ಕೊಲಾರ: ಹಣ ವಂಚನೆ, ಕಂಪನಿಗೆ ನುಗ್ಗಿ ಮಾಲೀಕನಿಗೆ ಥಳಿಸಿದ ಜನರು..!

Published : Apr 29, 2019, 07:48 PM IST
ಕೊಲಾರ: ಹಣ ವಂಚನೆ, ಕಂಪನಿಗೆ ನುಗ್ಗಿ ಮಾಲೀಕನಿಗೆ ಥಳಿಸಿದ ಜನರು..!

ಸಾರಾಂಶ

ಕೊಲಾರದಲ್ಲಿ ಹಣ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ರೊಚ್ಚಗೆದ್ದ ಜನರು ಕಂಪನಿಗೆ ನುಗ್ಗಿ ಮಾಲೀಕನಿಗೆ ಭರ್ಜರಿ ಗೂಸಾ ಕೊಟ್ಟಿದ್ದಾರೆ.

ಕೋಲಾರ, [ಏ.29]: ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಹೆಸರಿನ ಕಂಪನಿ ಹಣ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮೋಸ ಹೋದ ಜನರು ಕಛೇರಿಗೆ ಮುತ್ತಿಗೆ ಹಾಕಿ, ಕಂಪನಿ ಮಾಲೀಕನಿಗೆ ಥಳಿಸಿದ ಘಟನೆ ನಡೆದಿದೆ. 

ತಿರುಮಲ ಸೌಹಾರ್ದ ಕ್ರೆಡಿಟ್ ಕೋಪರೇಟಿವ್ ಲಿಮಿಟೆಡ್ ಎಂಬ ಹೆಸರಿನ ಕಂಪನಿ, ಚೀಟಿ ವ್ಯವಹಾರ, ಹಣ ಡೆಪಾಸಿಟ್, ಲಾಟರಿ ಚೀಟಿ ಹಣ ಪಡೆದು ಒಂದುವರೆ ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. 

ಕೋಲಾರ ನಗರ ಹೊರವಲಯದಲ್ಲಿ ಈ ಕಂಪನಿ ಕಛೇರಿ ಇದ್ದು. ವೇಮಗಲ್ ಹೋಬಳಿಯ ನೂರಾರು ಜನರಿಗೆ ಹಣ ನೀಡದೇ ಈ ಕಂಪನಿ ವಂಚಿಸಿದೆ ಎನ್ನಲಾಗಿದೆ. 

ಹೀಗಾಗಿ ಮೋಸ ಹೋದ ವೇಮಗಲ್ ನಿವಾಸಿಗಳು, ಇಂದು ಕಚೇರಿಗೆ ನುಗ್ಗಿ ಕಂಪನಿ ಮಾಲಿಕ ಶ್ರೀನಿವಾಸ್‌ಗೆ ಥಳಿಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೋಲಾರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

PREV
click me!

Recommended Stories

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ: ಡ್ರಗ್ಸ್ ಕಂಟ್ರೋಲರ್ ಶ್ಯಾಮಲಾ ಲೋಕಾ ಬಲೆಗೆ
ಬಂಗಾರ ಮೈಮೇಲಿದ್ರೆ ಜೀವಕ್ಕೆ ಕುತ್ತು: ಚಿನ್ನಕ್ಕಾಗಿ ವೃದ್ಧೆಯ ಕಿವಿಯನ್ನೆ ಕತ್ತರಿಸಿದ ಕಳ್ಳರ ಗ್ಯಾಂಗ್