Published : Feb 13, 2026, 07:58 AM ISTUpdated : Feb 13, 2026, 10:37 PM IST

Karnataka Live: Bhagyalakshmi Serial ಮುಗಿಯಲ್ಲ, ಪಾತ್ರ ಬದಲು- ಖುದ್ದು ನಟಿ ಸುಷ್ಮಾ ರಾವ್​ ಏನ್​ ಹೇಳಿದ್ರು ನೋಡಿ

ಸಾರಾಂಶ

ಬೆಂಗಳೂರು (ಫೆ.13): ವಿದೇಶದಿಂದ ಪೆಪ್ಪರ್‌ಮೆಂಟ್ ಹಾಗೂ ಸಿಹಿ ತಿನಿಸುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಾಣಿಕೆಗೆ ಯತ್ನಿಸಿದ್ದ ಪೆಡ್ಲರ್‌ನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬ್ಯಾಂಕಾಕ್‌ನಿಂದ ಕೆಐಎಗೆ ಬಂದಿಳಿದ ಪ್ರಯಾಣಿಕನನ್ನು ಶಂಕೆ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆಗೊಳಪಡಿಸಿದ್ದಾರೆ. ಆಗ ಆತನ ಬ್ಯಾಗ್‌ನಲ್ಲಿದ್ದ ಪೆಪ್ಪರ್‌ಮೆಂಟ್‌ (ಕ್ಯಾಡಿ) ಹಾಗೂ ಸಿಹಿ ತಿನಿಸುಗಳ ಪೊಟ್ಟಣಗಳನ್ನು ತೆರೆದು ನೋಡಿದಾಗ 4.25 ಲಕ್ಷ ರು. ಮೌಲ್ಯದ 1.7 ಕೆಜಿ ಹ್ಯಾಶೀಶ್ ಹಾಗೂ ಚರಸ್‌ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಟ್ಟಣ ತೆರೆದು ಪರಿಶೀಲಿಸುವ ಸಮಯದ ವಿಡಿಯೋ ಹಾಗೂ ಪೋಟೋವನ್ನು ಕಸ್ಟಮ್ಸ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ.

ಮತ್ತೆ 3.39 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಕೆಐಎನಲ್ಲಿ ಕಸ್ಟಮ್ಸ್ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ 3.39 ಕೋಟಿ ರು. ಮೌಲ್ಯದ 9.7 ಕೆಜಿ ಹೈಡ್ರೋ ಗಾಂಜಾ ಜಪ್ತಿಯಾಗಿದೆ.

ಕೆಐಎಗೆ ಬುಧವಾರ ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನ ಬಳಿ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಹೈಡ್ರೋ ಗಾಂಜಾ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆತನ ಬ್ಯಾಗ್‌ನಲ್ಲಿ ಗಾಂಜಾ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

10:37 PM (IST) Feb 13

Bhagyalakshmi Serial ಮುಗಿಯಲ್ಲ, ಪಾತ್ರ ಬದಲು- ಖುದ್ದು ನಟಿ ಸುಷ್ಮಾ ರಾವ್​ ಏನ್​ ಹೇಳಿದ್ರು ನೋಡಿ

ಭಾಗ್ಯಲಕ್ಷ್ಮಿ ಸೀರಿಯಲ್ ಮುಗಿಯುತ್ತಿದೆ ಎಂಬ ವದಂತಿಗಳ ನಡುವೆ, ಖಳನಾಯಕ ತಾಂಡವ್ ಪಶ್ಚಾತ್ತಾಪ ಪಡುತ್ತಿದ್ದಾನೆ. ಆದರೆ, ನಟಿ ಸುಷ್ಮಾ ಕೆ. ರಾವ್ ಅವರು ಇನ್​ಸ್ಟಾಗ್ರಾಮ್​ ಮೂಲಕ ಸೀರಿಯಲ್ ಸದ್ಯಕ್ಕೆ ಮುಗಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಕಥೆಯು ಕುತೂಹಲಕಾರಿ ಘಟ್ಟ ತಲುಪಿದೆ.
Read Full Story

09:22 PM (IST) Feb 13

ಪಿಯು ವಿದ್ಯಾರ್ಥಿನಿಗೆ ನೀನು ಮುಸ್ಲಿಂ ಆಗು, ಇಲ್ಲವೇ ನಿನ್ನ ರೇಪ್ ಮಾಡಿದ ವಿಡಿಯೋ ವೈರಲ್ ಮಾಡ್ತೀನೆಂದ ಯುವಕ!

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯನ್ನು ಲಾಂಗ್ ರೈಡ್ ಕರೆದುಕೊಂಡು ಹೋದ ಅನ್ಯಕೋಮಿನ ಯುವಕ,  ಆಕೆಯನ್ನ ಅತ್ಯಾ*ಚಾರ ಮಾಡಿ, ವಿಡಿಯೋ ತೆಗೆದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ. ಮತಾಂತರಕ್ಕೂ ಒತ್ತಡ ಹೇರಿದ್ದಾನೆ. ಪೊಲೀಸರು, ಇಬ್ಬರನ್ನ ಬಂಧಿಸಿದ್ದಾರೆ. ಸರ್ಕಾರ ಎಸ್‌ಐಟಿ ರಚಿಸಿದೆ.

Read Full Story

09:15 PM (IST) Feb 13

Naa Ninna Bidalaare ಸೀರಿಯಲ್‌ ಮಾಯಾ ಆತ್ಮಹ*ತ್ಯೆಗೆ ಯತ್ನ - ಶೂಟಿಂಗ್‌ ಸೆಟ್‌ನಲ್ಲಿ ಏನಾಯ್ತು ನೋಡಿ

ನಾ ನಿನ್ನ ಬಿಡಲಾರೆ ಧಾರಾವಾಹಿಯಲ್ಲಿ, ಅಂಬಿಕಾಳ ಕೊಲೆ ರಹಸ್ಯ ಬಯಲಾಗುತ್ತಿದ್ದಂತೆ ಮಾಯಾ ಕಟ್ಟಡದಿಂದ ಜಿಗಿದು ಆತ್ಮ*ಹತ್ಯೆಗೆ ಯತ್ನಿಸುತ್ತಾಳೆ. ಈ ಅಪಾಯಕಾರಿ ದೃಶ್ಯದ ಚಿತ್ರೀಕರಣವನ್ನು ಹೇಗೆ ಮಾಡಲಾಯಿತು, ಎಷ್ಟು ಟೇಕ್‌ಗಳನ್ನು ತೆಗೆದುಕೊಳ್ಳಲಾಯಿತು ಎಂಬುದನ್ನು ಈ ಲೇಖನ ವಿವರಿಸುತ್ತದೆ.

Read Full Story

08:24 PM (IST) Feb 13

KSRTC ವೀಕೆಂಡ್ ಟೂರ್ ಪ್ಯಾಕೇಜ್ - ಕಡಿಮೆ ದರದಲ್ಲಿ ತಲಕಾಡು, ಮೇಲುಕೋಟೆ, ಚಿಕ್ಕತಿರುಪತಿ ಪ್ರವಾಸ!

ಬೆಂಗಳೂರಿನಿಂದ ವಾರಾಂತ್ಯದ ಪ್ರವಾಸ ಕೈಗೊಳ್ಳುವವರಿಗಾಗಿ ಕೆಎಸ್‌ಆರ್‌ಟಿಸಿ ಕಡಿಮೆ ದರದಲ್ಲಿ ವಿಶೇಷ ಪ್ಯಾಕೇಜ್ ಟೂರ್‌ಗಳನ್ನು ಆರಂಭಿಸಿದೆ. ಪ್ರತಿ ಶನಿವಾರ ಮತ್ತು ಭಾನುವಾರದಂದು ಲಭ್ಯವಿರುವ ಈ ಪ್ರವಾಸಗಳು ಗಗನಚುಕ್ಕಿ-ಭರಚುಕ್ಕಿ, ಕೋಟಿಲಿಂಗೇಶ್ವರ, ಮತ್ತು ಮೇಲುಕೋಟೆಯಂತಹ ಪ್ರಮುಖ ತಾಣಗಳನ್ನು ಒಳಗೊಂಡಿವೆ.
Read Full Story

07:54 PM (IST) Feb 13

Bigg Boss - ಯು- ಟರ್ನ್​ ಹೊಡೆದ್ರಾ ಅಶ್ವಿನಿ ಗೌಡ? ಗಿಲ್ಲಿ ನಟನ ಬಗ್ಗೆ ಹೇಳಿದ್ದೇ ಬೇರೆಯಂತೆ- ಅದೇನು?

ಬಿಗ್‌ಬಾಸ್‌ 12 ಮುಗಿದರೂ ಸ್ಪರ್ಧಿಗಳ ನಡುವಿನ ಜಗಳ ನಿಂತಿಲ್ಲ. ವಿನ್ನರ್ ಗಿಲ್ಲಿ ನಟನ ಗೆಲುವಿನ ಬಗ್ಗೆ ಅಸಮಾಧಾನ ಹೊರಹಾಕಿದ್ದ ಅಶ್ವಿನಿ ಗೌಡ, 'ಬಡವನ ಸೋಗು' ಎಂಬ ಪದ ಬಳಸಿ ವಿವಾದ ಸೃಷ್ಟಿಸಿದ್ದರು. ಇದೀಗ, ಅಶ್ವಿನಿ ಕೊಟ್ಟ ಸ್ಪಷ್ಟನೆ ಏನು?

Read Full Story

07:31 PM (IST) Feb 13

ಪ್ರಯಾಣಿಕರ ಗಮನಕ್ಕೆ - ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರ ರದ್ದು!

Karnataka Train Cancellations: Shimoga-Bangalore Jan Shatabdi Cancelled ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಮೇಲ್ಸೇತುವೆನಿರ್ಮಾಣ ಕಾಮಗಾರಿಯಿಂದಾಗಿ, ಬಿರೂರು-ತಾಳಗುಪ್ಪ ಮತ್ತು ಅರಸೀಕೆರೆ-ಚಿಕ್ಕಜಾಜೂರು ವಿಭಾಗಗಳಲ್ಲಿ ರೈಲ್ವೆ 'ಲೈನ್ ಬ್ಲಾಕ್' ಮಾಡಲಾಗುತ್ತಿದೆ. 

Read Full Story

06:30 PM (IST) Feb 13

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 10ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಘಾಟ್ ರಸ್ತೆಯ 7ನೇ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಚಾಲಕರು ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read Full Story

06:15 PM (IST) Feb 13

ಬಾಗಲಕೋಟೆ - ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 5 ಬಾಲಕಾರ್ಮಿಕರು ಸೇರಿದಂತೆ ಒಟ್ಟು 24 ಮಂದಿ ರಕ್ಷಣೆ!

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ, ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ 24 ಒಡಿಶಾ ಮೂಲದ ಕಾರ್ಮಿಕರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಇವರಲ್ಲಿ ಐವರು ಬಾಲಕಾರ್ಮಿಕರಿದ್ದು, ಅಮಾನವೀಯವಾಗಿ ದುಡಿಸಿಕೊಳ್ಳಲಾಗುತ್ತಿತ್ತು. ಈ ಸಂಬಂಧ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Read Full Story

06:14 PM (IST) Feb 13

ಸಾಹಸ ಸಿಂಹ ಬಿರುದು ಕೊಟ್ರೂ ವಿಷ್ಣು, ಜೋ ಸೈಮನ್ ಒಟ್ಟಿಗೆ ಸಿನಿಮಾ ಮಾಡಬಾರದು; ಧಮ್ಕಿ ಹಾಕಿ ಪತ್ರ ಬರೆದ್ರು!

ಡಾ ವಿಷ್ಣುವರ್ಧನ್‌ರಿಗೆ ಸಾಹಸಿಂಹ ಎಂಬ ಬಿರುದು ಕೊಟ್ಟಿದ್ದ ನಿರ್ದೇಶಕ ಜೋ ಸೈಮನ್‌ ಅವರು ಈಗ ಇಹಲೋಕ ತ್ಯಜಿಸಿದ್ದಾರೆ. ಆದರೆ ವಿಷ್ಣುವರ್ಧನ್‌ ಹಾಗೂ ಜೋ ಸೈಮನ್‌ ಅವರು ಸಿನಿಮಾ ಮಾಡಬಾರದು ಎಂದು ಕೆಲವರು ಪಟ್ಟು ಹಿಡಿದಿದ್ದರು.

 

Read Full Story

05:59 PM (IST) Feb 13

ಶಿವಮೊಗ್ಗ ಗಾರೆ ಮೇಸ್ತ್ರಿಯ ಮರ್ಮಾಂಗಕ್ಕೆ ಚುಚ್ಚಿ ಕೊಂಡ ಕಿರಾತಕ ಸ್ನೇಹಿತರು; ಕಲ್ಲು ಎತ್ತಿಹಾಕಿದವರು ಅಂದರ್!

ಶಿವಮೊಗ್ಗದ ಗಾಜನೂರಿನಲ್ಲಿ ಕುಡಿದ ಮತ್ತಿನ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಶ್ರೀನಿವಾಸ್ ಎಂಬ ವ್ಯಕ್ತಿಯನ್ನು ಆತನ ಸ್ನೇಹಿತರೇ ಕೈಕಾಲು ಮುರಿದು, ಮರ್ಮಾಂಗಕ್ಕೆ ಚುಚ್ಚಿ, ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.  ಪೊಲೀಸರು ಇಬ್ಬರು ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸಿದ್ದಾರೆ.

Read Full Story

05:39 PM (IST) Feb 13

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿದ್ರೆ KSRTC ಮತ್ತು BMTCಯಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಘೋಷಿಸಿವೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ  ಉಚಿತವಾಗಿ ಪ್ರಯಾಣಿಸಬಹುದು.

Read Full Story

05:33 PM (IST) Feb 13

ಸಿನಿಮಾಗಳನ್ನು ಪ್ರೀತಿಸಿ, ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೇ ಉಸಿರು ಚೆಲ್ಲಿದ ಕನ್ನಡ ನಿರ್ದೇಶಕ Joe Siman

Kannada Director Joe Siman Death: ಸಿನಿಮಾಗಳನ್ನು ಪ್ರೀತಿಸಿ, ಸಿನಿಮಾವನ್ನು ಜೀವನವಾಗಿಸಿಕೊಂಡಿದ್ದ ನಟ, ನಿರ್ದೇಶಕ ಜೋ ಸೈಮನ್‌ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

 

Read Full Story

05:23 PM (IST) Feb 13

ಬಿಗ್‌ ಬಾಸ್‌ ಮನೆಯಿಂದ ಬಂದಿದ್ದೇ ಬಂದಿದ್ದು, ಅಂದ್ಕೊಂಡಿದ್ದು ಒಂದೂ ಆಗಿಲ್ಲ - Gilli Nata ಬೇಸರ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಗಿಲ್ಲಿ ನಟ ಅವರು ದೊಡ್ಮನೆ ಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಿಗ್‌ ಬಾಸ್‌ ಶೋನಿಂದ ಇಲ್ಲಿಯವರೆಗೆ ಏನೇನು ಆಯ್ತು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

04:59 PM (IST) Feb 13

ತೆಕ್ಕಲಕೋಟೆ ಉತ್ಖನನದಲ್ಲಿ 3ನೇ ಅಸ್ಥಿಪಂಜರ ಪತ್ತೆ; ಪ್ರಾಗೈತಿಹಾಸಿಕ ಕಾಲದ ಸಮಾಧಿ ಪದ್ದತಿ ಬಿಚ್ಚಿಟ್ಟ ಕುರುಹುಗಳು!

ಬಳ್ಳಾರಿಯ ತೆಕ್ಕಲಕೋಟೆ ಉತ್ಖನನದಲ್ಲಿ ಅಂತಿಮ ಹಂತದ ಕಾರ್ಯಾಚರಣೆ ವೇಳೆ ಮೂರನೇ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ತಲೆಬುರುಡೆ ಮತ್ತು ಮಡಿಕೆ ಅವಶೇಷಗಳು ಅಂದಿನ ಅಂತ್ಯಕ್ರಿಯೆಯ ಪದ್ಧತಿಗಳ ಮೇಲೆ ಬೆಳಕು ಚೆಲ್ಲಿದ್ದು, ಈ ಐತಿಹಾಸಿಕ ಪ್ರದೇಶವನ್ನು ಸಂರಕ್ಷಿತ ಸ್ಥಳವೆಂದು ಘೋಷಿಸಲು ಪುರಾತತ್ವ ಇಲಾಖೆ ಮುಂದಾಗಿದೆ.

Read Full Story

04:48 PM (IST) Feb 13

ತುಮಕೂರು - ಸರ್ಕಾರಿ ಶಾಲೆಯಲ್ಲಿ ಬಾಲಕಿಯ ಬೆರಳು ಕಟ್, ಚಿಕಿತ್ಸೆ ಕೊಡಿಸದೆ ಬೆರಳನ್ನು ಕಸದ ಬುಟ್ಟಿಗೆ ಎಸೆದ ಶಿಕ್ಷಕರು!

ತುಮಕೂರು ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ, ಆಟವಾಡುತ್ತಿದ್ದ 1ನೇ ತರಗತಿ ವಿದ್ಯಾರ್ಥಿನಿಯ ಕೈ ಬೆರಳುಗಳು ಕಬ್ಬಿಣದ ಬಾಗಿಲಿಗೆ ಸಿಲುಕಿ ತುಂಡಾಗಿವೆ. ಗಂಭೀರ ಗಾಯಗೊಂಡರೂ ಆಸ್ಪತ್ರೆಗೆ ಸಾಗಿಸದೆ ನಿರ್ಲಕ್ಷ್ಯ ತೋರಿದ ಶಿಕ್ಷಕರು, ತುಂಡಾದ ಬೆರಳುಗಳನ್ನು ಕಸಕ್ಕೆ ಎಸೆದಿದ್ದಾರೆ.  

Read Full Story

04:17 PM (IST) Feb 13

ರೀಲ್ಸ್‌ಗೋಸ್ಕರ ಗವರ್ನ್‌ಮೆಂಟ್ ಜಾಬ್ ಆಸೆ ಬಿಟ್ಟ Munnu, ಗಗನಸಖಿ ಕೆಲಸ ಬಿಟ್ಟ Sannu; ಕನ್ನಡ ಯುಟ್ಯೂಬರ್ಸ್‌ ಕಥೆ

Kannada Youtuber Sannu Munnu Love: ಸನ್ನು ಮೂನು ಎಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ಜೋಡಿಯೊಂದು ಮದುವೆಯಾಗಿದೆ. ಮಂಡ್ಯದ ಬಿ ಗೌಡಗೆರೆ ಚಾಮುಂಡಿ ದೇವಸ್ಥಾನದಲ್ಲಿ ಧನುಶ್ರೀ-ಮಂಜು ಗೌಡ ಮದುವೆಯಾಗಿದ್ದಾರೆ. ಇವರ ಲವ್‌ಸ್ಟೋರಿಯೇ ರೋಚಕವಾಗಿದೆ.

