
ತಿರುಮಲ(ಜೂ.12): ನವ ದಂಪತಿಯಾದ ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಅವರು ವಿವಾಹ ಸಮಾರಂಭದ ನಂತರ ದೇವರ ಆಶೀರ್ವಾದ ಪಡೆಯಲು ತಿರುಪತಿಗೆ ತೆರಳಿ, ದೇಗುಲದ ನಿಯಮವೊಂದನ್ನು ಉಲ್ಲಂಘಿಸಿದ್ದು ಹೊಸ ವಿವಾದಕ್ಕೆ ಹುಟ್ಟುಹಾಕಿದೆ.
ತಿರುಮಲ ತಿರುಪತಿ ದೇವಾಲಯದ ಆವರಣದ ‘ಮಾಡಾ ಬೀದಿ’ಯಲ್ಲಿ ಚಪ್ಪಲಿ ಧರಿಸುವುದು ನಿಷಿದ್ಧವಾದರೂ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹಿನ್ನೆಲೆಯಲ್ಲಿ ಟಿಟಿಡಿ ಬೋರ್ಡಿನ ಅಧಿಕಾರಿ, ‘ನಯನತಾರಾ ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ್ದಾರೆ. ಅಲ್ಲದೇ ದೇವಾಲಯದ ಆವರಣದಲ್ಲಿಯೇ ಫೋಟೋಶೂಟ್ ನಡೆಸಿದ್ದಾರೆ. ಚಪ್ಪಲಿ ಧರಿಸುವುದು, ಫೋಟೊ ತೆಗೆಯುವುದು ಎರಡನ್ನೂ ದೇವಾಲಯದ ಆವರಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಯನತಾರಾ ಅವರು ಕ್ಷಮಾಪಣಾ ವಿಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಘ್ನೇಶ್ ಈಗಾಗಲೇ ಕ್ಷಮಾಪಣೆ ಕೋರಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ’ ಎಂದಿದ್ದಾರೆ.
‘ಆದರೂ, ನಿಯಮ ಉಲ್ಲಂಘಿಸಿದ ನಟಿಗೆ ಕಾನೂನಾತ್ಮಕವಾಗಿ ನೊಟೀಸ್ ಕೂಡಾ ಕಳುಹಿಸಲಾಗುವುದು’ ಎಂದು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.