
ಬೆಂಗಳೂರು (ಫೆ. 26): ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ.
ಭಾರತೀಯ ಸೇನೆಯ ತಾಕತ್ತು, ಶಕ್ತಿ ಬಗ್ಗೆ ಸಾಕಷ್ಟು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಟ್ರೋಲ್ ಪೇಜ್ ಗಳು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡು ಭಾರತೀಯ ಸೇನೆಗೆ ಶಹಬ್ಬಾಸ್ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.