ನೇತ್ರದಾನ ವಾಗ್ದಾನ ಪತ್ರಕ್ಕೆ ಸರಿಗಮಪ ಹನುಮಂತು ಸಹಿ

By Web DeskFirst Published Jul 22, 2019, 7:57 AM IST
Highlights

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ| ಗಾಯಕ ಹನುಮಂತ ನೇತ್ರದಾನ| 

ಸವಣೂರು[ಜು.22]: ರಿಯಾಲಿಟಿ ಶೋನಿಂದ ಪ್ರಖ್ಯಾತರಾಗಿರುವ ಗಾಯಕ ಹನುಮಂತ ಲಮಾಣಿ ಅವರು ನೇತ್ರದಾನ ಮಾಡುವ ಬಗ್ಗೆ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯ​ಕ್ರ​ಮ​ದಲ್ಲಿ ಅವರು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿದರು.

ಈ ವೇಳೆ ಮಾತ​ನಾ​ಡಿದ ಅವರು, ನಾನು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನನ್ನ ಮರಣಾನಂತರ ಕಣ್ಣುಗಳನ್ನು ದಾನವಾಗಿ ನೀಡಲು ಒಪ್ಪಿಗೆ ಸೂಚಿಸಿದ್ದೇನೆ. ಇಂತ​ಹ ಕಾರ್ಯದಲ್ಲಿ ಸರ್ವರೂ ಪಾಲ್ಗೊಂಡಲ್ಲಿ ಮಾತ್ರ ಅಂಧರ ಬಾಳಿಗೆ ಬೆಳಕು ನೀಡಿದಂತಾ​ಗು​ತ್ತದೆ. ಹಾಗಾ​ಗಿ ಅಂಧತ್ವ ನಿವಾರಣೆಗೆ ಮುಂದಾಗಬೇಕು ಎಂದರು.

click me!