
ನವದೆಹಲಿ: 2019 ರ ಲೋಕಸಭಾ ಚುನಾವಣೆಗೂ ಮುನ್ನಾ ರಾಷ್ಟ್ರ ರಾಜಧಾನಿಯ ಎಲ್ಲ ಚರ್ಚ್ಗಳಲ್ಲಿ ಪ್ರಾರ್ಥನೆ ಅಭಿಯಾನಕ್ಕೆ ಕರೆ ನೀಡಿರುವ ಪತ್ರವನ್ನು ದೆಹಲಿ ಆರ್ಚ್ ಬಿಷಪ್ ಅನಿಲ್ ಕೌಟೊ ಸಮರ್ಥಿಸಿಕೊಂಡಿದ್ದಾರೆ. ತಮ್ಮ ವಿನಂತಿಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೂ ಯಾವುದೇ ನಂಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
‘ದೇಶಕ್ಕಾಗಿ ಪ್ರಾರ್ಥಿಸುವುದು ಯಾವಾಗಲೂ ಇದ್ದೇ ಇರುತ್ತದೆ. ವಾರದಲ್ಲೊಂದು ದಿನ ಪ್ರಾರ್ಥನೆ ಸಲ್ಲಿಸಲು ನಾವು ನಮ್ಮ ಚರ್ಚ್ಗಳಿಗೆ ನಿರ್ದೇಶಿಸಿದ್ದೆವು. ಈ ಖಾಸಗಿ ವಿಷಯದಲ್ಲಿ ಯಾರೊಬ್ಬರೂ ಹಸ್ತಕ್ಷೇಪ ನಡೆಸುವಂತಿಲ್ಲ. ದೇಶಕ್ಕೆ ಮಾರಕ ವಿಷಯಗಳ ಬಗ್ಗೆ ಆತಂಕ ವಿದೆ,’ ಎಂದು ಕೌಟೊ ತಿಳಿಸಿದ್ದಾರೆ.
ಸಚಿವ ರಾಜನಾಥ್ ಆಕ್ಷೇಪ: ಧರ್ಮ ಅಥವಾ ಪಂಥದ ಆಧಾರದಲ್ಲಿ ಭಾರತ ತಾರ ತಮ್ಯ ಮಾಡುವುದಿಲ್ಲ. ಜತೆಗೆ ದೇಶದಲ್ಲಿ ಅಂತಹ ಯಾವುದೇ ವಿಷಯಗಳು ನಡೆಯಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಈ ದೇಶದ ಏಕತೆ, ಸಮಗ್ರತೆ ಮತ್ತು ಪರಮಾಧಿಕಾರದ ವಿಚಾರದಲ್ಲಿ ರಾಜಿ ಇಲ್ಲ ಎಂದಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ದಿಲ್ಲಿ ಕ್ರೈಸ್ತರ ಪ್ರಾರ್ಥನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.