ಎಟಿಎಂಗೆ ಹಾಕಬೇಕಿದ್ದ 1 ಕೋಟಿ ದೋಚಿದರು!

Published : May 07, 2019, 10:10 AM IST
ಎಟಿಎಂಗೆ ಹಾಕಬೇಕಿದ್ದ 1 ಕೋಟಿ ದೋಚಿದರು!

ಸಾರಾಂಶ

ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ 1 ಕೋಟಿ ಹಣವನ್ನು ದೋಚಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು :  ಎಟಿಎಂ ಕೇಂದ್ರಕ್ಕೆ ತುಂಬುವ ಸುಮಾರು 1 ಕೋಟಿಯನ್ನು ಸಿಬ್ಬಂದಿಯೇ ಕಳವು ಮಾಡಿಕೊಂಡು ಹೋಗಿರುವ ಘಟನೆ ಆಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಡುಗೋಡಿಯ ನಿವಾಸಿ ಸೆಕ್ಯೂರ್‌ ವ್ಯಾಲ್ಯೂ ಕಂಪನಿ ಕಸ್ಟೋಡಿಯನ್‌ ಕಿಶೋರ್‌ ಕುಮಾರ್‌ (28) ಹಾಗೂ ಈತನ ಸ್ನೇಹಿತ ಹಣದೊಂದಿಗೆ ಪರಾರಿಯಾಗಿದ್ದು, ಕಂಪನಿಯ ಮ್ಯಾನೇಜರ್‌ ರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸೆಕ್ಯೂರ್‌ ವ್ಯಾಲ್ಯೂ ಎಟಿಎಂ ಕೇಂದ್ರಗಳಿಗೆ ಹಣ ತುಂಬುವ ಕೆಲಸ ಮಾಡುತ್ತಿದೆ. ಈ ಕಂಪನಿಯಲ್ಲಿ ಕಿಶೋರ್‌ ಕಸ್ಟೋಡಿಯನ್‌ ಆಗಿದ್ದು, ರೂಟ್‌ ಸಂಖ್ಯೆ-1ರಲ್ಲಿ ಕೆಲಸ ಮಾಡುತ್ತಿದ್ದ. ಮೇ 1ರಂದು ಕೆಲವು ಬ್ಯಾಂಕುಗಳಿಗೆ ಹಣ ತುಂಬುವ ಕೆಲಸ ಮಾಡಿದ್ದ. ಆದರೆ ಮೇ 2ರಂದು ಏಕಾಏಕಿ ಕೆಲಸಕ್ಕೆ ಗೈರಾಗಿದ್ದ. ಈ ಹಿನ್ನೆಲೆಯಲ್ಲಿ ಇತರೆ ಕಸ್ಟೋಡಿಯನ್‌ಗಳಾದ ಸಮೀರ್‌ ಮತ್ತು ನವೀನ್‌ ಅವರನ್ನು ರೂಟ್‌ ಸಂಖ್ಯೆ-1ರಲ್ಲಿ ಕೆಲಸಕ್ಕೆ ತೆರಳಿದ್ದರು. ಸಿಬ್ಬಂದಿ ಲ್ಯಾಂಗ್‌ಫೋರ್ಡ್‌ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್‌ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಎಟಿಎಂ ಕೇಂದ್ರದಿಂದ 47.83 ಲಕ್ಷ ದುರುಪಯೋಗ ಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಅದೇ ರೀತಿ ರತ್ನಾಕರ ಸಹಕಾರ ಬ್ಯಾಂಕ್‌ ಎಟಿಎಂನಲ್ಲಿ 51.30 ಲಕ್ಷ ಲಪಟಾಯಿಸಿರುವುದು ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಸಿಬ್ಬಂದಿ ಮ್ಯಾನೇಜರ್‌ ರಾಜು ಗಮನಕ್ಕೆ ತಂದಿದ್ದರು. ಸೆಕ್ಯೂರಿಟಿ ವಾಲ್ಯೂ ಕಂಪನಿಯ ಸಿಬ್ಬಂದಿಯೇ ಹಣ ಲಪಟಾಯಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆರೋಪಿ ಕಿಶೋರ್‌ ಕುಮಾರ್‌ ಮೊಬೈಲ್‌ ಕೂಡ ಸ್ವಿಚ್‌ಆಫ್‌ ಆಗಿತ್ತು. ಕೂಡಲೇ ಸಂಸ್ಥೆಯವರು ಎಟಿಎಂ ಕೇಂದ್ರದಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಕಿಶೋರ್‌ಕುಮಾರ್‌ ತನ್ನ ಸ್ನೇಹಿತನ ಜತೆ ಸೇರಿ 99.13 ಲಕ್ಷ ಲಪಟಾಯಿಸಿರುವುದು ಗೊತ್ತಾಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು