ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

Kannadaprabha News   | Asianet News
Published : Apr 18, 2020, 07:53 AM ISTUpdated : Apr 18, 2020, 07:55 AM IST
ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಸಾರಾಂಶ

ಕುರಿ ಕಾಯುವ ವಿಷಯಕ್ಕೆ ಸಂಬಂಧಿಸಿದಂತೆ ಯುವಕನಿಗೆ ಬುದ್ಧಿವಾದ ಹೇಳಿದ ಪಾಲಕರು| ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ| ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಘಟನೆ|

ಕುಷ್ಟಗಿ(ಏ.18): ಪಟ್ಟಣದ ದುರ್ಗಾ ಕಾಲೋನಿಯ ನಿವಾಸಿ ಜಂಬಣ್ಣ ನಿಂಗಪ್ಪ ಗಾಂಜಿ (18) ಎನ್ನುವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಯುವಕನಿಗೆ ಮನೆಯಲ್ಲಿ ಪಾಲಕರು ಬುದ್ಧಿವಾದ ಹೇಳಿದ ಪ್ರಸಂಗಕ್ಕೆ ಸಂಬಂಧಿಸಿದಂತೆ ಮನನೊಂದು ಪಟ್ಟಣದ ಹೊರವಲಯದ ಗಿಡವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾ​ನೆ.

ಲಾಕ್ ಡೌನ್ ವಿಸ್ತರಣೆಗೆ ಬೇಸತ್ತು ನೇಣು ಬಿಗಿದು ಅರ್ಚಕ ಆತ್ಮಹತ್ಯೆ..!

ಇನ್ನು ಯುವಕ ಮನೆಯಲ್ಲಿರುವ ಕುರಿಗಳನ್ನು ಕಾಯುವ ವಿಷಯಕ್ಕೆ ಸಂಬಂಧಿಸಿದಂತೆ ಪಾಲಕರು ಗುರುವಾರ ರಾತ್ರಿ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕಾಗಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವಕನ ತಂದೆ ನಿಂಗಪ್ಪ ಗಾಜಿ ನೀಡಿದ ದೂರಿನ ಮೇರೆಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!