
ರಬಕವಿ-ಬನಹಟ್ಟಿ(ಡಿ.28): ಹಿಂದಿ, ಮರಾಠಿ, ಕೊಂಕಣಿ ಹಾಗೂ ಗುಜರಾತಿ ಚಿತ್ರರಂಗದ ಹಿರಿಯ ಛಾಯಾಗ್ರಾಹಕರಾದ ಈರಣ್ಣ (ಈಶ್ವರಲಾಲ್) ಬಸಲಿಂಗಪ್ಪ ಬಿದರಿ(87) ಭಾನುವಾರ ಬೆಳಗಿನ ಜಾವ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
1933ರಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಜನಿಸಿದ ಇವರು ಛಾಯಾಗ್ರಹಣ ಸಲುವಾಗಿ ವ್ಯಾಸಂಗ ಮಾಡಲು ಬೆಂಗಳೂರಿಗೆ ಅಲ್ಲಿಂದ ಹೆಚ್ಚಿನ ವ್ಯಾಸಂಗಕ್ಕೆ ಮುಂಬೈಗೆ 1960ರಲ್ಲಿ ಹೋಗಿದ್ದರು. ನಂತರ ಮೈಸೂರಿನವರಾದ ಹೆಸರಾಂತ ಛಾಯಾಗ್ರಾಹಕ ವಿ.ಕೆ.ಮೂರ್ತಿ ಅವರೊಂದಿಗೆ ಹಲವಾರು ಹಿಂದಿ ಚಿತ್ರಗಳಿಗೆ ಸಹಾಯಕ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿ, ನಂತರ ಹಿಂದಿ ಚಿತ್ರಗಳಾದ ಲಲಕಾರ, ದಾಮಿ, ಗುಲಾಮಿ, ಪ್ಯಾರ್ ಕಾ ಮೋಸಂ, ಜಂಗ್, ಬಾರ್ಡರ್ ಸೇರಿದಂತೆ 70ಕ್ಕೂ ಅಧಿಕ ಚಲನಚಿತ್ರಗಳಿಗೆ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದಾರೆ.
ರಜನಿಗೆ 1 ವಾರ ಬೆಡ್ರೆಸ್ಟ್, ಹೊಸ ಪಕ್ಷ ಘೋಷಿಸ್ತಾರಾ?
ಬಾಲಿವುಡ್ ಚಿತ್ರವೊಂದರ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರುವ ಛಾಯಾಗ್ರಹಣ ಸೆರೆ ಹಿಡಿಯುವಲ್ಲಿ ವಿಶೇಷತೆ ಮೆರೆದು ಪ್ರಶಸ್ತಿ ಪಡೆದುಕೊಂಡಿದ್ದರು. ಇವರಿಗೆ ಫಿಲಂ ಫೇರ್ ಸೇರಿದಂತೆ ಅನೇಕ ಪ್ರಶಸ್ತಿಗಳು ಕೂಡ ಒಲಿದುಬಂದಿವೆ. ಇವರ ಅಂತ್ಯಕ್ರಿಯೆಯು ಭಾನುವಾರ ಸಂಜೆ ವಿಜಯಪುರದಲ್ಲಿ ಜರುಗಿತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.