
ಆರ್.ಕೇಶವಮೂರ್ತಿ
ಇಂಥ ಕತೆ ನೂರೆಂಟು ಬಂದಿರಬಹುದು. ಆದರೆ, ಇಂಥ ಹುಡುಗರ ಅಂತ್ಯ ಹೇಗಿರುತ್ತದೆ ಎನ್ನುವ ವಿಚಾರದಲ್ಲಿ ನಿರ್ದೇಶಕ ಚಂದ್ರಹಾಸ್ ಹೊಸತನ ಕಾಯ್ದುಕೊಂಡಿದ್ದಾರೆ. ಇದೇ ‘ಕಾಗೆಮೊಟ್ಟೆ’ ಚಿತ್ರದ ಪ್ಲಸ್ಪಾಯಿಂಟ್.
ಕೊಳ್ಳೆಗಾಲದ ಕಡೆಯ ಮೂವರು ಹುಡುಗರು. ಮನೆಯಲ್ಲಿ ಹೇಳೋರು ಕೇಳೋರು ಇಲ್ಲದವರು. ಜೀವನದಲ್ಲಿ ದುಡ್ಡು ಮಾಡಬೇಕು. ಜತೆಗೆ ಬೆಂಗಳೂರಿನಲ್ಲಿ ಒಬ್ಬ ಡಾನ್ ಇದ್ದಾನೆ. ಅವನನ್ನು ಸಾಯಿಸಿ ಆ ಜಾಗದಲ್ಲಿ ತಾವು ಕೂರಬೇಕು ಎನ್ನುವ ಪಕ್ಕಾ ಪ್ಲಾನ್ನೊಂದಿಗೆ ಬೆಂಗಳೂರಿಗೆ ಬರುವ ಪಿಳ್ಳಾ, ಗೋವಿ ಮತ್ತು ಕೃಷ್ಣ ಪೊಲೀಸ್ ಹಿಟ್ ಲಿಸ್ಟ್ಗೆ ಸೇರುತ್ತಾರೆ. ತೀರಾ ಚಿಕ್ಕ ವಯಸ್ಸಿಗೆ ನೆತ್ತರು ಹರಿಸುತ್ತಾರೆ. ಕಾಸು ಕೊಟ್ಟರೆ ಯಾರನ್ನು ಬೇಕಾದರೂ ಕೊಲೆ ಮಾಡುವ ಇವರಲ್ಲೂ ಒಳ್ಳೆಯತನ ಇದೆ ಎಂದು ವೇಶ್ಯೆ ಪಾತ್ರದ ಮೂಲಕ ಹೇಳುತ್ತಾರೆ. ಕೊನೆಗೆ ದುಡ್ಡು, ಸ್ನೇಹ, ಪ್ರೀತಿ ಮತ್ತು ಭೂಗತ ಲೋಕ ಇವುಗಳ ಹಿಂದೆ ಹೋದವರು ಏನಾಗುತ್ತಾರೆ ಎನ್ನುವ ಸತ್ಯವನ್ನು ಚಿತ್ರದ ಕೊನೆಯಲ್ಲಿ ಹೇಳುತ್ತಾರೆ ನಿರ್ದೇಶಕರು. ಮೂರು ಪಾತ್ರಗಳ ಅಂತ್ಯವನ್ನು ಚಂದ್ರಹಾಸ್ ಅವರು ಊಹಿಸದ ರೀತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ನಿರ್ದೇಶ: ಚಂದ್ರಹಾಸ್
ಛಾಯಾಗ್ರಹಣ: ಪಿ ಎಲ್ ರವಿ
ಸಂಗೀತ: ಶ್ರೀವತ್ಸ
ರೇಟಿಂಗ್ 3
ಅಬ್ಬರದ ಡೈಲಾಗ್ಗಳು, ಅದ್ದೂರಿ ಮೇಕಿಂಗ್ನ ಆಚೆಗೂ ಒಂದು ಸರಳವಾದ ಆ್ಯಕ್ಷನ್ ಮಾಸ್ ಕತೆಯನ್ನು ನೋಡಬಯಸುವವರಿಗೆ ‘ಕಾಗೆಮೊಟ್ಟೆ’ ರುಚಿಸುತ್ತದೆ. ಪಿ ಎಲ್ ರವಿ ಛಾಯಾಗ್ರಹಣ ಚಿತ್ರದ ತಾಂತ್ರಿಕತೆಗೆ ಬೆನ್ನೆಲುಬಾಗಿ ನಿಂತರೆ, ಹಿನ್ನೆಲೆ ಸಂಗೀತ ದೃಶ್ಯ ಸಂಯೋಜನೆಯ ಪ್ರಭಾವವನ್ನು ಹೆಚ್ಚಿಸುತ್ತದೆ. ಆ್ಯಕ್ಷನ್ ಸಿನಿಮಾಗಳಿಗೆ ತಾನು ಪರ್ಫೆಕ್ಟ್ ಎಂಬುದನ್ನು ಗುರುರಾಜ್ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಇವರ ಜತೆಗೆ ಪಿಳ್ಳಾ ಹಾಗೂ ಗೋವಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಹೇಮಂತ್, ಮಾದೇಶ್ ಕೂಡ ಭರವಸೆ ಮೂಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.