
ಮುಂಬೈ[ಅ. 30] ಶಾರುಖ್ ಖಾನ್ ಇಲ್ಲಿ ನಿಜಕ್ಕೂಹೀರೋ ಆಗಿದ್ದಾರೆ.ಬಾಲಿವುಡ್ ನಟ ಶಾರುಖ್ ಖಾನ್ ಪತ್ನಿ ಗೌರಿ ಹಿಂದು ಧರ್ಮದವರಾಗಿರುವುದರಿಂದ ಪ್ರತಿವರ್ಷ ಅವರ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಹಬ್ಬಗಳೆರಡನ್ನೂ ಆಚರಿಸಲಾಗುತ್ತದೆ. ಗಣೇಶ ಹಬ್ಬ, ದೀಪಾವಳಿಯನ್ನು ಶಾರುಖ್ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಈ ಸಾರಿಯ ದೀಪಾವಳಿಗೆ ಶಾರುಖ್ ಕುಟುಂಬ ಬಿಗ್ ಬಿ ಅಮಿತಾಭ್ ಬಚ್ಚನ್ ಮನೆಗೆ ತೆರಳಿತ್ತು.
ಅಮಿತಾಭ್ ಬಚ್ಚನ್ ಮನೆಯಲ್ಲಿ ವಿರಾಟ್- ಅನುಷ್ಕಾ ಶರ್ಮ, ದೀಪಿಕಾ- ರಣವೀರ್ ಸಿಂಗ್, ಶಿಲ್ಪಾ ಶೆಟ್ಟಿ, ಹೃತಿಕ್ ರೋಷನ್, ಪ್ರೀತಿ ಜಿಂಟಾ, ಕತ್ರಿನಾ ಕೈಫ್, ಶಾಹಿದ್ ಕಪೂರ್, ಅಕ್ಷಯ್ ಕುಮಾರ್, ಶಾರುಖ್ ಖಾನ್ ದಂಪತಿ ಸೇರಿದಂತೆ ಘಟಾನುಘಟಿಗಳ ಮಿಲನವಾಗಿತ್ತು.
ಹಬ್ಬ ಅಂದ ಮೇಲೆ ಅಲ್ಲಿ ಪಟಾಕಿ ಸಂಭ್ರಮ ಇರಲೇಬೇಕು ಅಲ್ಲವೇ? ಪಟಾಕಿ ಅವಘಡವೊಂದಕ್ಕೆ ನಾಂದಿಯಾಗಿಬಿಟ್ಟಿತ್ತು. ಪಟಾಕಿ ಬೆಂಕಿ ಐಶ್ವರ್ಯ ರೈ ಬಚ್ಚನ್ ಅವರಿಗೆ ಹಲವಾರು ವರ್ಷಗಳಿಂದ ಮ್ಯಾನೇಜರ್ ಆಗಿರುವ ಅರ್ಚನಾ ಸದಾನಂದ್ ಅವರ ಲೆಹೆಂಗಾಕ್ಕೆ ತಗುಲಿತ್ತು.
ಈ ಸಂದರ್ಭದಲ್ಲಿ ಎಲ್ಲರೂ ಏನು ಮಾಡಬೇಕೆಂದು ತೋಚದೆ ನಿಂತುಕೊಂಡಿದ್ದಾಗ ಕಿಂಗ್ ಖಾನ್ ಶಾರುಖ್ ಸಮಯ ಪ್ರಜ್ಞೆ ಮೆರೆದರು. ಹಿಂದೆ ಮುಂದೆ ಯೋಚಿಸದೆ ಅರ್ಚನಾ ಸದಾನಂದ್ ಅವರ ಬಳಿ ಓಡಿಹೋಗಿ ತಮ್ಮ ಜಾಕೆಟ್ನಿಂದ ಬೆಂಕಿ ಆರಿಸಿದರು.
ಒಟ್ಟಿನಲ್ಲಿ ಶಾರುಖ್ ಸಮಯ ಪ್ರಜ್ಞೆಯಿಂದ ಅವಘಡವೊಂದು ತಪ್ಪಿತು. ಕಿಂಗ್ ಖಾನ್ ನಿಜ ಜೀವನದಲ್ಲಿಯೂ ಹೀರೋ ಕೆಲಸ ಮಾಡಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.