 

Read Full Story

03:37 PM (IST) Feb 13

ಹೊಸಕೋಟೆ ದುರಂತ - ಮನೆಯಲ್ಲಿ ಹೇಳದೆ ನೈಟ್‌ರೈಡ್‌ ಹೋದ ಅಪ್ರಾಪ್ತರು! ಮಗನನ್ನು ಕಳೆದುಕೊಂಡ ಅಂಧ ತಾಯಿ! ಕಥೆ ಒಂದೊಂದಲ್ಲ

ಹೊಸಕೋಟೆ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಮತ್ತು ಓರ್ವ ಬೈಕ್ ಸವಾರ ಸೇರಿದಂತೆ ಏಳು ಮಂದಿ ದುರ್ಮರಣ ಹೊಂದಿದ್ದಾರೆ. ಅತೀವೇಗದಿಂದ ಬಂದ ಎಕ್ಸ್‌ಯುವಿ ಕಾರು ಬೈಕ್ ಹಾಗೂ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದೇ ದುರಂತಕ್ಕೆ ಕಾರಣ.

Read Full Story

03:05 PM (IST) Feb 13

ಶಿವಮೊಗ್ಗದ ಈ ಬಾಲಕನಿಗೆ 'ಕಾಲು'ಗಳೇ ಐಡಿ ಕಾರ್ಡ್‌ಗಳು! ಮುಖ ನೋಡದೇ 150 ಜನರ ಪಾದ ನೋಡಿ ಹೆಸರು ಹೇಳ್ತಾನೆ ಈ ಪ್ರತಿಭೆ!

ಶಿವಮೊಗ್ಗದ ಹೊಸನಗರ ತಾಲೂಕಿನ ವಿದ್ಯಾರ್ಥಿ ಎಸ್. ಭುವನ್, ತನ್ನ ವಿಶಿಷ್ಟ ನೆನಪಿನ ಶಕ್ತಿಯಿಂದ ಗಮನ ಸೆಳೆದಿದ್ದಾನೆ. ಈತ ತನ್ನ ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕೇವಲ ಅವರ ಕಾಲಿನ ಬೆರಳು ಹಾಗೂ ಪಾದದ ವಿನ್ಯಾಸವನ್ನು ನೋಡಿ ನಿಖರವಾಗಿ ಗುರುತಿಸುತ್ತಾನೆ.

Read Full Story

02:57 PM (IST) Feb 13

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಜಿಂಬಾಬ್ವೆ! ಆರ್‌ಸಿಬಿ ವೇಗಿ ಜಿಂಬಾಬ್ವೆ ಗೆಲುವಿನ ರೂವಾರಿ

ಟಿ20 ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾ ವಿರುದ್ಧ 23 ರನ್‌ಗಳ ಸ್ಮರಣೀಯ ಜಯ ಸಾಧಿಸಿದೆ. 170 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, ಆರ್‌ಸಿಬಿ ಮಾಜಿ ವೇಗಿ ಬ್ಲೆಸಿಂಗ್ ಮುಜರಬಾನಿ ಅವರ 4 ವಿಕೆಟ್‌ಗಳ ಮಾರಕ ದಾಳಿಗೆ ನಲುಗಿ 146 ರನ್‌ಗಳಿಗೆ ಸರ್ವಪತನ ಕಂಡಿತು.
Read Full Story

01:26 PM (IST) Feb 13

ಬಿಗ್ ಬಾಸ್ ಮನೆಯ ಚಿಕ್ಕವ್ವ ದೊಡ್ಡವ್ವ ಜೊತೆ ನಿತ್ಕೊಂಡು ಗಿಲ್ಲಿ ನಟನ ಕಿವಿ ಹಿಂಡಿದ ಒಳ್ಳೆ ಹುಡುಗ ಪ್ರಥಮ್!

ಬಿಗ್ ಬಾಸ್ ಸೀಸನ್ 4ರ ವಿಜೇತ ಪ್ರಥಮ್, ಸೀಸನ್ 12ರ ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಜಾಹ್ನವಿ ಜೊತೆ ಕಾಣಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರಿಬ್ಬರನ್ನು 'ದೊಡ್ಡವ್ವ-ಚಿಕ್ಕವ್ವ' ಎಂದು ಕರೆದಿದ್ದನ್ನು ಪ್ರಶ್ನಿಸಿ, ಪ್ರಥಮ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

Read Full Story

01:21 PM (IST) Feb 13

ಹೊಸಕೋಟೆ ದುರಂತ - ಸಿದ್ದಿಸಲಿಲ್ವಾ ಶಾಂತಿ ಹೂಮ, ಪೂಜೆಯ ಹೂವು ಬಾಡುವ ಮುನ್ನವೇ ಅದೇ ಜಾಗದಲ್ಲಿ 7 ಜನರ ಬಲಿ!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಪಘಾತಗಳನ್ನು ತಡೆಯಲು ಇದೇ ಸ್ಥಳದಲ್ಲಿ ಗ್ರಾಮಸ್ಥರು ಶಾಂತಿ ಪೂಜೆ ನಡೆಸಿದ್ದರು.

Read Full Story

01:11 PM (IST) Feb 13

ಬೀದರ್ - ಸಾಲಬಾಧೆ ತಾಳಲಾರದೇ ಬಾವಿಗೆ ಜಿಗಿದು ವ್ಯಕ್ತಿ ಆತ್ಮ೧ಹತ್ಯೆ!

