ಮಡಿಕೇರಿ: ಕಕ್ಕಬ್ಬೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ವಿಶೇಷ ಪೂಜೆ

Published : Oct 31, 2019, 10:40 AM IST
ಮಡಿಕೇರಿ: ಕಕ್ಕಬ್ಬೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ವಿಶೇಷ ಪೂಜೆ

ಸಾರಾಂಶ

ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಅಜ್ಜಿಕುಟ್ಟೀರ ಎಸ್‌. ಬೋಪಣ್ಣ ಅವರು ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಜ್ಜಿಕುಟ್ಟೀರ ಎಸ್‌. ಬೋಪಣ್ಣ, ಅವರ ಪತ್ನಿ ಮೋನಾ ಬೋಪಣ್ಣ, ಪುತ್ರ ಕೃಶಾಲ್‌ ಸೋಮಯ್ಯ ಹಾಗೂ ಸಹೋದರ ಸನ್ನಿ, ಅವರ ಪತ್ನಿ ಶಶಿ, ಪುತ್ರ ತೇಜ್‌ ತಮ್ಮಯ್ಯ ಮತ್ತು ಸಹೋದರಿ ಕುಸುಮ ಅವರೊಂದಿಗೆ ಇಗ್ಗುತ್ತಪ್ಪ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ಮಡಿಕೇರಿ(ಅ.31): ಕೊಡಗಿನ ಆರಾಧ್ಯದೈವ ಮಳೆ ದೇವರೆಂದೇ ಖ್ಯಾತಿ ಪಡೆದಿರುವ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಅಜ್ಜಿಕುಟ್ಟೀರ ಎಸ್‌. ಬೋಪಣ್ಣ ಅವರು ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಜ್ಜಿಕುಟ್ಟೀರ ಎಸ್‌. ಬೋಪಣ್ಣ, ಅವರ ಪತ್ನಿ ಮೋನಾ ಬೋಪಣ್ಣ, ಪುತ್ರ ಕೃಶಾಲ್‌ ಸೋಮಯ್ಯ ಹಾಗೂ ಸಹೋದರ ಸನ್ನಿ, ಅವರ ಪತ್ನಿ ಶಶಿ, ಪುತ್ರ ತೇಜ್‌ ತಮ್ಮಯ್ಯ ಮತ್ತು ಸಹೋದರಿ ಕುಸುಮ ಅವರೊಂದಿಗೆ ಇಗ್ಗುತ್ತಪ್ಪ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಅಜ್ಜಿಕುಟ್ಟೀರ ಎಸ್‌. ಬೋಪಣ್ಣ ಅವರ ಪುತ್ರ ಕೃಶಾಲ್‌ ಸೋಮಯ್ಯ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಮುಖ್ಯ ಅರ್ಚಕ ಕುಶ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಿದ್ರಾಮಯ್ಯ ಲೋಕಾಯುಕ್ತವನ್ನು ಕೊಂದು ಹಾಕಿದ್ರು: ಶೋಭಾ

ಈ ಸಂದರ್ಭದಲ್ಲಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ನಿರ್ದೇಶಕ ಮಾರ್ಚಂಡ ಪ್ರವೀಣ್‌, ಪಾರುಪತ್ಯೆಗಾರ ಪರದಂಡ ಪ್ರಿನ್ಸ್‌ ತಮ್ಮಯ್ಯ, ನಾಪೋಕ್ಲು ಠಾಣಾಧಿಕಾರಿ ಮಂಚಯ್ಯ, ಗ್ರಾಮಲೆಕ್ಕಿಗರಾದ ಅಮೃತಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಬುಲ್‌​ಟ್ರಾಲ್‌, ಲೈಟ್‌ ಫಿಶಿಂಗ್‌ ನಡೆ​ಸಿ​ದ್ರೆ ಡೀಸೆಲ್‌ ಸಬ್ಸಿಡಿ ಕಡಿ​ತ

PREV
click me!

Recommended Stories

ಕೃಷಿಯಲ್ಲಿ ತೊಡಗಲು ಪೊಲೀಸ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಾಜೀನಾಮೆ!
ಸಂಕೇತ್ ಹತ್ಯೆ ಬೆನ್ನಲ್ಲೇ ಕೊಡಗಿನ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಮಾರಣಾಂತಿಕ ಹಲ್ಲೆ, ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ದಾಳಿ?