LIVE NOW
Published : Feb 13, 2026, 07:58 AM ISTUpdated : Feb 13, 2026, 11:29 AM IST

Karnataka Live: ಹೊಸಕೋಟೆ ಭೀಕರ ಅಪಘಾತ - 7 ಮಂದಿ ಮೃತರ ಗುರುತು ಪತ್ತೆ, ಸಾವನ್ನಪ್ಪಿದವರು 17 ವರ್ಷದ ವಿದ್ಯಾರ್ಥಿಗಳು!

ಸಾರಾಂಶ

ಬೆಂಗಳೂರು (ಫೆ.13): ವಿದೇಶದಿಂದ ಪೆಪ್ಪರ್‌ಮೆಂಟ್ ಹಾಗೂ ಸಿಹಿ ತಿನಿಸುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಾಣಿಕೆಗೆ ಯತ್ನಿಸಿದ್ದ ಪೆಡ್ಲರ್‌ನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬ್ಯಾಂಕಾಕ್‌ನಿಂದ ಕೆಐಎಗೆ ಬಂದಿಳಿದ ಪ್ರಯಾಣಿಕನನ್ನು ಶಂಕೆ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆಗೊಳಪಡಿಸಿದ್ದಾರೆ. ಆಗ ಆತನ ಬ್ಯಾಗ್‌ನಲ್ಲಿದ್ದ ಪೆಪ್ಪರ್‌ಮೆಂಟ್‌ (ಕ್ಯಾಡಿ) ಹಾಗೂ ಸಿಹಿ ತಿನಿಸುಗಳ ಪೊಟ್ಟಣಗಳನ್ನು ತೆರೆದು ನೋಡಿದಾಗ 4.25 ಲಕ್ಷ ರು. ಮೌಲ್ಯದ 1.7 ಕೆಜಿ ಹ್ಯಾಶೀಶ್ ಹಾಗೂ ಚರಸ್‌ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಟ್ಟಣ ತೆರೆದು ಪರಿಶೀಲಿಸುವ ಸಮಯದ ವಿಡಿಯೋ ಹಾಗೂ ಪೋಟೋವನ್ನು ಕಸ್ಟಮ್ಸ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ.

ಮತ್ತೆ 3.39 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಕೆಐಎನಲ್ಲಿ ಕಸ್ಟಮ್ಸ್ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ 3.39 ಕೋಟಿ ರು. ಮೌಲ್ಯದ 9.7 ಕೆಜಿ ಹೈಡ್ರೋ ಗಾಂಜಾ ಜಪ್ತಿಯಾಗಿದೆ.

ಕೆಐಎಗೆ ಬುಧವಾರ ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನ ಬಳಿ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಹೈಡ್ರೋ ಗಾಂಜಾ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆತನ ಬ್ಯಾಗ್‌ನಲ್ಲಿ ಗಾಂಜಾ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

11:29 AM (IST) Feb 13

ಹೊಸಕೋಟೆ ಭೀಕರ ಅಪಘಾತ - 7 ಮಂದಿ ಮೃತರ ಗುರುತು ಪತ್ತೆ, ಸಾವನ್ನಪ್ಪಿದವರು 17 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಶುಕ್ರವಾರ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ನಡೆದ ಈ ದುರಂತದಲ್ಲಿ ಮೃತಪಟ್ಟವರಲ್ಲಿ ಆರು ವಿದ್ಯಾರ್ಥಿಗಳು ಮತ್ತು ಓರ್ವ ಬೈಕ್ ಸವಾರ ಸೇರಿದ್ದಾರೆ.
Read Full Story

11:27 AM (IST) Feb 13

ಪಾರ್ವತಮ್ಮ ರಾಜ್‌ಮಾರ್ ತಂಗಿ ಪುತ್ರ ಸಂತೋಷ್ ಕುಮಾರ್ Yuva Sarkar Movie ಸೇರ್ಕೊಂಡ ಬಿಗ್‌ ಬಾಸ್‌ ಜಾಹ್ನವಿ