ಬೀದರ್ ತಾಲೂಕಿನ ಯದಲಾಪುರ ಗ್ರಾಮದಲ್ಲಿ, ಸಾಲದ ಸುಳಿಗೆ ಸಿಲುಕಿದ್ದ ಶಿವಕುಮಾರ್ ಮೇತ್ರೆ (42) ಎಂಬುವವರು ಬಾವಿಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಮನೆ ನಿರ್ಮಾಣ ಹಾಗೂ ಆಸ್ಪತ್ರೆ ವೆಚ್ಚಕ್ಕಾಗಿ ಸುಮಾರು 5 ಲಕ್ಷ ಸಾಲ ಮಾಡಿಕೊಂಡಿದ್ದ ಅವರು, ಮಾನಸಿಕ ಖಿನ್ನತೆಯಿಂದ ಈ ದುರಂತ ನಿರ್ಧಾರ

Read Full Story

01:10 PM (IST) Feb 13

ದಾಸನ ಬರ್ತಡೇಗೂ ಮುನ್ನ ಗುಡ್ ನ್ಯೂಸ್ - ಕಾನೂನಿನ ಆ ಅವಕಾಶ ಬಳಸಿಕೊಂಡು ಜೈಲಿನಿಂದ ಹೊರಬರಲು ದಿನಾಂಕ ಫಿಕ್ಸ್?

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು 'ಡಿ ಉತ್ಸವ'ವಾಗಿ ಆಚರಿಸುತ್ತಿದ್ದಾರೆ. ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಮುಗಿದ ನಂತರ, ಈ ವರ್ಷದ ಮಧ್ಯಭಾಗದಲ್ಲಿ ದರ್ಶನ್‌ಗೆ ಷರತ್ತುಬದ್ಧ ಜಾಮೀನು ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Read Full Story

12:46 PM (IST) Feb 13

ಹೊಸಕೋಟೆ ಭೀಕರ ದುರಂತ - ಎಲ್ಲಾ ಏರ್‌ಬ್ಯಾಗ್ ಧ್ವಂಸ, ಕಾರು ಅದೆಷ್ಟು ವೇಗದಲ್ಲಿ ಇತ್ತು ಎಂಬುದಕ್ಕೆ ಸಾಕ್ಷಿ!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವಿನ ಡಿಕ್ಕಿಯಿಂದಾಗಿ, ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Full Story

12:15 PM (IST) Feb 13

ಚಿಕ್ಕಮಗಳೂರು - ಬಿರುಗಾಳಿಗೆ ಹಾರಿಹೋದ ಶಾಲೆಯ ಛಾವಣಿ ಹೆಂಚುಗಳು; ಇಬ್ಬರು ಮಕ್ಕಳಿಗೆ ಗಾಯ, ತಪ್ಪಿದ ಭಾರೀ ಅನಾಹುತ!

ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಶಾಲೆಯ ಮೇಲ್ಛಾವಣಿ ಭೀಕರ ಬಿರುಗಾಳಿಗೆ ಹಾರಿಹೋಗಿದೆ. ಊಟದ ಸಮಯದಲ್ಲಿ ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read Full Story

12:10 PM (IST) Feb 13

ಆರ್‌ಎಸ್‌ಎಸ್‌ಗೆ ಬೌದ್ಧಿಕ ನೆಲಗಟ್ಟು ಕೊಟ್ಟ ಗುರೂಜಿ

ಹಿಂದೂ ಸಮಾಜದ ಜಾತೀಯತೆ, ಅಸ್ಪೃಶ್ಯತೆಯ ವಿಷಜಾಲ ಭೇದಿಸುವ ತಂತ್ರ ಹೇಳಿದ ಆರ್‌ಎಸ್‌ಎಸ್‌ ಸರಸಂಘಚಾಲಕ

ಯಾವುದೋ ಕಾಲಘಟ್ಟದಲ್ಲಿ ಹಿಂದೂ ಸಮಾಜದ ಭಾಗವಾಗಿರುವ ಜಾತಿ, ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಯನ್ನು ತೊಲಗಿಸಲು ಪ್ರತಿಯೊಬ್ಬ ಇಂದು ಸಂಕಲ್ಪ ಮಾಡಬೇಕೆಂಬ ಸಂದೇಶ ನೀಡಿದ್ದರು.

Read Full Story

12:04 PM (IST) Feb 13

ಶ್ರೀರಾಮನ ಜನ್ಮನಕ್ಷತ್ರದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ಅರ್ಥಪೂರ್ಣ ಹೆಸರಿಟ್ಟ ರಾಮ್‌ ಚರಣ್‌ ತೇಜ, ಉಪಾಸನಾ!

