ರಾಜ್ಯದ ಅನ್ನದಾತರಿಗೆ ಗುಡ್‌ ನ್ಯೂಸ್.. 6 ತಿಂಗಳ ಬಳಿಕ KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ

Published : Jul 06, 2026, 09:09 AM IST
KRS Dam

ಸಾರಾಂಶ

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ, ಕೆಆರ್‌ಎಸ್ ಜಲಾಶಯದ ಒಳಹರಿವು ಕಳೆದ ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆಯು ಮಂಡ್ಯ ಮತ್ತು ಮೈಸೂರು ಭಾಗದ ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದು, ಕುಡಿಯುವ ನೀರಿನ ಸಮಸ್ಯೆ ನೀಗುವ ನಿರೀಕ್ಷೆಯಿದೆ.

ಮಂಡ್ಯ: ರಾಜ್ಯದ ಜನತೆಗೆ ಅದರಲ್ಲೂ ವಿಶೇಷವಾಗಿ ಕಾವೇರಿ ನಂಬಿರುವ ಅನ್ನದಾತರಿಗೆ ಕಡೆಗೂ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಕಳೆದ ಆರು ತಿಂಗಳಿನಿಂದ ಮಳೆಯಿಲ್ಲದೆ ಸೊರಗಿದ್ದ ಕಾವೇರಿ ಜಲಾನಯನ ಪ್ರದೇಶದಲ್ಲಿ ಈಗ ಮಳೆ ಚುರುಕುಗೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕನ್ನಂಬಾಡಿ (KRS) ಜಲಾಶಯಕ್ಕೆ ಜೀವಕಳೆ ಬಂದಿದೆ.

ಒಂದೇ ದಿನದಲ್ಲಿ ಭಾರೀ ಏರಿಕೆ

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನಿನ್ನೆ ಕೇವಲ 1,449 ಕ್ಯೂಸೆಕ್ ಇದ್ದ ಒಳಹರಿವು, ಇಂದು ಬರೋಬ್ಬರಿ 4,291 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದು ಕಳೆದ ಆರು ತಿಂಗಳಲ್ಲೇ ದಾಖಲಾದ ಗರಿಷ್ಠ ಒಳಹರಿವು ಎಂಬುದು ಗಮನಾರ್ಹ.

ಬೇಸಿಗೆಯ ಕಡು ಬಿಸಿಲು ಮತ್ತು ನೀರಿನ ಕೊರತೆಯಿಂದ ಕಂಗಾಲಾಗಿದ್ದ ಮಂಡ್ಯ, ಮೈಸೂರು ಭಾಗದ ರೈತರಿಗೆ ಈ ಬೆಳವಣಿಗೆ ಹೊಸ ಭರವಸೆ ನೀಡಿದೆ. ಕುಡಿಯುವ ನೀರಿನ ಸಮಸ್ಯೆ ನೀಗುವುದರ ಜೊತೆಗೆ, ಮುಂಗಾರು ಮಳೆ ಹೀಗೆಯೇ ಮುಂದುವರಿದರೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂಬ ಆಶಯ ವ್ಯಕ್ತವಾಗಿದೆ.

ಇಂದಿನ ಕೆಆರ್‌ಎಸ್ ಜಲಾಶಯದ ಮಟ್ಟ

  • ಗರಿಷ್ಠ ಮಟ್ಟ: 124.80 ಅಡಿಗಳು
  • ಇಂದಿನ ನೀರಿನ ಮಟ್ಟ: 80.90 ಅಡಿಗಳು (ನಿನ್ನೆ 81.55 ಅಡಿ ಇತ್ತು, ಒಳಹರಿವು ಹೆಚ್ಚಿರುವುದರಿಂದ ಶೀಘ್ರವೇ ಮಟ್ಟ ಏರಲಿದೆ)
  • ಇಂದಿನ ಒಳಹರಿವು: 4,291 ಕ್ಯೂಸೆಕ್
  • ಇಂದಿನ ಹೊರಹರಿವು: 764 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 TMC
  • ಇಂದಿನ ಒಟ್ಟು ನೀರಿನ ಸಂಗ್ರಹ: 11.487 TMC

ಮುಂದುವರಿದ ಮಳೆ ಮುನ್ಸೂಚನೆ

ಕೊಡಗು ಸೇರಿದಂತೆ ಕಾವೇರಿ ಹರಿವಿನ ಭಾಗಗಳಲ್ಲಿ ಮಳೆ ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಇನ್ನು ಹೆಚ್ಚಾಗುವ ನಿರೀಕ್ಷೆಯಿದೆ. ಒಟ್ಟಿನಲ್ಲಿ ವರುಣನ ಕೃಪೆಯಿಂದ ಕಾವೇರಿ ಒಡಲು ತುಂಬುತ್ತಿರುವುದು ನಾಡಿನ ಜನರಲ್ಲಿ ಸಂತಸ ತಂದಿದೆ.

PREV
Read more Articles on
click me!

Recommended Stories

ಡಿಕೆಶಿ ಸಿಎಂ ಆಗಿ ಒಂದು ತಿಂಗಳು ಕಳೆದಿಲ್ಲ, ರಾಜ್ಯದ ಎಲ್ಲ ಡ್ಯಾಂಗಳು ಖಾಲಿ: ಆರ್ ಅಶೋಕ್ ವಾಗ್ದಾಳಿ, ರೈತರಿಗೆ 50 ಸಾವಿರ ಪರಿಹಾರಕ್ಕೆ ಆಗ್ರಹ
Bengaluru-Mysuru Expressway ಗುಂಡು ಹಾರಿಸಿ ಟ್ರಕ್ ದರೋಡೆ ಯತ್ನ: ಪ್ರಭಾವಿ ಪುತ್ರ ಸೇರಿ 7 ಮಂದಿ ಬಂಧನ