ಮಾಜಿ ಹೆಂಡ್ತಿಗೆ ಜೀವನಾಂಶ ಕೊಡ್ಲಿಲ್ಲ: ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಕೋರ್ಟ್ ಆದೇಶ

Published : Oct 28, 2019, 08:28 PM ISTUpdated : Oct 28, 2019, 08:32 PM IST
ಮಾಜಿ ಹೆಂಡ್ತಿಗೆ ಜೀವನಾಂಶ ಕೊಡ್ಲಿಲ್ಲ: ಮಾಜಿ ಶಾಸಕ ಪುತ್ರನ ಮನೆ ಜಪ್ತಿಗೆ ಕೋರ್ಟ್ ಆದೇಶ

ಸಾರಾಂಶ

ಡೈವರ್ಸ್ ಕೊಟ್ಟ ಹೆಂಡ್ತಿಗೆ ಜೀವನಾಂಶ ಕೊಟ್ಟಿಲ್ಲವೆಂದು ಮಾಜಿ ಶಾಸಕ ಪುತ್ರನ ಮನೆ ಜಪ್ತಿ ಮಾಡುವಂತೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಯಾರು? ಏನು? ಮುಂದೆ ಓದಿ

ಮೈಸೂರು, [ಅ.28]: ಕಳೆದ 7 ತಿಂಗಳಿಂದ ಪತ್ನಿಗೆ ಜೀವನಾಂಶ ನೀಡದ ಹಿನ್ನೆಲೆಯಲ್ಲಿ ಮಾಜಿ ಶಾಸಕ ದಿವಂಗತ ಶಂಕರಲಿಂಗೇಗೌಡರ ಪುತ್ರ ನಾಗೇಶ್​ ಮನೆ ಜಪ್ತಿ ಮಾಡುವಂತೆ ಮೈಸೂರು ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

 7 ವರ್ಷಗಳ ಹಿಂದೆ ನಾಗೇಶ್ ಅವರು, ಜಯಶ್ರೀ ಅರಸು ಹೆಸರಿನ ಮಹಿಳೆಯನ್ನ 2ನೇ ಮದುವೆ ಆಗಿದ್ದರು. ಇಬ್ಬರ ಸಂಸಾರದಲ್ಲಿ ಕಲಹ ಉಂಟಾಗಿ ಒಂದೂವರೆ ವರ್ಷದ ಹಿಂದೆ ಜಯಶ್ರೀ ಅರಸ್​​ಗೆ ನಾಗೇಶ್ ಡೈವರ್ಸ್ ನೀಡಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

ಹೀಗಾಗಿ ಕೋರ್ಟ್​, ಜಯಶ್ರೀ ಅರಸ್​ಗೆ ಜೀವನಾಂಶವಾಗಿ ಪ್ರತಿ ತಿಂಗಳು 10 ಸಾವಿರ ರೂಪಾಯಿ ನೀಡುವಂತೆ ನಾಗೇಶ್ ಸೂಚನೆ ನೀಡಿ  ಆದೇಶ ಹೊರಡಿಸಿತ್ತು.  ಆದರೆ ನಾಗೇಶ್ ಕಳೆದ 7 ತಿಂಗಳಿಂದ ಯಾವುದೇ ಜೀವನಾಂಶ ನೀಡಿರಲಿಲ್ಲ. 

ಇದರಿಂದ ಜಯಶ್ರೀ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಅದರಂತೆ ಇಂದು [ಸೋಮವಾರ] ವಿಚಾರಣೆ ನಡೆಸಿ ತೀರ್ಪು ನೀಡಿರುವ ಕೋರ್ಟ್​, ನಾಗೇಶ್ ಮನೆ ಜಪ್ತಿ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.

PREV
click me!

Recommended Stories

ನಮ್ಮ ಮನೇಲಿ ಯಾರೂ ಓದಿಲ್ಲ, ನೀನೂ ಓದೋದು ನಿಲ್ಲಿಸು : ಪಕ್ಕದ್ಮನೆ ಯುವತಿ ಮೇಲೆ ಹಲ್ಲೆ
ರಕ್ತಚಂದ್ರನ ಮಾಯೆ: ನಾಳೆ ರಾಜ್ಯದ ಹಲವು ದೇಗುಲದಲ್ಲಿ ದರ್ಶನ ಸಮಯ ಬದಲಾವಣೆ, ಹೋಳಿ ಹಬ್ಬಕ್ಕೆ ಯಾವುದೇ ತೊಂದರೆ ಇಲ್ಲ