
ಬೆಂಗಳೂರು (ಫೆ. 19): ಕನ್ನಡದ ಖ್ಯಾತ ಫೋಷಕ ನಟ ಕಿಲ್ಲರ್ ವೆಂಕಟೇಶ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ವೆಂಕಟೇಶ್ರನ್ನು ಜಗ್ಗೇಶ್ ಭೇಟಿ ಮಾಡಿ ಅವರ ಪರಿಸ್ಥಿತಿ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿದ್ದಾರೆ ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಕಲಾವಿದರು ಕಷ್ಟದಲ್ಲಿರಬಾರದು, ಅಂಧ ಗಾಯಕಿಯರಿಗೆ ಜಗ್ಗೇಶ್ ಸೂರಿನ ವಾಗ್ದಾನ
ಜಗ್ಗೇಶ್ ಟ್ವೀಟ್ಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು ಡಿಸಿಎಂ ಅಶ್ವತ್ ನಾರಾಯಣ್, ಆರೋಗ್ಯ ಸಚಿವ ಶ್ರೀರಾಮುಲು ವೆಂಕಟೇಶ್ ಅವರ ಆರೋಗ್ಯ ವಿಚಾರಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಕಿಲ್ಲರ್ ವೆಂಕಟೇಶ್ ಒಂದು ಕಾಲದ ಬಹು ಬೇಡಿಕೆ ನಟ. ಪೋಷಕ ಪಾತ್ರಕ್ಕೂ ಸೈ, ಖಳನಟನ ಪಾತ್ರಕ್ಕೂ ಸೈ ಎನಿಸಿಕೊಂಡಿದ್ದ ನಟ. ಸುಮಾರು 250 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜಗ್ಗೇಶ್ ಜೊತೆ 'ರಣಧೀರ' ಚಿತ್ರದಲ್ಲಿಯೂ ನಟಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.