ವೀರೆನ್ ಕೇಶವ್, ಧರ್ಮ ಕೀರ್ತಿರಾಜ್, ಜಾಹ್ನವಿ ನಟನೆಯ ಯುವ ಸರ್ಕಾರ್‌ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಬಗ್ಗೆ ಸಿನಿಮಾ ತಂಡವು ಮಾಧ್ಯಮದ ಮುಂದೆ ಬಂದು, ಮಾತನಾಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Read Full Story

11:11 AM (IST) Feb 13

World Radio Day 2026 ರೇಡಿಯೋ, ಶ್ರವಣೇಂದ್ರಿಯ ಮಾಧ್ಯಮಕ್ಕೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ನಿರೂಪಕನೇ ಬೆಸ್ಟ್‌

ವಿಶ್ವ ಬಾನುಲಿ ದಿನದ ಅಂಗವಾಗಿ, ಈ ಲೇಖನವು ರೇಡಿಯೋ ಮಾಧ್ಯಮದ ಮೇಲೆ ಕೃತಕ ಬುದ್ಧಿಮತ್ತೆಯ (AI) ಪ್ರಭಾವವನ್ನು ಪರಿಶೀಲಿಸುತ್ತದೆ. AI ತಂತ್ರಜ್ಞಾನವು ಕಾರ್ಯಕ್ರಮ ನಿರ್ಮಾಣ, ವೈಯಕ್ತೀಕರಣ ಮತ್ತು ಭಾಷಾಂತರದಲ್ಲಿ ಕ್ರಾಂತಿಯನ್ನು ತರುತ್ತಿದ್ರೂ ಮಾನವ ಉದ್ಯೋಗ ಮತ್ತು ಭಾವನಾತ್ಮಕ ಸ್ಪರ್ಶದ ಬಗ್ಗೆ ಕಳವಳಗಳಿವೆ.

Read Full Story

10:49 AM (IST) Feb 13

ಫೂಟ್‌ಬಾತ್‌ನಲ್ಲಿ ಬಂದ ವ್ಯಕ್ತಿಗೆ ಸೆಟೆದು ನಿಂತು ಗ್ರಹಚಾರ ಬಿಡಿಸಿದ ಅಜ್ಜಿ; ಭೇಷ್‌ ಎಂದ ನಟಿ ಸುಹಾಸಿನಿ!

Grandma Video: ಪುರುಷನೋರ್ವ ಫೂಟ್‌ಬಾತ್‌ನಲ್ಲಿ ಸ್ಕೂಟಿಯಲ್ಲಿ ಬಂದಿದ್ದನು. ಇದನ್ನು ವೃದ್ಧೆಯೋರ್ವರು ತಡೆದಿದ್ದಾರೆ. ನಿಯಮ ಉಲ್ಲಂಘನೆ ಮಾಡಿದ ಪುರುಷನಿಗೆ ವೃದ್ಧೆ ಬುದ್ಧಿ ಕಲಿಸಿದ್ದಾರೆ.

Read Full Story

10:45 AM (IST) Feb 13

ಚಿನ್ನ ಬೆಳ್ಳಿ ಖರೀದಿಸುವವರಿಗೆ ಶುಭ ಶುಕ್ರವಾರ; ಮಹಾ ಕುಸಿತ ಕಂಡ ಬಂಗಾರದ ಬೆಲೆ! ಇಂದಿನ ಚಿನ್ನದ ರೇಟ್ ಎಷ್ಟು?

ಬೆಂಗಳೂರು: ಚಿನ್ನ ಬೆಳ್ಳಿ ಖರೀದಿಸುವವರ ಪಾಲಿಗೆ ಇಂದು ಶುಭ ಶುಕ್ರವಾಗಿ ಪರಿಣಮಿಸಿದ್ದು, ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡಿದೆ. ಫೆಬ್ರವರಿ 14ರ ಶುಕ್ರವಾರ ಬೆಳ್ಳಂಬೆಳಗ್ಗೆ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ನೋಡೋಣ ಬನ್ನಿ.

