
ಕೇರಳ (ಅ. 03): ಶಬರಿಮಲೆ ದೇವಾಲಯವನ್ನು ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಋತುಸ್ರಾವದ ಕಾರಣಕ್ಕಾಗಿ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸಿರುವುದನ್ನು ಸುಪ್ರೀಂಕೋರ್ಟ್ ತೆಗೆದು ಹಾಕಿದೆ. ಎಲ್ಲಾ ಪ್ರಾಯದ ಹೆಣ್ಣು ಮಕ್ಕಳು ಪ್ರವೇಶಿಸಬಹುದೆಂದು ಹೇಳಿದೆ. ಕೋರ್ಟಿನ ತೀರ್ಪನ್ನು ಕೆಲವರು ಸ್ವಾಗತಿಸಿದರೆ ಇನ್ನು ಕೆಲವರು ವಿರೋಧವನ್ನು ವ್ಯಕ್ತಪಡಿಸಿದರು.
ಕೋರ್ಟಿನ ಆದೇಶವನ್ನು ಪ್ರಶ್ನಿಸಿ ಸಮಾನ ಮನಸ್ಕ ಮಹಿಳೆಯರು #ReadyToWait ಎನ್ನುವ ಆಂದೋಲನವನ್ನು ಶುರು ಮಾಡಿದ್ದಾರೆ. ಈ ಆಂದೋಲನದ ಬಗ್ಗೆ ವಕ್ತಾರೆ ಪದ್ಮಾ ಪಿಳ್ಳೈ, ನಾವು ದೇವಾಲಯದ ಸಂಪ್ರದಾಯ, ಪರಂಪರೆಯನ್ನು ಗೌರವಿಸುತ್ತೇವೆ. 50 ವರ್ಷದವರೆಗೆ ಕಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕೆ ಸಾಕಷ್ಟು ಮಹಿಳೆಯರು ದನಿಗೂಡಿಸಿದ್ದಾರೆ.
#ReadyToWait ಆಂದೋಲನ 2016 ರಲ್ಲಿ ಶುರುವಾಗಿದೆ. ಇದೀಗ ಮತ್ತೆ ಮುನ್ನಲೆಗೆ ಬಂದಿದೆ. People Of Dharma ಎನ್ನುವ ಸಂಘಟನೆಯೊಂದು ತೀರ್ಪನ್ನು ಪ್ರಶ್ನಿಸಿ ಮತ್ತೆ ಕೋರ್ಟಿನ ಮೆಟ್ಟಿಲೇರಲಿದ್ದಾರೆ. ಮಹಿಳೆಯರಿಗೆ ದೇವಸ್ಥಾನದ ಒಳಗೆ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.