ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಪ್ರತಾಪ್ ಸಿಂಹಗೆ ಮಾಹಿತಿ ಕೇಳಿದ ರಶ್ಮಿಕಾ

Published : Sep 17, 2019, 11:33 AM ISTUpdated : Sep 17, 2019, 11:48 AM IST
ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಪ್ರತಾಪ್ ಸಿಂಹಗೆ ಮಾಹಿತಿ ಕೇಳಿದ ರಶ್ಮಿಕಾ

ಸಾರಾಂಶ

ಕೊಡಗು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಅಭಿಯಾನ | ಈ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಬೆಂಬಲ | ರಶ್ಮಿಕಾ, ಹರ್ಷಿಕಾ ಸಾಥ್ 

ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿತ್ತು. ಮುಖ್ಯಮಂತ್ರಿ, ಮೈಸೂರು-ಕೊಡಗು ಸಂಸದ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಎಚ್ಚರಿಸಲು  'ವಿ ನೀಡ್‌ ಎಮರ್ಜೆನ್ಸಿ ಹಾಸ್ಪಿಟಲ್‌ ಇನ್‌ ಕೊಡಗು' ಎಂಬ ಹ್ಯಾಶ್ ಟ್ಯಾಗ್‌ ಅಡಿಯಲ್ಲಿ ಟ್ವಿಟರ್‌ ಅಭಿಯಾನ ಶುರುವಾಗಿದ್ದು, ಜಿಲ್ಲೆಯ ಯುವ ಜನತೆ ಈ ಅಭಿಯಾನಕ್ಕೆ ದೊಡ್ಡ ಪ್ರಮಾಣದಲ್ಲಿ ಕೈ ಜೋಡಿಸಿದ್ದರು. ಅಭಿಯಾನಕ್ಕೆ ವ್ಯಾಪಕ ಬೆಂಬಲ ಕೂಡಾ ವ್ಯಕ್ತವಾಗಿತ್ತು. 

ಬಿಗ್ ಬಾಸ್ ಸೀಸನ್ 7ಗೆ ಪ್ರವೇಶ ಪಡೆಯಲಿರುವ ಸೆಲೆಬ್ರಿಟಿಗಳು

ಕೆಲದಿನಗಳಿಂದ ಈ ಕೂಗು ತಣ್ಣಗಾಗಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ, ಸಂಸದ ಪ್ರತಾಪ್ ಸಿಂಹ ಬಳಿ ಅಭಿಯಾನದ ಬಗ್ಗೆ ಮಾಹಿತಿ ಕೇಳಿದ್ದಾರೆ. 

 

‘ಕೂರ್ಗ್ ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಅಪ್ ಡೇಟ್ ಏನಿದೆ? ಡೆವಲೆಪ್ ಮೆಂಟ್ ಏನಾದ್ರು ಇದ್ದರೆ ತುಂಬಾ ಸಂತೋಷ’ ಎಂದು ರಶ್ಮಿಕಾ ಟ್ವೀಟ್ ಮಾಡಿ ಪ್ರತಾಪ್ ಸಿಂಹಗೆ ಡ್ಯಾಗ್ ಮಾಡಿದ್ದಾರೆ.

ಕನ್ನಡಿಗರ ಬಗ್ಗೆ ಒಂದೇ ಪದದಲ್ಲಿ ವರ್ಣಿಸಿ; ರಶ್ಮಿಕಾ ಉತ್ತರಕ್ಕೆ ಫ್ಯಾನ್ಸ್ ಬೋಲ್ಡ್!

 

ಈ ಹಿಂದೆ ರಶ್ಮಿಕಾ, ‘ ನಮಗೆ ತುಂಬಾ ಬೇಕಾಗಿರೋದು ಸುಸಜ್ಜಿತವಾದ ಆಸ್ಪತ್ರೆ. ನಮ್ಮ ಕೂರ್ಗ್ ನಲ್ಲಿ ಆಸ್ಪತ್ರೆ ಇಲ್ಲ. ಒಳ್ಳೆಯ ಆಸ್ಪತ್ರೆಗಾಗಿ ನಾನು ದೂರ ಪ್ರಯಾಣಿಸಬೇಕು. ಕೊಡಗಿನಲ್ಲಿ ಆಸ್ಪತ್ರೆಯಾದರೂ ನಿಜಕ್ಕೂ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು ಸಿಎಂಗೆ ಕೇಳಿಕೊಂಡಿದ್ದರು.   

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೆಳಗೆದ್ದು .. ನಾಚುತ್ತಲೇ ಮಲಗುವ ಕೋಣೆಯ ರಹಸ್ಯ ಬಹಿರಂಗಪಡಿಸಿದ ಪಿಗ್ಗಿ
ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!