 

Read Full Story

10:16 AM (IST) Feb 13

ಹಗಲಲ್ಲಿ ಚಿರತೆ ಭಯ, ರಾತ್ರಿಯಲ್ಲಿ ಕರಡಿ ಕಾಟ - ಕೊಪ್ಪಳ ಜಿಲ್ಲೆಯಲ್ಲಿ ವನ್ಯಜೀವಿಗಳ ಆರ್ಭಟಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಚಿರತೆ ಹಾಗೂ ಕರಡಿಗಳ ಹಾವಳಿ ಹೆಚ್ಚಾಗಿದ್ದು, ಜನವಸತಿ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಚಿರತೆಯೊಂದು ಕಾಡುಹಂದಿಯನ್ನು ಬಲಿ ಪಡೆದರೆ, ಆಹಾರ ಅರಸಿ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದು, ಅರಣ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
Read Full Story

10:07 AM (IST) Feb 13

ಇದು ವಿಶ್ವದ ದುಬಾರಿ ಅಣಬೆ, ಕೆಜಿಗೆ ಬರೋಬ್ಬರಿ ₹ 15 ಲಕ್ಷ!

ಇದು, ಅಂತಿಂಥ ಅಣಬೆಯಲ್ಲ, ಜಗತ್ತಿನ ದುಬಾರಿ ಅಣಬೆಯಾಗಿದೆ. ಯರ್ಸಗುಂಬಾ (yarsagumba) ಎಂದು ಕರೆಯಲ್ಪಡುವ ಈ ಅಣಬೆ ಕೆಜಿಗೆ ಬರೋಬ್ಬರಿ ₹15 ಲಕ್ಷ! ಕೊಪ್ಪಳ ನಗರದ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿರುವ ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಇಡಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.

Read Full Story

09:02 AM (IST) Feb 13

Byrathi Basavaraj ಬಿಕ್ಲು ಶಿವ ಹತ್ಯೆ ಪ್ರಕರಣ - ರಾತ್ರೋರಾತ್ರಿ ಅರೆಸ್ಟ್ ಪ್ರೊಸೆಸ್ ಕಂಪ್ಲೀಟ್; ಇಂದು ಕೋರ್ಟ್‌ಗೆ ಹಾಜರು!

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯ ಪ್ರಮುಖ ಆರೋಪಿ ಜಗ್ಗನೊಂದಿಗೆ ನಿಕಟ ಸಂಪರ್ಕ, ಜಮೀನು ವೈಷಮ್ಯ, ಮತ್ತು ಫೋನ್ ಕರೆಗಳಂತಹ ಸಾಕ್ಷ್ಯಗಳ ಆಧಾರದ ಮೇಲೆ ಅವರ ವಿರುದ್ಧ ತನಿಖೆ ನಡೆಯುತ್ತಿದೆ.
Read Full Story

08:34 AM (IST) Feb 13

Hampi Utsav 2026 - ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ;

ವಿಶ್ವಪರಂಪರೆ ತಾಣ ಹಂಪಿಯು ಮೂರು ದಿನಗಳ ಉತ್ಸವಕ್ಕೆ ಸಜ್ಜಾಗಿದ್ದು, ವಿಜಯನಗರ ಸಾಮ್ರಾಜ್ಯದ ಭವ್ಯ ಪರಂಪರೆಯನ್ನು ಸ್ಮರಿಸಲಿದೆ. ಕಲೆ, ಸಾಹಿತ್ಯ, ಸಂಗೀತದ ಈ ಮಹಾಸಂಗಮದಲ್ಲಿ ಖ್ಯಾತ ತಾರೆಯರ ಮನರಂಜನೆ, ಧ್ವನಿ ಮತ್ತು ಬೆಳಕು ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
Read Full Story

08:21 AM (IST) Feb 13

Hebbal-Sarjapur metro line - ಬೆಂಗಳೂರು ಡಬಲ್ ಡೆಕ್ಕರ್ ಪ್ಲಾನ್‌ಗೆ ರೆಡ್ ಸಿಗ್ನಲ್!

ಹೆಬ್ಬಾಳ-ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ ಕೆಂಪು ಮಾರ್ಗದ ಡಬಲ್‌ ಡೆಕ್ಕರ್‌ ವಿನ್ಯಾಸಕ್ಕೆ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿನ್ಯಾಸವು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ದುರ್ಬಲಗೊಳಿಸಬಹುದು ಎಂದು ಕೇಂದ್ರ ಆತಂಕ ವ್ಯಕ್ತಪಡಿಸಿದೆ.

Read Full Story

More Trending News