ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಮೈತ್ರಿ ಪಕ್ಷದ ಮುಖಂಡ

Published : Nov 26, 2019, 05:37 PM IST
ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಮೈತ್ರಿ ಪಕ್ಷದ ಮುಖಂಡ

ಸಾರಾಂಶ

ಮೈತ್ರಿಯಲ್ಲಿದ್ದಾಗಲೇ ಮೈತ್ರಿ ಪಕ್ಷದ ಮುಖಂಡ ಹಾಗೂ ಕೇಂದ್ರ ಸಚಿವ ಇದೀಗ ಬಿಜೆಪಿ ಶಾಕ್ ನೀಡಿದ್ದಾರೆ. ಅಧಿಕಾರ ಕಳೆದುಕೊಂಡಲ್ಲಿ ಮೈತ್ರಿಯನ್ನೂ ಕೂಡ ಮುರಿದುಕೊಳ್ಳುವುದಾಗಿ ಬಹಿರಂಗವಾಗಿ ಹೇಳಿದ್ದಾರೆ. 

ಮುಂಬೈ: ಗಾಳಿ ಬಂದಾಗ ತೂರಿಕೋ ಎನ್ನುವಂತೆ, ಕೆಲ ಪಕ್ಷಗಳು ಪದೇ ಪದೇ ನಿಷ್ಠೆ ಬದಲಾಯಿಸುವ ಮೂಲಕ ಅಧಿಕಾರ ಹಿಡಿಯುವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ರಾಜಕೀಯದಲ್ಲಿ ಸಾಮಾನ್ಯ. 

ಹಾಗೆಂದು ಇದನ್ನು ಯಾರೂ ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ. ಆದರೆ ಹಾಲಿ ಎನ್‌ಡಿಎದ ಭಾಗವಾಗಿರುವ ಆರ್‌ಪಿಐ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ, ಈ ವಿಷಯದಲ್ಲಿ ನಿಜ ಒಪ್ಪಿಕೊಂಡಿದ್ದಾರೆ.

 ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಠಾವಳೆ ‘ಈ ಹಿಂದೆ ನಾನು 10-15 ವರ್ಷ ಕಾಂಗ್ರೆಸ್‌ ಜೊತೆ ಇದ್ದೆ. ಇದೀಗ ಎನ್‌ಡಿಎದ ಭಾಗವಾಗಿರುವೆ. ಇಲ್ಲೇ 15-20 ವರ್ಷ ಇರಬೇಕೆಂಬುದು ನನ್ನ ಆಶಯ. ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಅದರ ಜೊತೆಗೆ ಇರುವೆ. ಮುಂದೆ ಗಾಳಿ ಯಾವ ಕಡೆ ತಿರುಗುತ್ತದೆಯೋ ಗೊತ್ತಿಲ್ಲ. ಆಗ ಮೈತ್ರಿಕೂಟ ಬದಲಾವಣೆಯ ಚಿಂತೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.

PREV
click me!

Recommended Stories

Amruthadhaare Serial: ಹೆಣ್ಣಿನ ಕಣ್ಣೀರಿನ ಶಾಪ ಬಿಡ್ಲೇ ಇಲ್ಲ, ಮತ್ತೆ ಬಂದ ದಿಯಾ; ಸರ್ವನಾಶವಾದ ಜಯದೇವ್‌
ಪಿಎಫ್ ಹಣಕ್ಕಾಗಿ ಇನ್ನು ಎಚ್‌ಆರ್ ಹಿಂದೆ ಅಲೆಯಬೇಕಿಲ್ಲ: ಆಧಾರ್ ಇದ್ದರೆ ಸಾಕು, ಹಳೆಯ ಖಾತೆಯ ಹಣ ನಿಮ್ಮ ಜೇಬಿಗೆ!