ಬೀದರ್ ಎಸ್‌ಪಿ ಕಿರುಕುಳ ಆರೋಪ, ಪೇಸ್‌ಬುಕ್ ಲೈವ್‌ನಲ್ಲೇ ಆತ್ಮ*ಹತ್ಯೆಗೆ ಯತ್ನಿಸಿದ ಯೂಟ್ಯೂಬರ್!

Published : Apr 03, 2026, 09:15 AM IST
Bidar YouTuber suicide attempt

ಸಾರಾಂಶ

ಬೀದರ್ ಜಿಲ್ಲೆಯ ಯೂಟ್ಯೂಬರ್ ಸಲ್ಮಾನ್ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕೆಲ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಂತಿ ಸಭೆಯ ಹೆಸರಿನಲ್ಲಿ ಕರೆಸಿ ಅವಮಾನಿಸಿ, ಎನ್‌ಕೌಂಟರ್ ಬೆದರಿಕೆ ಹಾಕಲಾಗಿದೆ ಎಂದು ಅವರು ಆರೋಪಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಯೂಟ್ಯೂಬರ್ ಆತ್ಮ*ಹತ್ಯೆ ಯತ್ನ ಪ್ರಕರಣವು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಪೊಲೀಸ್ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಯೂಟ್ಯೂಬರ್ ಸಲ್ಮಾನ್ ಖಾನ್ ಎಂಬ ಯುವಕ, ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಗುಂಟಿ ಸೇರಿದಂತೆ ಕೆಲ ಪೊಲೀಸ್ ಸಿಬ್ಬಂದಿಯಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದೇನೆಂದು ಆರೋಪಿಸಿ, ಪೇಸ್‌ಬುಕ್ ಲೈವ್‌ನಲ್ಲೇ ಮಾತ್ರೆಗಳು ನುಂಗಿ ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಶಾಂತಿ ಸಭೆ ಇದೆ ಎಂದು ಕರೆಸಿ ಅವಮಾನ

ಸಲ್ಮಾನ್ ಖಾನ್ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಸಮಾಜದ ವಿವಿಧ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ಈ ವಿಡಿಯೋಗಳ ವಿಷಯವಸ್ತು ಸಮಾಜದಲ್ಲಿ ಶಾಂತಿ ಕೆದಕುವಂತಿದೆ ಎಂದು ಹೇಳಿ, ಶಾಂತಿ ಸಭೆ ಇದೆ ಎಂದು ಕಛೇರಿಗೆ ಕರೆಸಿ ಎಲ್ಲರೆದುರು ಹಲ್ಲೆಗೆ ಯತ್ನಿಸಿದ್ದಾರೆ. ಯೂಟ್ಯೂಬ್ ಚಾನೆಲ್ ಮುಂದುವರೆಸದಂತೆ ತಾಕೀತು ಮಾಡಲಾಗಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಅಲ್ಲದೇ, ಎನ್‌ಕೌಂಟರ್ ಮಾಡುತ್ತೇನೆ ಮತ್ತು ಮರ್ಡರ್ ಮಾಡುತ್ತೇನೆ ಎಂಬ ಬೆದರಿಕೆಗಳನ್ನು ಹಾಕಲಾಗಿದೆ ಎಂದು ಕಣ್ಣೀರಿಟ್ಟು ಪೇಸ್‌ಬುಕ್ ಲೈವ್‌ನಲ್ಲಿ ಹೇಳಿಕೊಂಡಿದ್ದಾರೆ.

ಈ ವಿಡಿಯೋ ಮೋದಿಗೆ ತಲುಪಬೇಕು

ತಮ್ಮ ಲೈವ್ ವಿಡಿಯೋದಲ್ಲಿ ಸಲ್ಮಾನ್, “ಈ ವಿಡಿಯೋ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಬೇಕು” ಎಂದು ಹೇಳಿದ್ದು, ಪೊಲೀಸ್ ಇಲಾಖೆಯ ಕಿರುಕುಳದಿಂದಲೇ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಎಲ್ಲಾ ವಿಚಾರವನ್ನು ಹೇಳಿ ಪೇಸ್‌ಬುಕ್ ಲೈವ್‌ನಲ್ಲೇ ಮಾತ್ರೆಗಳು ನುಂಗಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ವರ್ತನೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ. ಇನ್ನೊಂದೆಡೆ, ಸಲ್ಮಾನ್ ಮಾಡಿದ ಆರೋಪಗಳ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ.

PREV
Read more Articles on
click me!

Recommended Stories

ರಾಯಚೂರು: ಗೃಹಿಣಿ ಆ*ತ್ಮಹ*ತ್ಯೆ ಪ್ರಕರಣ, ಆರೋಪಿಗಳನ್ನು ಬಂಧಿಸದ ಪೊಲೀಸರ ನಡೆಗೆ ಆಕ್ರೋಶ!
ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಬಿಡಿಎದಿಂದ ಟೆಂಡರ್‌