ಮಡಿಕೇರಿ: ಶಾಸಕರ ಕೈತೋಟದಿಂದಲೇ ಕಳವು

Published : Oct 12, 2019, 11:26 AM IST
ಮಡಿಕೇರಿ: ಶಾಸಕರ ಕೈತೋಟದಿಂದಲೇ ಕಳವು

ಸಾರಾಂಶ

ಮಡಿಕೇರಿಯಲ್ಲಿ ಶಾಸಕರ ಕೈತೋಟದಲ್ಲಿಯೇ ಕಳ್ಳತನ ನಡೆದಿದೆ. ಶಾಸಕರು ಬೆಳೆದಿದ್ದ ಕೈತೋಟದಲ್ಲೇ ಕಳ್ಳರು ರಾತ್ರೋ ರಾತ್ರಿ ಕಳ್ಳತನ ನಡೆಸಿದ್ದಾರೆ. ವಾಚ್‌ಮನ್ ನಿದ್ರೆಗೆ ಜಾರಿದ್ದ ಸಂದರ್ಭ ಘಟನೆ ನಡೆದಿದೆ.  

ಮಡಿಕೇರಿ(ಅ.12): ಸೋಮವಾರಪೇಟೆ ತಾಲೂಕಿನ ಕುಂಬೂರು ಗ್ರಾಮದಲ್ಲಿರುವ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಮನೆಯ ಕೈ ತೋಟದಲ್ಲಿ ಬೆಳೆದಿದ್ದ ಆರು ಗಂಧದ ಮರಗಳನ್ನು ಗುರುವಾರ ರಾತ್ರಿ ಕಳವು ಮಾಡಲಾಗಿದೆ.

ಶಾಸಕರ ಮನೆಗೆ ಬೀಗ ಹಾಕಿರುವ ಅವಕಾಶವನ್ನು ಸದುಯೋಗಪಡಿಸಿಕೊಂಡ ಕಳ್ಳರು, 1 ಲಕ್ಷ ರು. ಗಳಷ್ಟುಬೆಲೆ ಬಾಳುವ ಮರಗಳನ್ನು ಕತ್ತರಿಸಿ, ತೋಟದೊಳಗೆ ಸಾಗಿಸಿದ್ದಾರೆ.

ಮಡಿಕೇರಿಯಲ್ಲಿ ಖೋಟಾ ನೋಟು ಜಾಲ, ಮೂವರ ಬಂಧನ

ಶಾಸಕ ಅಪ್ಪಚ್ಚು ರಂಜನ್‌ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಲು ಪತ್ನಿ ಸಮೇತ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವುದರಿಂದ ಮನೆಗೆ ಬೀಗ ಹಾಕಲಾಗಿತ್ತು. ಗೇಟ್‌ ಸಮೀಪದ ಲೈನ್‌ಮನೆಯಲ್ಲಿ ವಾಸವಿದ್ದ ವಾಚ್‌ಮನ್‌ ನಿದ್ರೆಗೆ ಜಾರಿದ ಮೇಲೆ ಕಳ್ಳತನ ಮಾಡಲಾಗಿದೆ.

ಸ್ಥಳಕ್ಕೆ ಸೋಮವಾರಪೇಟೆ ಸರ್ಕಲ್‌ ಇನ್ಸ್‌ಪೆಕ್ಟರ್‌ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್‌, ಆರ್‌ಎಫ್‌ಒ ಶಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದೆ. ಠಾಣಾಧಿಕಾರಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸುಂಟಿಕೊಪ್ಪ: ವಿದೇಶಿ ಆಟಗಾರನಿಂದ ಮಕ್ಕಳಿಗೆ ಫುಟ್ಬಾಲ್‌ ತರಬೇತಿ

PREV
click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು