ಚಿತ್ರ ವಿಮರ್ಶೆ: ಅಮೃತವಾಹಿನಿ

Kannadaprabha News   | Asianet News
Published : Jan 15, 2021, 08:28 AM IST
ಚಿತ್ರ ವಿಮರ್ಶೆ: ಅಮೃತವಾಹಿನಿ

ಸಾರಾಂಶ

ಜಗತ್ತಿನಲ್ಲಿ ಹಳೆಯ ಕತೆ ಎಂಬುದಿಲ್ಲ ಎಂಬ ಗಾಢನಂಬಿಕೆಯಿಂದ ನರೇಂದ್ರಬಾಬು ನಿರ್ದೇಶಿಸಿರುವ ಸಿನಿಮಾ ಅಮೃತವಾಹಿನಿ. ಇದೊಂದು ಅಪ್ಪಟ ಮೆಲೋಡ್ರಾಮ. ಕೆಟ್ಟಸೊಸೆ, ಅಸಹಾಯಕ ಮಗ, ಕೆಟ್ಟಹೆಂಡತಿ, ಗಂಡ ಹೆಂಡಿರ ಜಗಳ, ಹೆತ್ತವರನ್ನು ದೂರವಿಡುವ ಮಕ್ಕಳು- ಹೀಗೆ ಯಾವ ಕಾಲದ್ದೋ ಅನ್ನಿಸುವ ಯಾವ ಕಾಲಕ್ಕೂ ಸಲ್ಲುವ ಮನೋವ್ಯಾಪಾರದ ಕತೆಯನ್ನು ನಿರ್ದೇಶಕರು ಒಂದೂ ಮುಕ್ಕಾಲು ಗಂಟೆಯಲ್ಲಿ ನಿರೂಪಿಸಿದ್ದಾರೆ.

-ಮಿತ್ರಾ

ಈ ಚಿತ್ರದ ವಿಶೇಷ ಎಚ್‌ ಎಸ್‌ ವೆಂಕಟೇಶಮೂರ್ತಿ ಅಭಿನಯ. ಹಿರಿಯ ಕವಿಯೊಬ್ಬರಿಂದ ಈ ಪಾತ್ರ ಮಾಡಿಸಿದ್ದಕ್ಕೆ ವಿಶೇಷ ಕಾರಣವೂ ಇದೆ. ಅವರದು ಸಾಹಿತಿಯ ಪಾತ್ರ. ಅವರನ್ನು ಸಾಹಿತಿಗಳೇ ಅಂತಲೇ ಎಲ್ಲರೂ ಕರೆಯುತ್ತಿರುತ್ತಾರೆ. ಅವರು ಬರೆದ ಕೃತಿಯೇ ಎಲ್ಲರ ವಿಕೃತಿಯನ್ನು ತೊಡೆದು ಜಗತ್ತನ್ನು ಶುದ್ಧಗೊಳಿಸುತ್ತದೆ. ಇಂಥ ರೂಪಕಾತ್ಮಕವಾದ ಕತೆಯ ಕೇಂದ್ರದಲ್ಲಿ ಎಚ್‌ ಎಸ್‌ ವೆಂಕಟೇಶಮೂರ್ತಿ ಹುಮ್ಮಸ್ಸಿನಿಂದ, ತಮ್ಮ ಶಕ್ತಿಮೀರಿ ನಟಿಸಿದ್ದಾರೆ. ಮೌನದಲ್ಲಿ ಘನವಾಗಿಯೂ ಮಾತಿನಲ್ಲಿ ಮಿದುವಾಗಿಯೂ ಓಡಾಟದಲ್ಲಿ ಚುರುಕಾಗಿಯೂ ಯಾತನೆಯಲ್ಲಿ ಆರ್ದ್ರರಾಗಿಯೂ ಕಾಣಿಸಿಕೊಳ್ಳುವ ಸಾಹಿತಿಯ ಪಾತ್ರ ಅವರಿಗೆ ಒಪ್ಪಿದೆ.

ಚಿತ್ರ ವಿಮರ್ಶೆ : ರಾಜತಂತ್ರ

ನೇರವಾಗಿ ಸಾಗುವ ನಿರೂಪಣೆ, ಸಾಧಾರಣ ಸಂಭಾಷಣೆ, ಸೊಗಸಾದ ಗೀತೆ, ಹಿತವಾದ ಹಿನ್ನೆಲೆ ಸಂಗೀತ ಇರುವ ಚಿತ್ರದ ಛಾಯಾಗ್ರಹಣವೂ ಸೊಗಸಾಗಿದೆ. ಪಾತ್ರಧಾರಿಗಳ ಪೈಕಿ ಪುಟ್ಟಹುಡುಗಿ ಋುತ್ವಿ ಗಮನ ಸೆಳೆಯುತ್ತಾಳೆ. ಮಿಕ್ಕಂತೆ ಶಿವಮೊಗ್ಗ ವೈದ್ಯ, ಸುಪ್ರಿಯಾ ಎಸ್‌ ರಾವ್‌ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ.

ಚಿತ್ರ ವಿಮರ್ಶೆ: ಶಕೀಲಾ 

ಕತೆಯನ್ನು ಮತ್ತಷ್ಟುಚುರುಕಾಗಿ ನಿರೂಪಿಸಬಹುದಿತ್ತು. ಸಣ್ಣ ಕುಟುಂಬ, ವಿಘಟನೆ, ಏಕಾಂತ ಮತ್ತು ವೃದ್ಧಾಪ್ಯದ ಕಷ್ಟಗಳನ್ನು ಹೇಳುವ ಈ ಚಿತ್ರವನ್ನು ಹಿರಿಯರು ನೋಡಬೇಕು, ನಡುವಯಸ್ಕರು ನೋಡಲೇಬೇಕು, ಮಕ್ಕಳಿಗೆ ತೋರಿಸಬೇಕು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕಳ್ಳಭಟ್ಟಿ ದಂಧೆ ನಡುವೆ ಅರಳುವ ಪ್ರೀತಿ: ಇಲ್ಲಿದೆ 'ಧರ್ಮಂ' ಸಿನಿಮಾ ವಿಮರ್ಶೆ
'ಅಖಂಡ 2' ಫಸ್ಟ್ ರಿವ್ಯೂ ವೈರಲ್.. ಹುಚ್ಚೆಬ್ಬಿಸುವಂತಿವೆ ಬಾಲಯ್ಯ ಮಾಸ್ ಡೈಲಾಗ್‌ಗಳು, ಚಿತ್ರದ ಮೈನಸ್ ಏನು?