
ಹಾನಗಲ್ಲ(ಹಾವೇರಿ) (ಜು.4): ಕೇರಳದ ಕೊಚ್ಚಿಯಲ್ಲಿ ನೌಕಾಪಡೆಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಯೋಧರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ.
ಯಶೋಧರ ವಡ್ಡರ (29)(Yashodhara Vaddar Death) ಮೃತ ಯೋಧ. ಅಂಡಮಾನ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಯಶೋಧರ ಕಳೆದ 3 ತಿಂಗಳಿನಿಂದ ಕೊಚ್ಚಿಯಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಾಗಿ ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿದ್ದರು. 2016ರಲ್ಲಿ ಭಾರತೀಯ ನೌಕಾಪಡೆಯ ಯೋಧರಾಗಿ ಯಶೋಧರ ನೇಮಕಗೊಂಡಿದ್ದರು.
ಇದನ್ನೂ ಓದಿ: ಮೌಂಟ್ ಎವರೆಸ್ಟ್ನಲ್ಲಿ ಯೋಧನ 'ಗ್ರೀನ್ ಬೂಟ್' ರಹಸ್ಯ ಬಯಲು; ಪರ್ವತಾರೋಹಿಗಳ ದಿಕ್ಸೂಚಿಗೆ 30 ವರ್ಷದ ಬಳಿಕ ಮುಕ್ತಿ!
ಕರ್ತವ್ಯ ನಿರ್ವಹಣೆ ವೇಳೆ ಯೋಧ ಯಶೋಧರ ಗುಂಡು ತಾಗಿ ಮೃತಪಟ್ಟಿದ್ದಾರೆ.ಉಪ್ಪುಣಸಿಗೆ ಯೋಧನ ಪಾರ್ಥೀವ ಶರೀರ ಶನಿವಾರ ಆಗಮಿಸಲಿದೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರಕ್ಕಾಗಿ ಎಲ್ಲ ಸಿದ್ಧತೆ ನಡೆದಿದೆ.