ಜೊತೆಗೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಈ ಎಲ್ಲಾ ಪ್ರಯತ್ನಗಳ ಫಲವಾಗಿ ಇದೀಗ ರಾಮನಗರದಲ್ಲಿ ನಿಲುಗಡೆಗೆ ಅನುಮತಿ ದೊರೆತಿದೆ.
ಈ ಹೊಸ ನಿಲುಗಡೆಯಿಂದ ರಾಮನಗರ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಹಲವಾರು ಪ್ರಯೋಜನಗಳು ಲಭ್ಯವಾಗಲಿವೆ:
ಒಡೆಯರ್ ಎಕ್ಸ್ಪ್ರೆಸ್ ಜೊತೆಗೆ ಮೈಲಾಡತುರೈ ಎಕ್ಸ್ಪ್ರೆಸ್ ರೈಲುಗೂ ರಾಮನಗರದಲ್ಲಿ ನಿಲುಗಡೆ ಕಲ್ಪಿಸಬೇಕೆಂಬ ಬೇಡಿಕೆ ಕೂಡ ಮುಂದುವರಿದಿದೆ. ಈ ಬಗ್ಗೆ ರೈಲ್ವೆ ಇಲಾಖೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಮನಗರದಲ್ಲಿ ಒಡೆಯರ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ನಿಲುಗಡೆ ಅನುಮತಿ ದೊರೆತಿರುವುದು ಸ್ಥಳೀಯ ಜನರಿಗೆ ಮಹತ್ವದ ಸಾಧನೆಯಾಗಿದೆ. ಜನಪ್ರತಿನಿಧಿಗಳ ನಿರಂತರ ಪ್ರಯತ್ನ ಮತ್ತು ಸಾರ್ವಜನಿಕರ ಬೇಡಿಕೆಯ ಫಲವಾಗಿ ಈ ನಿರ್ಧಾರ ಜಾರಿಯಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸೌಲಭ್ಯಗಳು ಸಿಗುವ ನಿರೀಕ್ಷೆ ಮೂಡಿಸಿದೆ.
ರಾಮನಗರದಲ್ಲಿ ಒಡೆಯರ್ ಎಕ್ಸಪ್ರೆಸ್ ರೈಲು ನಿಲುಗಡಗೆ ಕೇಂದ್ರ ರೈಲ್ವೆ ಇಲಾಖೆ ಆದೇಶ ಹೊರಡಿಸಿರುವುದು ಅತ್ಯಂತ ಸಂತೋಷಕರ ಹಾಗೂ ಐತಿಹಾಸಿಕ ಬೆಳವಣಿಗೆಯಾಗಿದೆ.
ರಾಮನಗರ ಹಾಗೂ ಚನ್ನಪಟ್ಟಣ ಭಾಗದ ಜನರ ಬಹುಕಾಲದ ಬೇಡಿಕೆ ಇಂದು ಈಡೇರಿದಂತಾಗಿದೆ. ಈ ಭಾಗದ ಪ್ರಯಾಣಿಕರು, ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ವ್ಯಾಪಾರಸ್ಥರು ಎದುರಿಸುತ್ತಿದ್ದ ಸಂಚಾರದ ತೊಂದರೆಗಳನ್ನು ಮನಗಂಡು, ಈ ನಿಲುಗಡೆ ಅತ್ಯಂತ ಅಗತ್ಯವಾಗಿತ್ತು. ಜನರ ಈ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸಲು ನಾನು ನಿರಂತರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೆ.
ಈ ಸಂಬಂಧ ಹಲವು ಬಾರಿ ಪತ್ರಗಳ ಮೂಲಕ ಮನವಿ ಸಲ್ಲಿಸುವುದರ ಜೊತೆಗೆ, ಖುದ್ದಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ರೈಲ್ವೇ ಖಾತೆ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ರಾಮನಗರದಲ್ಲಿ ಈ ರೈಲು ನಿಲುಗಡೆಯ ಅಗತ್ಯತೆ ಮತ್ತು ಜನರಿಗೆ ಆಗುವ ಅನುಕೂಲಗಳನ್ನು ವಿವರವಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ಈ ಪ್ರಯತ್ನಗಳಿಗೆ ಇಂದು ಸಕಾರಾತ್ಮಕ ಫಲ ದೊರೆತಿರುವುದು ಅಪಾರ ಸಂತೋಷವನ್ನುಂಟುಮಾಡಿದೆ.
ನನ್ನ ಮನವಿಗೆ ಸ್ಪಂದಿಸಿ, ರಾಮನಗರದಲ್ಲಿ ಒಡೆಯರ್ ಎಕ್ಸಪ್ರೆಸ್ ನಿಲುಗಡಗೆ ಅನುಮೋದನೆ ನೀಡಿದ ಕೇಂದ್ರ ರೈಲ್ವೇ ಸಚಿವರಾದ Ashwini Vaishnaw, ರೈಲ್ವೇ ರಾಜ್ಯ ಖಾತೆ ಸಚಿವರಾದ ವಿ ಸೋಮಣ್ಣ ಹಾಗೂ ಈ ಕಾರ್ಯದಲ್ಲಿ ಕೈಜೋಡಿಸಿದ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ.
ಈ ನಿರ್ಧಾರದಿಂದ ರಾಮನಗರ ಮತ್ತು ಚನ್ನಪಟ್ಟಣ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳೊಂದಿಗೆ ಸಂಪರ್ಕ ಮತ್ತಷ್ಟು ಸುಗಮವಾಗುವುದರಿಂದ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆಗಳು ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ. ವಿಶೇಷವಾಗಿ ದೈನಂದಿನ ಪ್ರಯಾಣಿಕರಿಗೆ ಇದು ದೊಡ್ಡ ಮಟ್ಟದ ನೆರವಾಗಲಿದೆ. ಮುಂದಿನ ದಿನಗಳಲ್ಲಿ ಕೂಡ ಜನರ ಅಗತ್ಯಗಳನ್ನು ಮನಗಂಡು, ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ಸೌಲಭ್ಯಗಳನ್ನು ತರಲು ನಾನು ಬದ್ಧನಾಗಿದ್ದೇನೆ. ಎಂದು ಬರೆದುಕೊಂಡಿದ್ದಾರೆ.