ಬರ್ತ್‌ಡೇ ದಿನ ಮನೆಗೆ ಬರ್ಬೇಡಿ ಎಂದ ಗೋಲ್ಡನ್ ಸ್ಟಾರ್..! ಫ್ಯಾನ್ಸ್‌ಗೆ ಹೊಸ ರಿಕ್ಷೆಸ್ಟ್

Suvarna News   | Asianet News
Published : Jun 26, 2020, 01:21 PM ISTUpdated : Jun 26, 2020, 01:31 PM IST
ಬರ್ತ್‌ಡೇ ದಿನ ಮನೆಗೆ ಬರ್ಬೇಡಿ ಎಂದ ಗೋಲ್ಡನ್ ಸ್ಟಾರ್..! ಫ್ಯಾನ್ಸ್‌ಗೆ ಹೊಸ ರಿಕ್ಷೆಸ್ಟ್

ಸಾರಾಂಶ

ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟು ಹಬ್ಬ. ಪ್ರತಿ ವರ್ಷ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಬಂದು ಶುಭ ಹಾರೈಸಿ ಹೋಗುತ್ತಿದ್ದರು. ಈ ಬಾರಿ ಹಾಗಿಲ್ಲ. ಗಣೇಶ್ ಪ್ಲಾನ್ ಬೇರೆ ಇದೆ. ಇಲ್ಲಿ ಓದಿ. 

ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟು ಹಬ್ಬ. ಪ್ರತಿ ವರ್ಷ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಬಂದು ಶುಭ ಹಾರೈಸಿ ಹೋಗುತ್ತಿದ್ದರು. ಈ ಬಾರಿ ಹಾಗಿಲ್ಲ. ಗಣೇಶ್ ಪ್ಲಾನ್ ಬೇರೆ ಇದೆ.

ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಮಾಡಿಕೊಂಡ ಗೋಲ್ಡನ್ ಸ್ಟಾರ್ ಗಣೇಶ್ ಜುಲೈ -2 ರಂದು 42 ನೇ ಜನ್ಮ ದಿನ ಅದ್ಧೂರಿಯಾಗಿ ಆಚರಿಸದಿರಲು ನಿರ್ಧಾರ ಮಾಡಿದ್ದಾರೆ. ಕೊವಿಡ್ -19 ಹಿನ್ನೆಲೆಯಲ್ಲಿ ವೈಭವದಿಂದ ಹುಟ್ಟು ಹಬ್ಬ ಆಚರಿಸುತ್ತಿಲ್ಲ.. ಮನೆ ಬಳಿಗೆ ಬಂದು ತೊಂದರೆ ಪಡೆಬೇಡಿ ಎಂದು ಫ್ಯಾನ್ಸ್ ಗೆ ಮನವಿ ಮಾಡಿದ್ದಾರೆ.

'ಹೇರ್ ಕಟ್ ಮಾಡಿದ್ರೆ ಡಿಪ್ರೆಷನಲ್ಲಿದ್ದೀನಿ ಎಂದಲ್ಲ, ಈ ಫೋಟೋಸ್ ನಿಮಗಾಗಿ'..! ಹೀಗಿದೆ ಸಿಂಧು ಪೋಸ್ಟ್

ಬೇರೆ ಬೇರೆ ಜಿಲ್ಲೆಯಲ್ಲಿರೋ ಅಭಿಮಾನಿಗಳು ಎಲ್ಲಿದ್ದಿರೋ ಅಲ್ಲಿಂದಲೇ ಹರೆಸಿ ಹಾರೈಸಿ ಅಂತ ಕೇಳಿಕೊಂಡ ಮಳೆ ಹುಡುಗ ಗಣೇಶ್ ತಮ್ಮ ಬರ್ತ್ ಡೇ ದೊಮಟ್ಟದಲ್ಲಿ ಆಚರಿಸಿಕೊಳ್ಳೊದಿಲ್ಲ ಅಂತ ತಮ್ಮ ಫೇಸ್ ಬುಕ್ ಮೂಲಕ ಹೇಳಿಕೊಂಡಿದ್ದಾರೆ.