Actor Ram Charan Teja And Upasana Konidela Babies: ಮೆಗಾಸ್ಟಾರ್‌ ಚಿರಂಜೀವಿ ಆಸೆಯಂತೆ ಅವರ ಮನೆಗೆ ವಾರಸುದಾರ ಬಂದಿದ್ದಾನೆ. ರಾಮ್‌ ಚರಣ್‌ ತೇಜ ಹಾಗೂ ಉಪಾಸನಾ ದಂಪತಿಯು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈಗ ಈ ಮಕ್ಕಳಿಗೆ ನಾಮಕರಣ ಆಗಿದೆಯಂತೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

Read Full Story

11:29 AM (IST) Feb 13

ಹೊಸಕೋಟೆ ಭೀಕರ ಅಪಘಾತ - 7 ಮಂದಿ ಮೃತರ ಗುರುತು ಪತ್ತೆ, ಸಾವನ್ನಪ್ಪಿದವರು 17 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಶುಕ್ರವಾರ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ನಡೆದ ಈ ದುರಂತದಲ್ಲಿ ಮೃತಪಟ್ಟವರಲ್ಲಿ ಆರು ವಿದ್ಯಾರ್ಥಿಗಳು ಮತ್ತು ಓರ್ವ ಬೈಕ್ ಸವಾರ ಸೇರಿದ್ದಾರೆ.
Read Full Story

11:27 AM (IST) Feb 13

ಪಾರ್ವತಮ್ಮ ರಾಜ್‌ಮಾರ್ ತಂಗಿ ಪುತ್ರ ಸಂತೋಷ್ ಕುಮಾರ್ Yuva Sarkar Movie ಸೇರ್ಕೊಂಡ ಬಿಗ್‌ ಬಾಸ್‌ ಜಾಹ್ನವಿ

ವೀರೆನ್ ಕೇಶವ್, ಧರ್ಮ ಕೀರ್ತಿರಾಜ್, ಜಾಹ್ನವಿ ನಟನೆಯ ಯುವ ಸರ್ಕಾರ್‌ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಬಗ್ಗೆ ಸಿನಿಮಾ ತಂಡವು ಮಾಧ್ಯಮದ ಮುಂದೆ ಬಂದು, ಮಾತನಾಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Read Full Story

11:11 AM (IST) Feb 13

World Radio Day 2026 ರೇಡಿಯೋ, ಶ್ರವಣೇಂದ್ರಿಯ ಮಾಧ್ಯಮಕ್ಕೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ನಿರೂಪಕನೇ ಬೆಸ್ಟ್‌

ವಿಶ್ವ ಬಾನುಲಿ ದಿನದ ಅಂಗವಾಗಿ, ಈ ಲೇಖನವು ರೇಡಿಯೋ ಮಾಧ್ಯಮದ ಮೇಲೆ ಕೃತಕ ಬುದ್ಧಿಮತ್ತೆಯ (AI) ಪ್ರಭಾವವನ್ನು ಪರಿಶೀಲಿಸುತ್ತದೆ. AI ತಂತ್ರಜ್ಞಾನವು ಕಾರ್ಯಕ್ರಮ ನಿರ್ಮಾಣ, ವೈಯಕ್ತೀಕರಣ ಮತ್ತು ಭಾಷಾಂತರದಲ್ಲಿ ಕ್ರಾಂತಿಯನ್ನು ತರುತ್ತಿದ್ರೂ ಮಾನವ ಉದ್ಯೋಗ ಮತ್ತು ಭಾವನಾತ್ಮಕ ಸ್ಪರ್ಶದ ಬಗ್ಗೆ ಕಳವಳಗಳಿವೆ.

Read Full Story

10:49 AM (IST) Feb 13

ಫೂಟ್‌ಬಾತ್‌ನಲ್ಲಿ ಬಂದ ವ್ಯಕ್ತಿಗೆ ಸೆಟೆದು ನಿಂತು ಗ್ರಹಚಾರ ಬಿಡಿಸಿದ ಅಜ್ಜಿ; ಭೇಷ್‌ ಎಂದ ನಟಿ ಸುಹಾಸಿನಿ!

Grandma Video: ಪುರುಷನೋರ್ವ ಫೂಟ್‌ಬಾತ್‌ನಲ್ಲಿ ಸ್ಕೂಟಿಯಲ್ಲಿ ಬಂದಿದ್ದನು. ಇದನ್ನು ವೃದ್ಧೆಯೋರ್ವರು ತಡೆದಿದ್ದಾರೆ. ನಿಯಮ ಉಲ್ಲಂಘನೆ ಮಾಡಿದ ಪುರುಷನಿಗೆ ವೃದ್ಧೆ ಬುದ್ಧಿ ಕಲಿಸಿದ್ದಾರೆ.

Read Full Story

10:45 AM (IST) Feb 13

ಚಿನ್ನ ಬೆಳ್ಳಿ ಖರೀದಿಸುವವರಿಗೆ ಶುಭ ಶುಕ್ರವಾರ; ಮಹಾ ಕುಸಿತ ಕಂಡ ಬಂಗಾರದ ಬೆಲೆ! ಇಂದಿನ ಚಿನ್ನದ ರೇಟ್ ಎಷ್ಟು?

