ಉತ್ತರ ಕನ್ನಡ: ಅಕ್ಕನ ಮಗಳನ್ನೇ ಕೊಂದ ತಂಗಿ

Published : Apr 09, 2020, 12:21 PM IST
ಉತ್ತರ ಕನ್ನಡ: ಅಕ್ಕನ ಮಗಳನ್ನೇ ಕೊಂದ ತಂಗಿ

ಸಾರಾಂಶ

ಅಕ್ಕನ ಮಗಳನ್ನು ತನ್ನ ಮಕ್ಕಳೊಂದಿಗೆ ಪ್ರೀತಿಯಿಂದ ಸಾಕಲಾರದೇ ಅವಳನ್ನು ಸೀರೆಯಿಂದ ಕೊರಳಿಗೆ ಉರುಳುಹಾಕಿ ಕೊಂದ ಅಮಾನವೀಯ ಘಟನೆ ತಾಲೂಕಿನ ತೇರಗಾಂವದಲ್ಲಿ ನಡೆದಿದೆ.

ಉತ್ತರ ಕನ್ನಡ(ಏ.09): ಅಕ್ಕನ ಮಗಳನ್ನು ತನ್ನ ಮಕ್ಕಳೊಂದಿಗೆ ಪ್ರೀತಿಯಿಂದ ಸಾಕಲಾರದೇ ಅವಳನ್ನು ಸೀರೆಯಿಂದ ಕೊರಳಿಗೆ ಉರುಳುಹಾಕಿ ಕೊಂದ ಅಮಾನವೀಯ ಘಟನೆ ತಾಲೂಕಿನ ತೇರಗಾಂವದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೋಮನಿಂಗ ನೆಲ್ಲುಡಿಯ ಪತ್ನಿ 4 ವರ್ಷಗಳ ಹಿಂದೆ ಮೃತಳಾಗಿದ್ದರಿಂದ ಆಕೆಯ 5 ವರ್ಷದ ಶ್ರೀದೇವಿಯೆಂಬ ಮಗುವನ್ನು ಸೋಮನಿಂಗನ ಹೆಂಡತಿಯ ತಂಗಿ ಸಾವಿತ್ರಿ ಉದಯಕುಮಾರ ಮುನವಳ್ಳಿ ಎಂಬವಳು ತನ್ನೊಂದಿಗೆ ತೇರಗಾಂವದ ತನ್ನ ಮನೆಗೆ ಕರೆದುಕೊಂಡು ಬಂದಿದ್ದಳು.

ಭೂಕುಸಿತದಲ್ಲಿ ಪತ್ನಿ ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ, ವಿಧವೆ ಮರುವಿವಾಹ

ಈಕೆಗೆ 5 ವರ್ಷದ ಹಾಗೂ 3 ವರ್ಷದ ಗಂಡುಮಕ್ಕಳಿದ್ದು ಅವರೊಂದಿಗೆ ಈ ಹುಡುಗಿಯನ್ನೂ ಸಾಕುವುದು ತನಗೆ ಕಿರಿಕಿರಿಯಾಗಿತ್ತು. ಹೀಗಾಗಿ ಶ್ರೀದೇವಿಯನ್ನು ಸೀರೆಯಿಂದ ಕೊರಳಿಗೆ ಉರುಳುಹಾಕಿ ಕೊಲೆಮಾಡುವ ದುಷ್ಕೃತ್ಯವೆಸಗಿದ್ದಾಳೆ. ಸಾವಿತ್ರಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರೆದಿದೆ.

PREV
click me!

Recommended Stories

PM Kisan : ಈ ಮಹಿಳಾ ರೈತರಿಗೆ ಪಿಎಂ ಕಿಸಾನ್ ಹಣ ಸಿಗಲ್ಲ.. ಯಾಕೆ ಗೊತ್ತಾ?
Motor Vehical: ರಸ್ತೆಯಲ್ಲಿ ನಿಮ್ಮ ವಾಹನ ತಡೆದರೆ ತಕ್ಷಣ ದಾಖಲೆ ಕೊಡಬೇಕಾ? ಟ್ರಾಫಿಕ್ ಪೊಲೀಸ್‌-RTO ಅಧಿಕಾರದ ಅಸಲಿ ಸತ್ಯ ಇಲ್ಲಿದೆ!