'ತೆಂಗು-ಇಂಗು ಎರಡಿದ್ದರೆ ಮಂಗ ಕೂಡ ಅಡುಗೆ ಮಾಡುತ್ತಂತೆ...' ಎನ್ನುವ ಗಾದೆಯಿದೆ. ಅದರಲ್ಲಿಯೂ ದಕ್ಷಿಣ ಭಾರತದ ಅಡುಗೆಗಳಿಗಿಂತೂ ತೆಂಗಿನ ತುರಿ ಇಲ್ಲದಿದ್ದರೆ, ರುಚಿಯೇ ಆಗುವುದಿಲ್ಲ. ನಮ್ಮ ಅಡುಗೆಯೊಂದಿಗೆ ಮಾತ್ರವಲ್ಲ, ಅಧ್ಯಾತ್ಮವಾಗಿಯೂ ತೆಂಗಿನೊಂದಿಗೆ ಭಾರತೀಯರಿಗೆ ನಂಟಿದ್ದು, ಇದು ಆರೋಗ್ಯಕ್ಕೂ ಒಳ್ಳೆಯದು. ಅದೇ ಕಾರಣಕ್ಕೆ ತೆಂಗಿಗೆ ಕಲ್ಪವೃಕ್ಷ ಎಂಬ ಮತ್ತೊಂದು ಹೆಸರು.
ಆರೋಗ್ಯಕ್ಕೆ ಒಳ್ಳೆಯದು ಎಂಬ ಕಾರಣಕ್ಕೆ ಕಾಯಿ ಹಾಲು ಹಾಗೂ ನೀರನ್ನು ನಮ್ಮ ಅಡುಗೆಯಲ್ಲಿ ವಿಧವಿಧವಾಗಿ ಬಳಸಲಾಗುತ್ತದೆ. ಇದರ ಉಪಯೋಗಗಳೇನು?