ಕೊರೋನಾ ಭಯದಲ್ಲೂ ರೊಮ್ಯಾಂಟಿಕ್ ದೃಶ್ಯ ಮಾಡಲು ಸಿದ್ಧ: ರಚಿತಾ ರಾಮ್

ನನ್ನೆಲ್ಲಾ ಅಭಿಮಾನಿಗಳೇ, ಬಂಧುಗಳೇ, ಸ್ನೇಹಿತರೇ, ಹಿತೈಷಿಗಳೇ ಈ ಕೊರೋನಾದ ಸಂಕಷ್ಟ ಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆ ತಾಲೂಕುಗಳಲ್ಲೂ ನೀವು ನೊಂದವರ, ಅಸಹಾಯಕರ, ಹಸಿದವರ ಬೆಂಬಲಕ್ಕೆ ನಿಂತಿರಿ. ಇದಕ್ಕೆ ಯಾವ ಪ್ರಚಾರವನನ್ಊ ಬಯಸದೆ ಸದ್ದುಗದ್ದಲವಿಲ್ಲದೆ ನಿಮ್ಮ ಮಾನವೀಯತೆಯನ್ನು ತೋರಿಸಿದಿರಿ. ಇದಕ್ಕಾಗಿ ನಾನು ನಿಮಗೆ ಅಭಾರಿಯಾಗಿದ್ದೇನೆ. ನಿಮ್ಮ ಕಾರ್ಯಗಳಿಗಾಗಿ ಹೆಮ್ಮೆ ಪಡುತ್ತೇನೆ.

ನಿಮಗೆಲ್ಲ ಗೊತ್ತಿರುವ ಹಾಗೆ ಜುಲೈ 2ರಂದು ಪ್ರತಿವರ್ಷ ಸಾವಿರಾರು ಮಂದಿ ಬೆಂಗಳೂರಿಗೆ ಬಂದು ನನ್ನ ಜನ್ಮ ದಿನವನ್ನ ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದೀರಿ. ಇದಕ್ಕೆ ನಾನು ಸದಾ ಚಿರಖಣಿ

 ಅವಕಾಶಕ್ಕೆ ಏನು ಬೇಕಾದರೂ ಮಾಡುವ ನಟಿಯರಿಗೆ ಮಾದರಿಯಾಗಲಿ ಸಾಯಿ ಪಲ್ಲವಿ!

ಆದರೆ ಈ ವರ್ಷ ಎಂದಿನಂತಿಲ್ಲ. ಕರೋನಾದಿಂದಾಗಿ ನಮ್ಮ ಬದುಕಿನ ಶೈಲಿಯೇ ಬದಲಾಗಿದೆ. ಲಕ್ಷಾಂತರ ಮಂದು ನಿರುದ್ಯೋಗಿಗಳಾಗಿದ್ದಾರೆ. ಬಡಜನರು ದೈನಂದಿನ ಬದುಕನ್ನು ಸಾಗಿಸುವುದೇ ಕಷ್ಟ ಸಾಧ್ಯವಾಗಿದೆ. ನನ್ನ ನಾಡಿನ ಜನರು ಹೀಗೆ ಸಂಕಷ್ಟದಲ್ಲಿ ಇರುವಾಗ ವೈಭವದ ಹುಟ್ಟುಹಬ್ಬದ ಆಚರಣೆ ಯಾವುದೇ ಕಾರಣಕ್ಕೂ ಬೇಡವೆಂದು ನಿರ್ಧರಿಸಿದ್ದೇನೆ.

ಹೊರಜಿಲ್ಲೆಗಳಿಂದ ನನ್ನ ಅಭಿಮಾನಿಗಳು ಈ ಸಮಯದಲ್ಲಿ ಬೆಂಗಳೂರಿಗೆ ಬರುವುದು ಬೇಡ. ನೀವು ನನಗಾಗಿ ಖರ್ಚು ಮಾಡುವ ಹಣವನ್ನು ಅದೇ ದಿನ ಬಡ ಕುಟುಂಬಗಳಿಗೆ ಸಹಾಯಹಸ್ತ ನೀಡಿ ಅದೇ ಅರ್ಥಪೂರ್ಣ ಆಚರಣೆಯಾಗುತ್ತದ. ನನಗೆ ಶುಭಕೋರಲು ನನ್ನ ನಿವಾಸಕ್ಕೆ ಬರುವುದು ಬೇಡ, ನೀವೆಲ್ಲಿದ್ದೀರೋ ಅಲ್ಲಿಂದಲೆ ನನಗೆ ಶುಭಕೋಡಿ ಶಿರ್ವದಿಸಿ ಎಂದು ಪೋಸ್ಟ್ ಮಾಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!
ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!