ಹಾವೇರಿ ಜಿಲ್ಲಾದ್ಯಂತ ವರುಣನ ಅಬ್ಬರ: ಸಿಡಿಲಿಗೆ ಮಹಿಳೆ ಸಾವು, 7 ಜನರಿಗೆ ಗಾಯ

Published : Jun 08, 2022, 08:26 AM IST
ಹಾವೇರಿ ಜಿಲ್ಲಾದ್ಯಂತ ವರುಣನ ಅಬ್ಬರ: ಸಿಡಿಲಿಗೆ ಮಹಿಳೆ ಸಾವು, 7 ಜನರಿಗೆ ಗಾಯ

ಸಾರಾಂಶ

*  ಏಕಾಏಕಿಯಾಗಿ ಗುಡುಗು ಸಹಿತ ಮಳೆ  *  ಹೊಲದಲ್ಲಿ ಬಿತ್ತನೆ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಕವಿತಾ  *  ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ   

ಹಾವೇರಿ(ಜೂ.08): ಜಿಲ್ಲೆಯ ವಿವಿಧೆಡೆ ಮಂಗಳವಾರ ಗುಡುಗು, ಮಿಂಚಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟು, 7 ಜನರು ಗಾಯಗೊಂಡಿರುವ ಘಟನೆ ರಟ್ಟೀಹಳ್ಳಿಯಲ್ಲಿ ಸಂಭವಿಸಿದೆ. ರಟ್ಟೀಹಳ್ಳಿಯ ಕವಿತಾ ರಂಗಪ್ಪ ಮೂಲಿಮನಿ (30) ಮೃತ ಮಹಿಳೆ.

ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿಯಾಗಿ ಗುಡುಗು ಸಹಿತ ಮಳೆ ಆರಂಭವಾದಾಗ ರಕ್ಷಣೆಗೆಂದು ಮರದ ಕೆಳಗೆ ಕೂತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಟ್ಟೀಹಳ್ಳಿ ಯುಟಿಪಿ ಕಚೇರಿ ಬಳಿ ಹೊಲವೊಂದರಲ್ಲಿ ಬಿತ್ತನೆಗೆ ಹೋಗಿದ್ದ ಮಾರುತಿ ಸುಣಗಾರ (45), ರವಿಂದ್ರಪ್ಪ ಪರಸಪ್ಪನವರ(65), ಸುಧಾ(60), ಸಾಕಮ್ಮ ಸುಣಗಾರ(45), ರತ್ನಾ(34), ಶಶಿಕಲಾ ಸುಣಗಾರ (35), ಜುಬೇದಾಬಾನು ನೇಸ್ವಿ(32) ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Haveri; ಮದುವೆ ಸಿದ್ಧತೆಯಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ, 4 ಕುರಿಗಳ ಸಾವು

ಹಿರೇಕೆರೂರು ತಾಲೂಕಿನಲ್ಲೂ ಸಾಧಾರಣ ಮಳೆಯಾಗಿದೆ. ಬ್ಯಾಡಗಿ, ಹಾನಗಲ್ಲ, ರಾಣಿಬೆನ್ನೂರು ತಾಲೂಕಿನ ಕೆಲವು ಕಡೆ ಕೆಲಕಾಲ ತುಂತುರ ಮಳೆಯಾಗಿರುವ ಕುರಿತು ವರದಿಯಾಗಿದೆ.

4 ಲಕ್ಷ ಪರಿಹಾರ:

ಹೊಲದಲ್ಲಿ ಬಿತ್ತನೆ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಕವಿತಾ ರಂಗಪ್ಪ ಪರಸಪ್ಪನವರ ಕುಟುಂಬಕ್ಕೆ .4 ಲಕ್ಷ ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ ಸೂಚನೆ ನೀಡಿದ್ದಾರೆ ಎಂದು ತಹಸೀಲ್ದಾರ್‌ ಅರುಣಕುಮಾರ ಕಾರ್ಗಿ ಹೇಳಿದರು.

ಈ ಕುರಿತು ಮಾತನಾಡಿದ ಅವರು, ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ವೇಳೆ ಈ ದುರ್ಘಟನೆ ಜರುಗಿದ್ದು, ಓರ್ವ ಮಹಿಳೆ ಮೃತಪಟ್ಟು 6ಜನ ಗಾಯಗೊಂಡಿದ್ದು, ಗಾಯಾಳುಗಳ ಗಾಯದ ಪರಿಣಾಮ ಆಧರಿ ಅವರಿಗೂ ಪರಿಹಾರ ನೀಡಲು ಸಚಿವರು ಸೂಚಿಸಿರುವುದಾಗಿ ತಿಳಿಸಿದರು.
 

PREV
Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!