
ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕುರಿತು ಚೇತನ್ ಅಹಿಂಸಾ ಶಾಕಿಂಗ್ ಸ್ಟೇಟ್ಮೆಂಟ್!
ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ (Chetan Ahimsa) ಸದಾ ಒಂದಿಲ್ಲೊಂದು ವಿಷಯಗಳಿಂದ ಸದ್ದು ಮಾಡುತ್ತಲೇ ಇರುತ್ತಾರೆ. ಇವರು ಮಾತನಾಡುವುದು ಯಾವುದಾದರೊಂದು ಕಾರಣಕ್ಕೆ ವಿವಾದವೂ ಆಗುವುದು ಉಂಟು. ಡಾ.ರಾಜ್ ಕುಮಾರ್ ಸ್ಮಾರಕದ ಭೂಮಿಗೆ ಸರ್ಕಾರದಿಂದ ಎರಡೂವರೆ ಎಕರೆ ಪ್ರದೇಶ ನೀಡಿದ್ದನ್ನು ಪ್ರಶ್ನಿಸಿ ನಟ ಅಹಿಂಸಾ ಚೇತನ್ ಮಾಡಿದ್ದ ಪೋಸ್ಟ್ ಭಾರೀ ವಿವಾದ ಉಂಟಾಗಿತ್ತು. ಇದಕ್ಕೆ ಸಾ ರಾ ಗೋವಿಂದ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ನಿನ್ನೆ ಚೇತನ್ ಅಹಿಂಸಾ ಮನೆ ಮುಂದೆ ಬಂದು ಆಕ್ರೋಶ ವ್ಯಕ್ತಪಡಿಸಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಹಿಂಸಾ ಚೇತನ್ ಡಾ ರಾಜ್ ಕುಮಾರ್ ಅಭಿಮಾನಿಗಳಿಗೆ ಕ್ಷಮೆ ಕೂಡ ಕೇಳಿದ್ದರು.
ಹೀಗೆ ಸದಾ ಒಂದಿಲ್ಲೊಂದು ಕಾರಣಗಳಿಂದ ಸದ್ದು ಮಾಡ್ತಿರೋ ಚೇತನ್ ಅವರು ಇದೀಗ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಕುರಿತು ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಿರೋ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಕೆ.ಶಿವಕುಮಾರ್ ಅಂತ ಅಲ್ಲ. ಕಾಂಗ್ರೆಸ್ನಲ್ಲಿ ಎಂಎಲ್ಎ, ಎಂಪಿ ಯಾರಿಗೂ ದೂರದೃಷ್ಟಿ ಇಲ್ಲ. ಕರ್ನಾಟಕವನ್ನು ಅಭಿವೃದ್ಧಿ ಮಾಡಬೇಕು ಎನ್ನುವುದು ಯಾರ ಮನಸ್ಸಿನಲ್ಲಿಯೂ ಇದ್ದಂತಿಲ್ಲ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ಷಿಪ್ನಲ್ಲಿ ರೈತರ ಜಮೀನನ್ನು ಕಬಳಿಸಿ, ಕಾಂಕ್ರೀಟ್ ಕಾಡು ಮಾಡಲು ಹೊರಟಿದ್ದಾರೆ. ಮೇಕೇದಾಟು, ಡಿಕೆದಾಟು ಎಂದೆಲ್ಲಾ ಮುಳುಗಡೆಯಾಗುತ್ತಿದೆ. ಇದನ್ನೆಲ್ಲಾ ನಾವು ಒಪ್ಪುವುದಿಲ್ಲ. ಬೆಂಗಳೂರು ನಾಶ ಮಾಡಿದ್ದು ಸಾಕಾಗಲ್ಲ ಎಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯಮ ಕರ್ನಾಟಕ, ಹಳೆ ಮೈಸೂರು ನಾಶವಾಗ್ತಿದೆ. ಎಲ್ಲವನ್ನೂ ನೆಗ್ಲೆಕ್ಟ್ ಮಾಡುತ್ತಿದ್ದಾರೆ ಎಂದು ಚೇತನ್ ಆರೋಪಿಸಿದ್ದಾರೆ.
ಅವರು ಎಲ್ಲವನ್ನೂ ವ್ಯಾಪಾರದ ದೃಷ್ಟಿಯಿಂದ ನೋಡುತ್ತಿದ್ದಾರೆ. ಜನರ ಬದುಕಿನ ಏಳಿಗೆಗೋಸ್ಕರ ಏನು ಮಾಡುವುದಿಲ್ಲ. ಇದು ಡಿ.ಕೆ.ಶಿವಕುಮಾರ್ ಒಬ್ಬರದ್ದೇ ವಿಷ್ಯ ಅಲ್ಲ, ಕಾಂಗ್ರೆಸ್ನಲ್ಲಿ ಇರುವವರು ಎಲ್ಲರೂ ಅಂಥವರೇ ಎಂದಿದ್ದಾರೆ ಅಹಿಂಸಾ ಚೇತನ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.