'ಭಾರತದಲ್ಲಿ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ಹಸುಗಳಿಗೆ ರಕ್ಷಣೆಯಿದೆ'

Suvarna News   | Asianet News
Published : Jan 06, 2020, 06:18 PM ISTUpdated : Jan 06, 2020, 06:19 PM IST
'ಭಾರತದಲ್ಲಿ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ಹಸುಗಳಿಗೆ ರಕ್ಷಣೆಯಿದೆ'

ಸಾರಾಂಶ

ಜೆಎನ್‌ಯು ಹಿಂಸಾಚಾರ, ವಿವಿಗೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ | ವಿದ್ಯಾರ್ಥಿಗಳು ಶಿಕ್ಷಕರಿಗೆ ತೀವ್ರ ಗಾಯ | 

ನವದೆಹಲಿ (ಜ. 06): ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತೆ ರಣಾಂಗಣವಾಗಿದೆ. ಬೆತ್ತ, ಹಾಕಿ ಸ್ಟಿಕ್ ಮತ್ತು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪೊಂದು ವಿವಿ ಆವರಣದೊಳಗೆ ಭಾನುವಾರ ಸಂಜೆ ಏಕಾಏಕಿ ನುಗ್ಗಿ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದೆ.

JNU ಹಿಂಸಾಚಾರ: ವೈರಲ್ ಆಯ್ತು ಆನಂದ್ ಮಹೀಂದ್ರಾ ಟ್ವೀಟ್!

ಹಾಸ್ಟೆಲ್‌ಗಳ ಮೇಲೆ ಕಲ್ಲೆಸೆದು ಪೀಠೋಪಕರಣಗಳನ್ನು ಧ್ವಂಸಗೊಳಿಸಿದೆ.  ಈ ಘಟನೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ, ಎಡಪಂಥೀ ಯ ಬೆಂಬಲಿತ ಆಯಿಶಿ ಘೋಷ್ ಸೇರಿ ಹಲವಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯಗಳಾಗಿವೆ. ಹಾಗೆಯೇ ಎಬಿವಿಪಿ ಬೆಂಬಲಿತ 25 ವಿದ್ಯಾರ್ಥಿಗಳಿಗೂ ಗಾಯಗಳಾಗಿವೆ. ಜತೆಗೆ ನಮ್ಮ ಸಂಘಟನೆಗೆ ಸೇರಿದ 11 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆಂದು ಎಬಿವಿಪಿ ಆರೋಪಿಸಿದೆ. 

ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ, ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ವಿವಿ ಮನವಿಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆ ಖಂಡಿಸಿ ಜೆಎನ್‌ಯು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ದ್ದಾರೆ. ಆಪ್‌ನ ಕೇಜ್ರಿವಾಲ್, ಡಿಎಂಕೆ ಸ್ಟ್ಯಾಲಿನ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ನಾಯಕರು ಹಲ್ಲೆಯನ್ನು ಖಂಡಿಸಿದ್ದಾರೆ. ಘಟನೆ ಬಗ್ಗೆ ಗೃಹಸಚಿವ ಅಮಿತ್ ಶಾ ವರದಿ ಕೇಳಿದ್ದಾರೆ. 

JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ನಟಿ ಟ್ವಿಂಕಲ್ ಖನ್ನಾ ಈ ಘಟನೆಯನ್ನು ಖಂಡಿಸಿದ್ದಾರೆ.  ಭಾರತದಲ್ಲಿ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ಹಸುಗಳಿಗೆ ರಕ್ಷಣೆ ಇದೆ. ಜನರ ಪ್ರತಿಭಟನೆಯನ್ನು ಹತ್ತಿಕ್ಕಲು ಸಾಧ್ಯವೇ ಇಲ್ಲ. ಇನ್ನಷ್ಟು ಪ್ರತಿಭಟನೆಗಳಾಗುತ್ತವೆ. ಜನ ರಸ್ತೆಗಿಳಿಯುತ್ತಾರೆ. ಈ ಹೆಡ್‌ಲೈನ್ ಅದನ್ನೇ ಹೇಳುತ್ತೆ ಎಂದು ಪತ್ರಿಕೆಯೊಂದರ ಸುದ್ದಿಯನ್ನು ಶೇರ್ ಮಾಡಿಕೊಂಡಿದ್ದಾರೆ. 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಬಂದವ್ರಿಗೆ ದಾರಿಕೊಡಿ, ಹೋಗೋರಿಗೆ ದಾರಿಬಿಡಿ..'ಜೀ ಕನ್ನಡ ವೇದಿಕೆಯಲ್ಲಿ ಹೇಳಿದ್ದ ಮಾತನ್ನೇ ಬಿಗ್‌ಬಾಸ್‌ನಲ್ಲಿ ಮರೆತ್ರಾ ಗಿಲ್ಲಿ ನಟ!
'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