ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಂಡಿಸಿದ 'ಕ್ರಿಯಾಲೋಪ'  ಅಂದರೆ ಏನು?

Published : Jul 18, 2019, 04:30 PM ISTUpdated : Jul 18, 2019, 04:37 PM IST
ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಂಡಿಸಿದ 'ಕ್ರಿಯಾಲೋಪ'  ಅಂದರೆ ಏನು?

ಸಾರಾಂಶ

ಗುರುವಾರ ಬೆಳಗ್ಗೆಯಿಂದ ಆರಂಭವಾದ ವಿಧಾನಸಭೆ ಕಲಾಪ ಕಾನೂನುಗಳ ಚರ್ಚೆ ಮತ್ತು ವಿಮರ್ಶೆಯ ಗೂಡಾಗಿ ಬದಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಉಲ್ಲೇಖ ಮಾಡಿದ ಕ್ರಿಯಾಲೋಪ ಎಂಬ ಶಬ್ದ ಎಲ್ಲದಕ್ಕಿಂತ ಇಲ್ಲಿ ಮುಖ್ಯ. ಹಾಗಾದದರೆ ಸಿದ್ದರಾಮಯ್ಯ ಮಂಡಿಸಿದ ವಾದ ಏನು?

ಬೆಂಗಳೂರು(ಜು. 18)  ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಗುರುವಾರದ ವಿಧಾನಸಭೆ ಕಲಾಪ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವತ್ತ ಹೆಜ್ಜೆ ಇಡುತ್ತಿಲ್ಲ. ಕಲಾಪದಲ್ಲಿ ಮಾತನಾಡುತ್ತ ಸಿದ್ದರಾಮಮಯ್ಯ ಕ್ರಿಯಾ ಲೋಪ ಎಂಬ ಶಬ್ದ ಬಳಕೆ ಮಾಡಿದ್ದಾರೆ. ಹಾಗೆ ಒಂದಿಷ್ಟು ಪ್ರಶ್ನೆ ಮುಂದಿಟ್ಟಿದ್ದಾರೆ.

ವಿಶ್ವಾಸಮತಯಾಚನೆಗೆ ಸಿಎಂ ಮುಂದಾಗುತ್ತಾರೆ. ಅದಾದ ಮೇಲೆ ಹೊಸ ರಾಜಕೀಯ ಬದಲಾವಣೆ ಆಗಲಿದೆ ಎಂದು ಭಾವಿಸಿದ್ದವರೆಲ್ಲ ಈಗ ಕಾನೂನುನ ಬಗ್ಗೆ ಚರ್ಚೆ ಮಾಡುವಂತೆ ಆಗಿದೆ. ಹಾಗಾದರೆ ಸಿದ್ದರಾಮಯ್ಯೆ ಎತ್ತಿದ ಪ್ರಶ್ನೆಗಳು ಯಾವುವು? 

ಮುಂಬೈಯ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀಮಂತ್ ಪಾಟೀಲ್! ಏನಿದು ತಂತ್ರ?

* ಅತೃಪ್ತ ಶಾಸಕರ ಪ್ರಕರಣ ಇತ್ಯರ್ಥವಾಗುವವರೆಗೂ ವಿಶ್ವಾಸಮತ ಗೊತ್ತುವಳಿ ತಡೆಹಿಡಿಯಬೇಕು

* ಸುಪ್ರೀಂ ಕೋರ್ಟ್ ಸ್ಪೀಕರ್, ಅತೃಪ್ತ ಶಾಸಕರು ಮತ್ತು ಸಿಎಂ ವಿಚಾರದಲ್ಲಿ ಮಾತನಾಡಿದೆ. ಸ್ಪೀಕರ್ ಅತೃಪ್ತ ಶಾಸಕರ ಮೇಲೆ ಒತ್ತಡ ಹಾಕುವಂತೆ ಇಲ್ಲ ಎಂದಿದೆ. ಆದರೆ ಶಾಸಕಾಂಗ ಪಕ್ಷದ ನಾಯಕನಿಗೆ ಅಥವಾ ಪಕ್ಷಕ್ಕೆ ಆ ಕುರಿತಾಗಿ ಏನೂ ಹೇಳಿಲ್ಲ. ಅಂದರೆ ನಮಗೆ ವಿಪ್ ನೀಡುವ ಹಕ್ಕು ಇಲ್ಲವೆ?

* ರಾಜೀನಾಮೆ ಕೊಟ್ಟು ಸದನಕ್ಕೆ ಬಾರದ ಶಾಸಕರು ಈಗ ಸದನದ ಶಾಸಕರು ಹೌದೋ? ಅಲ್ಲವೋ? ಈ ಬಗ್ಗೆಯೂ ಸ್ಪಷ್ಟನೆ ಇಲ್ಲ. ಇದು ಮೊದಲು ಇತ್ಯರ್ಥವಾದ ಮೇಲೆ ವಿಶ್ವಾಸಮತ ಗೊತ್ತುವಳಿಗೆ ಹೋಗೋಣ.

ಓಡಿ ಹೋಗಲು ಯತ್ನಿಸಿದ ಕೈ ಶಾಸಕನನ್ನು ಹಿಡಿದು ತಂದ ಮುಖಂಡರು

* ಎಲ್ಲ ಶಾಸಕರು ಒಟ್ಟಾಗಿ ಬಂದು ರಾಜೀನಾಮೆ ನೀಡಿದ್ದಾರೆ. ಒಂದೇ ಕಡೆ ಉಳಿದುಕೊಂಡಿದ್ದಾರೆ. ಸರ್ಕಾರಕ್ಕೆ ಆತಂಕ ತರುವ ಹಿನ್ನೆಲೆ ಇಲ್ಲಿ ಕಂಡುಬಂದಿದ್ದು ಅವರ ವರ್ತನೆಗೆ ಅಸಲಿ ಕಾರಣ ಪತ್ತೆಯಾಗಬೇಕು. 

*ಸುಪ್ರೀಂ ಕೋರ್ಟ್ ನಮ್ಮನ್ನು ಅಂದರೆ ಪಕ್ಷ ಅಥವಾ ಶಾಸಕಾಂಗ ಪಕ್ಷ ನಾಯಕನನ್ನು ಪ್ರತಿವಾದಿಯನ್ನಾಗಿ ಪರಿಗಣಿಸಿಲ್ಲ. ನಮಗೆ ವಿಪ್ ಕೊಡುವ ಅಧಿಕಾರ ಇಲ್ಲ ಎಂದಾದರೆ ಸಂವಿಧಾನಬದ್ಧವಾಗಿರುವ ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಂತೆ ಅಲ್ಲವೆ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನನಗೆ ಈಗಾಗಲೇ 120ಕ್ಕೂ ಹೆಚ್ಚು ಬಾರಿ ಮದುವೆಯಾಗಿದೆ; ನಟ ಸಿಂಬು ಉತ್ತರಕ್ಕೆ ಆಂಕರ್ ಏನಂದ್ರು?
ಮದುವೆ ಬಳಿಕ ಹನಿಮೂನ್ ಕ್ಯಾನ್ಸಲ್ ಮಾಡಿದ ಸಮಂತಾ? ಈ ಹೊಸ ನಿರ್ಧಾರ ತಗೊಂಡು ಶಾಕ್ ಕೊಟ್ಟಿದ್ಯಾಕೆ?