
ಮುಂಬೈ[ಡಿ.01]: ನಟ ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಇಸ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 25 ಲಕ್ಷ ರು. ಬಹುಮಾನ ಗೆದ್ದುಕೊಂಡಿದ್ದಾರೆ.
ಸತತ ಎರಡು ಬಾರಿ ಫಿಲ್ಮಂ ಫೇರ್ ಪ್ರಶಸ್ತಿ ಪಡೆದ ನಟಿ ಯಾರು? ಎಂದು ಕೇಳಲಾದ 50 ಲಕ್ಷ ರು.ನ ಪ್ರಶ್ನೆಗೆ ಉತ್ತರಿಸಲು ಸುಧಾಮೂರ್ತಿ ವಿಫಲವಾದರು. ವಿಶೇಷವೆಂದರೆ ಈ ಪ್ರಶ್ನೆ ಅಮಿತಾಭ್ ಬಚ್ಚನ್ ಅವರ ಪತ್ನಿ ಜಯಾ ಬಚ್ಚನ್ ಅವರಿಗೆ ಸಂಬಂಧಿಸಿದ್ದಾಗಿತ್ತು.
ಸುಧಾಮೂರ್ತಿ ಉತ್ತರದಿಂದ ನಿರಾಶರಾದ ಅಮಿತಾಭ್, ‘ನಾನು ಮನೆಗೆ ಹೋದರೆ ಹೊಡೆತ ತಿನ್ನುವುದು ಗ್ಯಾರಂಟಿ’ ಎಂದು ಹಾಸ್ಯಚಟಾಕಿ ಹಾರಿಸಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.