
ಒಂದೊಂದು ಕಾಲದಲ್ಲಿ ಒಂದು ಚರ್ಮ ಸಂಬಂಧಿ ಸಮಸ್ಯೆಗಳು ಕಾಡುತ್ತವೆ. ಒಮ್ಮೆ ದೇಹದಲ್ಲಿ ನೀರಿನಂಶ, ಜಿಡ್ಡಿನಾಂಶ ಕಡಿಮೆಯಾಗಿ ಚರ್ಮದಲ್ಲಿ ಒಡಕು ಕಂಡರೆ, ಮತ್ತೊಮ್ಮೆ ನೀರಲ್ಲಿ ಹೆಚ್ಚು ಓಡಾಡಬೇಕಾದ ಪ್ರಸಂಗ ಬರುವುದರಿಂದ ಕಾಲಿನ ಸಂದು ಕೊಳೆಯುತ್ತವೆ. ಅದರಲ್ಲಿಯೂ ಮಲೆನಾಡಿನ ಮಂದಿ ಮಳೆಗಾಲದಲ್ಲಿ ಆ ಸಮಸ್ಯೆಯಿಂದ ಬಳಲುವುದು ಹೆಚ್ಚು.
ಕೆಸರು, ಮಳೆ, ನೀರು, ತೇವಾಂಶದಿಂದ ಕಾಲಿನಲ್ಲಿ ಫಂಗಲ್ ಇನ್ಫೆಕ್ಷನ್ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿಯೇ ತ್ವಚೆ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಮುಖ್ಯ....
ಈ ಸಮಸ್ಯೆಯನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡಿದರೆ ಬೇಗ ಗುಣಪಡಿಸಿಕೊಳ್ಳಬಹುದು. ಆದರೆ, ನೆಗ್ಲೆಕ್ಟ್ ಮಾಡಿದರೆ ಸಮಸ್ಯೆ ಗಂಭೀರವಾಗುತ್ತದೆ. ದೊಡ್ಡ ಗಾಯ, ತುರಿಕೆ, ರಕ್ತ ಸ್ರಾವವೂ ಆಗಬಹುದು. ಅದು ವಿಪರೀತವಾದರೆ ವೈದ್ಯರ ಸಲಹೆ ಪಡೆಯುವುದು ಅನಿವಾರ್ಯ.
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.