
ನವದೆಹಲಿ[ಜೂ. 20] ಕಾಮಾಂಧರಿಂದ ಹೇಗೆ ರಕ್ಷಣೆ ಪಡೆದುಕೊಂಡು ಅವರಿಗೆ ಯಾವ ರೀತಿ ಬುದ್ಧಿ ಕಲಿಸಬೇಕು ಎಂಬುದನ್ನು ಈ ಮಹಿಳಾ ಐಪಿಎಸ್ ಅಧಿಕಾರಿ ವಿದ್ಯಾರ್ಥಿನಿಯರಿಗೆ ಪ್ರಾತಕ್ಷಿಕೆ ಮೂಲಕ ತಿಳಿಸಿಕೊಟ್ಟಿದ್ದಾರೆ.
ಶಾಲೆ, ಕಾಲೇಜು, ಕೆಲಸದ ಸ್ಥಳ , ರಸ್ತೆ ಇನ್ನು ಮುಂತಾದ ಕಡೆ ಕಾಮಾಂಧರಿಂದ ಅಪಾಯ ಎದುರಾದಾಗ ಏನು ಮಾಡಬೇಕು ಎಂಬುದನ್ನು ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗುತ್ತಿದೆ.
ಕಾಮಾಂಧರಿಂದ ರಕ್ಷಣೆ ಪಡೆದುಕೊಳ್ಳಲು ಅನೇಕ ಸಾಧನಗಳು ಮಾರುಕಟ್ಟೆಗೆ ಬಂದಿವೆ. ಆದರೆ ಅವೆಲ್ಲವೂ ತುಂಬಾ ದುಬಾರಿ. ಹಾಗಾದರೆ ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ರಕ್ಷಣಾ ಕವಚವೊಂದನ್ನು ನಿರ್ಮಾಣ ಮಾಡಿಕೊಳ್ಳಬಹುದಲ್ಲವೇ?
ಮೆಣಸಿನ ಪುಡಿ, ಕಾಳು ಮೆಣಸಿನ ಪುಡಿ, ರಿಫೈಂಡ್ ಆಯಿಲ್ ಬಳಸಿ ಸ್ಪ್ರೇ ಒಂದನ್ನು ಸಿದ್ಧ ಮಾಡಿಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಹೈದರಾಬಾದ್ ನ ಮಹಿಳಾ ಅಧಿಕಾರಿಯೊಬ್ಬರು ಹಾಡುಗಳ ಮುಖಾಂತರವೂ ಜಾಗೃತಿ ಮೂಡಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.