ನಮ್ಮನೆಗೆ ನೀರು ಬರ್ತಿಲ್ಲಾಂದ್ರೆ, ನಮ್ಮೂರ ರೋಡಲ್ಲಿ ಬಸ್ಸು, ಲಾರಿನೂ ಬರಬಾರದು! ರಸ್ತೆ ಅಡ್ಡಗಟ್ಟಿದ ಮಹಿಳೆಯರು;

Published : Mar 13, 2025, 04:16 PM ISTUpdated : Mar 13, 2025, 04:26 PM IST
ನಮ್ಮನೆಗೆ ನೀರು ಬರ್ತಿಲ್ಲಾಂದ್ರೆ, ನಮ್ಮೂರ ರೋಡಲ್ಲಿ ಬಸ್ಸು, ಲಾರಿನೂ ಬರಬಾರದು! ರಸ್ತೆ ಅಡ್ಡಗಟ್ಟಿದ ಮಹಿಳೆಯರು;

ಸಾರಾಂಶ

ಕೊಪ್ಪಳದಲ್ಲಿ ನೀರಿನ ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಕುಷ್ಟಗಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಸರಿಯಾಗಿ ನೀರು ಸರಬರಾಜಾಗದ ಕಾರಣ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ನಗರಸಭೆ ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಕಾಳಿದಾಸ ನಗರದ ನಿವಾಸಿಗಳು ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕೊಪ್ಪಳ (ಮಾ.13): ಸಾಮಾನ್ಯವಾಗಿ ಮಹಿಳೆಯರು ಸುಖಾ ಸುಮ್ಮನೆ ಬೀದಿಗೆ ಬಂದು ಹೋರಾಟ ಮಾಡುವುದಿಲ್ಲ. ಆದರೆ, ಒಮ್ಮೆ ಬೀದಿಗಿಳಿದು ಹೋರಾಟಕ್ಕಿಳಿದರೆ ಜಪ್ಪಯ್ಯಾ ಅಂದರೂ ಜಗ್ಗೋದಿಲ್ಲ. ಕಲ್ಯಾಣ ಕರ್ನಾಟಕದ ಮಹಿಲೆಯರು ನಮ್ಮ ಮನೆಗೆ ನೀರು ಬರುತ್ತಿಲ್ಲವೆಂದು, ಮನೆ ಮುಂದಿನ ರಸ್ತೆಯಲ್ಲಿಯೂ ಬಸ್ಸು ಲಾರಿ ಬರಬಾರದು ಎಂದು ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ಮಾಡಿದ್ದಾರೆ.

ಈ ಘಟನೆ ಕೊಪ್ಪಳ‌ ನಗರದ ಕುಷ್ಟಗಿ ರಸ್ತೆಯ ರೈಲ್ವೇ ಮೇಲ್ಸೆತುವೆ ರಸ್ತೆಯಲ್ಲಿ ನಡೆದಿದೆ. ಕೊಪ್ಪಳ ನಗರದಲ್ಲಿ ಕಳೆದೊಂದು ತಿಂಗಳಿಂದ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ. ಜನರು ನೀರಿಲ್ಲದೇ ಪರದಾಡುತ್ತಿದ್ದು, ಒಂದೊಂದು ದಿನವನ್ನು ಕಳೆಯುವುದೂ ದುಸ್ತರವಾಗಿದೆ. ಈ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಹಾಗೂ ಮಹಿಳಯರು ರಸ್ತೆಯನ್ನು ತಡೆದು ಪ್ರತಿಭಟನೆ ಆರಂಭಿಸಿದ್ದಾರೆ. ರೈಲ್ವೇ ಮೇಲ್ಸೆತುವೆಯ ರಸ್ತೆಯನ್ನು ಬಂದ್ ಮಾಡಿದ್ದಾರೆ. ಇದರಿಂದ ಬಸ್ಸು, ಲಾರಿ, ಬೈಕ್‌ಗಳು ಹೋಗಲಾಗದೇ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: ಕುಂಭಮೇಳ ಕಾಲ್ತುಳಿತ, ಬೆಳಗಾವಿಯ ಕುಟುಂಬಕ್ಕೆ ಯುಪಿ ಸರ್ಕಾರದಿಂದ 1 ಕೋಟಿ ಜಮೆ!

ಕೊಪ್ಪಳದ ಕಾಳಿದಾಸ ನಗರದ ನಿವಾಸಿಗಳಿಂದ‌ ರಸ್ತೆ ತಡೆದು ಪ್ರತಿಭಟನೆ ಆರಂಭಿಸಿದ್ದು, ನಗರಸಭೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನೀರಿನ ಅಸಮರ್ಪಕ ಪೂರೈಕೆ ಬಗ್ಗೆ ಅನೇಕ ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇದರಿಂದ ಆಕ್ರೋಶಗೊಂಡ ಕಾಳಿದಾಸ ನಿವಾಸಿಗಳಿಂದ ಪ್ರತಿಭಟನೆ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆಯಿಂದ ರಸ್ತೆಯಲ್ಲಿ ವಾಹನಗಳ ಸಂದಣಿ ಹೆಚ್ಚಾಗಿದ್ದು, ಪೊಲೀಸರು ಮನವೊಲಿಕೆಗೂ ಬಗ್ಗಲಿಲ್ಲ. ಕೊನೆಗೆ ನಗರಸಭೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮರ್ಪಕವಾಗಿ ನೀರಿನ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆದು, ರಸ್ತೆಯನ್ನು ತೆರವು ಮಾಡಿದ್ದಾರೆ.

PREV
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್