‘ಎಲ್ಲದಕ್ಕೂ ಅಲ್ಲೇ ಉತ್ತರಿಸುವೆ’:ಪ್ರಣಬ್

Published : Jun 02, 2018, 04:40 PM IST
‘ಎಲ್ಲದಕ್ಕೂ ಅಲ್ಲೇ ಉತ್ತರಿಸುವೆ’:ಪ್ರಣಬ್

ಸಾರಾಂಶ

ಆರ್‏ಎಸ್ಎಸ್  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ನವದೆಹಲಿ(ಜೂ.2):ಆರ್‏ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ತಮಗೆ ಆರ್‏ಎಸ್ಎಸ್  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವಂತೆ ಕೋರಿ ಹಲವು ಪತ್ರಗಳು, ದೂರವಾಣಿ ಕರೆಗಳು ಬಂದಿದೆ. ಆದರೆ ತಾವು ಯಾವುದಕ್ಕೂ ಪ್ರತಿಕ್ರಯಿಸಿಲ್ಲ. ಅವರಿಗೆಲ್ಲಾ ನಾಗಪುರದಲ್ಲಿಯೇ ಪ್ರತಿಕ್ರಿಯೆ ನೀಡುವುದಾಗಿ ಪ್ರಣಬ್ ಮುಖರ್ಜಿ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಪ್ರಣಬ್ ಮುಖರ್ಜಿ ಆರ್‏ಎಸ್ಎಸ್ ಕಾಯರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಕಾಂಗ್ರೆಸ್ ನಲ್ಲಿಯೇ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿವೆ. ಹಿರಿಯ ನಾಯಕರಾದ ಜೈರಾಮ್ ರಮೇಶ್, ಸಿ.ಕೆ. ಜಾಫರ್ ಶರೀಫ್ ಸೇರಿ ಹಲವರು ಮುಖರ್ಜಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು.

ಇನ್ನು ಮತ್ತೋರ್ವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಮುಖರ್ಜಿ ಅವರ ನಿರ್ಧಾರವನ್ನು ಸ್ವಾಗತಿಸಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ಮೂಲಕ  ಆರ್‏ಎಸ್ಎಸ್  ಸಿದ್ದಾಂತದಲ್ಲಿರುವ ದೋಷಗಳನ್ನು ಮುಖರ್ಜಿ ಸಂಘದ ಕಾರ್ಯಕರ್ತರಿಗೆ ಮನವರಿಕೆ ಮಾಡಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