ಕನ್ನಡ ಚಿತ್ರರಂಗದ ಖ್ಯಾತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಇನ್ನಿಲ್ಲ!

Published : Jan 13, 2020, 10:41 AM ISTUpdated : Jan 13, 2020, 10:53 AM IST
ಕನ್ನಡ ಚಿತ್ರರಂಗದ ಖ್ಯಾತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಇನ್ನಿಲ್ಲ!

ಸಾರಾಂಶ

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್‌ ಲೋಕದ ಹೆಸರಾಂತ ಮೇಕಪ್‌ ಆರ್ಟಿಸ್ಟ್‌ ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದಾರೆ.  

ಬೆಂಗಳೂರು (ಜ.13):  ಕನ್ನಡ ಚಿತ್ರರಂಗದಲ್ಲಿ ಸುಮಾರು 200ಕ್ಕೂ ಹೆಚ್ಚು ಚಿತ್ರಗಳಿಗೆ ಮೇಕಪ್ ಮ್ಯಾನ್‌ ಅಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣ ಅವರು ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ.

ಕೃಷ್ಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 

ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಇನ್ನಿಲ್ಲ

ಕೃಷ್ಣ ಅವರು ಬಾಲಿವುಡ್‌ ಕಲಾವಿದರಿಗೂ ಮೇಕಪ್‌ ಮಾಡಿ ತಮ್ಮ ಅದ್ಭುತ ಕಲೆಗೆ ಸೈ ಎನಿಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ರಾಜ್‌ ಕುಟುಂಬಕ್ಕೂ ತುಂಬಾ ಹತ್ತಿರವಾಗಿದ್ದರು ಕೃಷ್ಣ. ದೂರದರ್ಶನದಲ್ಲಿ ಡಾ.ರಾಜ್‌ಕುಮಾರ್ ಅವರ ಸಂದರ್ಶನ ಮಾಡಿದ್ದು, ಆ ಕಾಲದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಚಿತ್ರರಂಗದಲ್ಲಿ ಇವರು 'ಮೇಕಪ್ ಕೃಷ್ಣ' ಅಂತಾನೇ ಫೇಮಸ್ ಆಗಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

9ನೇ ವಯಸ್ಸಿನಲ್ಲೇ ಭರತನಾಟ್ಯದಲ್ಲಿ ಮಿಂಚಿದ್ದ ಈ ಪುಟ್ಟ ಬಾಲಕಿ ಇಂದು ಸ್ಟಾರ್ ಹೀರೋಯಿನ್!
Film Etiquette: ಥಿಯೇಟರ್‌ನಲ್ಲಿ ಸಿನಿಮಾ ನೋಡ್ತೀರಾ? ಈ 10 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!