ಬೆಂಗಳೂರು: ಚಿನ್ನ ಬೆಳ್ಳಿ ಖರೀದಿಸುವವರ ಪಾಲಿಗೆ ಇಂದು ಶುಭ ಶುಕ್ರವಾಗಿ ಪರಿಣಮಿಸಿದ್ದು, ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡಿದೆ. ಫೆಬ್ರವರಿ 14ರ ಶುಕ್ರವಾರ ಬೆಳ್ಳಂಬೆಳಗ್ಗೆ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ನೋಡೋಣ ಬನ್ನಿ.

 

Read Full Story

10:16 AM (IST) Feb 13

ಹಗಲಲ್ಲಿ ಚಿರತೆ ಭಯ, ರಾತ್ರಿಯಲ್ಲಿ ಕರಡಿ ಕಾಟ - ಕೊಪ್ಪಳ ಜಿಲ್ಲೆಯಲ್ಲಿ ವನ್ಯಜೀವಿಗಳ ಆರ್ಭಟಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಚಿರತೆ ಹಾಗೂ ಕರಡಿಗಳ ಹಾವಳಿ ಹೆಚ್ಚಾಗಿದ್ದು, ಜನವಸತಿ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಚಿರತೆಯೊಂದು ಕಾಡುಹಂದಿಯನ್ನು ಬಲಿ ಪಡೆದರೆ, ಆಹಾರ ಅರಸಿ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದು, ಅರಣ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
Read Full Story

10:07 AM (IST) Feb 13

ಇದು ವಿಶ್ವದ ದುಬಾರಿ ಅಣಬೆ, ಕೆಜಿಗೆ ಬರೋಬ್ಬರಿ ₹ 15 ಲಕ್ಷ!

ಇದು, ಅಂತಿಂಥ ಅಣಬೆಯಲ್ಲ, ಜಗತ್ತಿನ ದುಬಾರಿ ಅಣಬೆಯಾಗಿದೆ. ಯರ್ಸಗುಂಬಾ (yarsagumba) ಎಂದು ಕರೆಯಲ್ಪಡುವ ಈ ಅಣಬೆ ಕೆಜಿಗೆ ಬರೋಬ್ಬರಿ ₹15 ಲಕ್ಷ! ಕೊಪ್ಪಳ ನಗರದ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿರುವ ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಇಡಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.

Read Full Story

09:02 AM (IST) Feb 13

Byrathi Basavaraj ಬಿಕ್ಲು ಶಿವ ಹತ್ಯೆ ಪ್ರಕರಣ - ರಾತ್ರೋರಾತ್ರಿ ಅರೆಸ್ಟ್ ಪ್ರೊಸೆಸ್ ಕಂಪ್ಲೀಟ್; ಇಂದು ಕೋರ್ಟ್‌ಗೆ ಹಾಜರು!

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯ ಪ್ರಮುಖ ಆರೋಪಿ ಜಗ್ಗನೊಂದಿಗೆ ನಿಕಟ ಸಂಪರ್ಕ, ಜಮೀನು ವೈಷಮ್ಯ, ಮತ್ತು ಫೋನ್ ಕರೆಗಳಂತಹ ಸಾಕ್ಷ್ಯಗಳ ಆಧಾರದ ಮೇಲೆ ಅವರ ವಿರುದ್ಧ ತನಿಖೆ ನಡೆಯುತ್ತಿದೆ.
Read Full Story

08:34 AM (IST) Feb 13

Hampi Utsav 2026 - ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ;

ವಿಶ್ವಪರಂಪರೆ ತಾಣ ಹಂಪಿಯು ಮೂರು ದಿನಗಳ ಉತ್ಸವಕ್ಕೆ ಸಜ್ಜಾಗಿದ್ದು, ವಿಜಯನಗರ ಸಾಮ್ರಾಜ್ಯದ ಭವ್ಯ ಪರಂಪರೆಯನ್ನು ಸ್ಮರಿಸಲಿದೆ. ಕಲೆ, ಸಾಹಿತ್ಯ, ಸಂಗೀತದ ಈ ಮಹಾಸಂಗಮದಲ್ಲಿ ಖ್ಯಾತ ತಾರೆಯರ ಮನರಂಜನೆ, ಧ್ವನಿ ಮತ್ತು ಬೆಳಕು ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
Read Full Story

08:21 AM (IST) Feb 13

Hebbal-Sarjapur metro line - ಬೆಂಗಳೂರು ಡಬಲ್ ಡೆಕ್ಕರ್ ಪ್ಲಾನ್‌ಗೆ ರೆಡ್ ಸಿಗ್ನಲ್!

ಹೆಬ್ಬಾಳ-ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ ಕೆಂಪು ಮಾರ್ಗದ ಡಬಲ್‌ ಡೆಕ್ಕರ್‌ ವಿನ್ಯಾಸಕ್ಕೆ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿನ್ಯಾಸವು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ದುರ್ಬಲಗೊಳಿಸಬಹುದು ಎಂದು ಕೇಂದ್ರ ಆತಂಕ ವ್ಯಕ್ತಪಡಿಸಿದೆ.

Read Full Story

More Trending News