ಕನ್ನಡಿಗರಿಗೆ ಉದ್ಯೋಗ : ಸಿನಿ ದಿಗ್ಗಜರು ಸಾಥ್

By Web DeskFirst Published Aug 14, 2019, 12:42 PM IST
Highlights

ಕನ್ನಡಿಗರಿಗೆ ಉದ್ಯೋಗ ಕೊಟ್ಟರೆ ಕನಿಷ್ಠ ವೇತನ, ಸೌಲಭ್ಯಗಳನ್ನು ನೀಡಿ ಕಾರ್ಮಿಕ ಕಾನೂನಿನ ನೀತಿ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕಾಗುತ್ತದೆ. ಇಲ್ಲದಿದ್ದರೇ ಕನ್ನಡಿಗರಿಂದರೇ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಕರ್ನಾಟಕ ರಣಧೀರ ಪಡೆ ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ’ ಬೇಕು ಎಂದು ಪ್ರತಿಭಟನೆ ನಡೆಸುತ್ತಿದೆ.  

ಬೆಂಗಳೂರು (ಆ. 14): ‘ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ’ ಎಂದು ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ರಣಧೀರ ಪಡೆ ಆ.14 ಮತ್ತು 15 ರಂದು ಬೆಳಗ್ಗೆ 10 ಕ್ಕೆ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ‘ಉಪವಾಸ ಸತ್ಯಾಗ್ರಹ ಮತ್ತು ಅ ಹೋರಾತ್ರಿ ಧರಣಿ’ ಹಮ್ಮಿಕೊಂಡಿದೆ.

ಕನ್ನಡಿಗರಿಗೆ ಗುಡ್ ನ್ಯೂಸ್ : ಉದ್ಯೋಗ ಮೀಸಲಿಗೆ ಸಿಎಂ ಸ್ಪಂದನೆ

ಇಲ್ಲಿನ ಉದ್ಯೋಗಗಳು ಸ್ಥಳೀಯರಿಗೆ ಸಿಗಬೇಕು. ಬಹುರಾಷ್ಟ್ರೀಯ ಕಂಪನಿ, ಬ್ಯಾಂಕ್ ಮತ್ತಿತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಹಿಂದೇಟು ಹಾಕುತ್ತಿವೆ. ಈ ಕುರಿತು ಹಿಂದೆ ಸಾಕಷ್ಟು ಬಾರಿ ಮನವಿ, ಅಭಿಯಾನ ಮಾಡಿದರೂ ಸರ್ಕಾರಗಳು ಭರವಸೆ ನೀಡಿ ಸುಮ್ಮನಾಗಿವೆ. ಹೀಗಾಗಿ ಪ್ರಸ್ತುತ ಧರಣಿ ಹಮ್ಮಿಕೊಳ್ಳಲಾಗಿದೆ.

ಕನ್ನಡಿಗರ ಉದ್ಯೋಗ : ಸರೋಜಿನಿ ಮಹಿಷಿ ವರದಿ ಶಿಫಾರಸುಗಳೇನು?

ನಟ ಉಪೇಂದ್ರ, ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ, ಹೋರಾಟಗಾರರಾದ ವಾಟಾಳ್ ನಾಗರಾಜ್, ಕರವೇ ನಾರಾಯಣ ಹಾಗೂ ವಿವಿಧ ಗಣ್ಯರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


 

click me!