ಕಾಂಗ್ರೆಸಿಗರೆಂದು ಹೇಳಿಕೊಂಡು ದರ್ಪ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Published : Mar 06, 2020, 12:14 PM IST
ಕಾಂಗ್ರೆಸಿಗರೆಂದು ಹೇಳಿಕೊಂಡು ದರ್ಪ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಾರಾಂಶ

ತಾವು ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಂಡು ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾನೆ. 

ಚಿಕ್ಕಮಗಳೂರು [ ಮಾ.06]: ಮರಗಳ್ಳತನದ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ ಎಂದು ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆ ಕೆಸವಿನ ಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಆದರ್ಶ ಎಂಬ ಯುವಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ಮಾಡಲಾಗಿದೆ. 

ಮರಗಳ್ಳರ ಹಲ್ಲೆಯಿಂದ ಆದರ್ಶ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ತಂಗಿ ಎನ್ನುತ್ತಿದ್ದಾತನೇ ರೇಪ್‌ಗೆ ಮುಂದಾದ, ವಿರೋಧಿಸಿದಾಗ ಕತ್ತು ಕೊಯ್ದ!...

ತಾವು ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ರಾಜೇಶ್,  ರಮೇಶ್ ಎಂಬುವರಿಬ್ಬರು ಆದರ್ಶನ ಎಂಬ ಯುವಕನ ಮೇಲೆ ಹಲ್ಲೆ ಮಾಡಿ  ದರ್ಪ ಮೆರೆದಿದ್ದಾರೆ. 

ಸದ್ಯ ಈ ಸಂಬಂಧ ಚಿಕ್ಕಮಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. 

PREV
click me!

Recommended Stories

ಜಮೀರ್, ನಾಗೇಂದ್ರರನ್ನು ಸಂಪುಟದಿಂದ ಕೈಬಿಡಿ: ಸರ್ಕಾರಕ್ಕೆ ಜನಾರ್ದನ ರೆಡ್ಡಿ ಎಚ್ಚರಿಕೆ ಕೊಟ್ಟಿದ್ಯಾಕೆ?
ಶ್ರಾವಣ ಶನಿವಾರ ಅಂಜನಾದ್ರಿಯಲ್ಲಿ ಭಕ್ತಸಾಗರ: ತ್ರಿವರ್ಣ ಹೂಗಳಿಂದ ಕಂಗೊಳಿಸಿದ ಆಂಜನೇಯ